Featured

ನಾವು ಯುದ್ಧದಿಂದ ಸ್ವಾತಂತ್ರ್ಯ ಪಡೆದಿಲ್ಲ, ಶಾಂತಿಯಿಂದ ಗೆದ್ದಿದ್ದು : ಕೆ. ಹೆಚ್ ಮುನಿಯಪ್ಪ – vishwanews24

ನಾವು ಯುದ್ಧದಿಂದ ಸ್ವಾತಂತ್ರ್ಯ ಪಡೆದಿಲ್ಲ, ಶಾಂತಿಯಿಂದ ಗೆದ್ದಿದ್ದು : ಕೆಹೆಚ್ ಮುನಿಯಪ್ಪ

ಕೋಲಾರ: ನಾವು ಯುದ್ಧದಿಂದ ಸ್ವಾತಂತ್ರ್ಯ ಪಡೆದಿಲ್ಲ, ಶಾಂತಿಯಿಂದ ಯುದ್ಧ ಗೆದ್ದಿದ್ದು, ಹೀಗಾಗಿ ನಾವು ಶಾಂತಿಯಿಂದಲೇ ಸಾಧನೆ ಮಾಡಬೇಕು ಎಂದು ಆಹಾರ ಸಚಿವ ಕೆಹೆಚ್ ಮುನಿಯಪ್ಪ  ತಿಳಿಸಿದರು.

ಮಾಧ್ಯಮದವರೊಂದಿಗೆ ಮಾತನಾಡಿ ಪಾಕ್  ಮತ್ತು ಭಾರತದ  ನಡುವೆ ಕದನ ವಿರಾಮ ಘೋಷಣೆ ಮಾಡಿರುವುದರಲ್ಲಿ ಅಮೆರಿಕಕ್ಕೆ ಮಹತ್ವ ಸ್ಥಾನವಿದೆಯಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮ ದೇಶದಲ್ಲಿ ಬ್ರಿಟಿಷರು 200 ವರ್ಷ ರಾಜ್ಯಭಾರ ಮಾಡಿದರು. ಆಗ ಅವರನ್ನು ನಾವು ಯುದ್ಧದಿಂದ ಗೆದ್ದಿಲ್ಲ, ಶಾಂತಿಯಿಂದ ಗೆದಿದ್ದು, ಗಾಂಧೀಜಿಯವರು ನಾವು ಶಾಂತಿಯಿಂದ ಸಾಧನೆ ಮಾಡಬೇಕೆಂದು ಹೇಳಿದ್ದಾರೆ. ಭಯೋತ್ಪಾದಕರು ವಿನಾಕಾರಣ ನಮ್ಮ ಜನರ ಮೇಲೆ ದಾಳಿ ಮಾಡಿದ್ದಕ್ಕೆ ಸಂಘರ್ಷ ಉಂಟಾಗುತ್ತಿದೆ. ನಾವು ಪಾಕಿಸ್ತಾನ ಮೇಲೆ ಯುದ್ಧ ಮಾಡಿಲ್ಲ, ನಾಗರಿಕರ ಮೇಲೆ ದಾಳಿ ಮಾಡಿಲ್ಲ, ಆದರೆ ಭಾರತೀಯ ಸೇನೆ ಭಯೋತ್ಪಾದಕರ ಮೇಲೆ ಪ್ರಹಾರ ಮಾಡಿದ್ದಾರೆ ಎಂದರು.

ವ್ಯಾಜ್ಯ ಆಗುವಾಗ ಹಿರಿಯರೊಬ್ಬರು ಬಂದು ಯುದ್ಧ ಬೇಡವೆಂದಾಗ ಅವರಿಗೆ ಗೌರವ ಕೊಡಬೇಕು, ಭಾರತದ ಪ್ರಧಾನಿಯವರು ಅಮೆರಿಕ ದೇಶಕ್ಕೆ ಗೌರವ ಕೊಟ್ಟಿದ್ದಾರೆ. ಭಾರತ ದೇಶ ನಾಗರಿಕರನ್ನು ಕಳೆದುಕೊಂಡಿದೆ, ಕಲಹದಿಂದ, ಯುದ್ಧದಿಂದ ಸಾಧನೆ ಮಾಡಲು ಸಾಧ್ಯವಿಲ್ಲ, ನಾವೆಲ್ಲರೂ ಮಾನವರು, ಮಾನವರಾಗಿ ಬಾಳೋಣ, ಅವರವರ ಧರ್ಮ ಅವರು ಪಾಲನೆ ಮಾಡಿಕೊಳ್ಳಲಿ ಎಂದು ತಿಳಿಸಿದರು.

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

19 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

19 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

2 days ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

2 days ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

2 days ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

2 days ago