ಬೆಂಗಳೂರು : “ಮಕ್ಕಳು, ಫ್ಯಾಮಿಲಿ ಹೇಗೆ ನೋಡ್ತಾರೋ, ನಾವು ರಾಜಕಾರಣಿಗಳೆಂದು ಹೇಳಿಕೊಳ್ಳಲು ಅಸಹ್ಯವಾಗುತ್ತಿದೆ” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಜನರು ನಮ್ಮನ್ನು ಛೀ, ಥೂ ಎಂದು ಉಗಿಯುತ್ತಿದ್ದಾರೆ. ಯಡಿಯೂರಪ್ಪನವರು ಭ್ರಷ್ಟಾ ಎಂದು ಆ ವಿಡಿಯೋದಲ್ಲಿ ಹೇಳಿದ್ದಾರೆ. ಈ ಬಗ್ಗೆ ಯಡಿಯೂರಪ್ಪ ಹಾಗೂ ನಳಿನ್ ಕುಮಾರ್ ಕಟೀಲ್ ಅವರ ಉತ್ತರಿಸಬೇಕು. ನಾವು ಉತ್ತರ ಕೊಡುವ ಕಾಲ ಬರುತ್ತದೆ” ಎಂದಿದ್ದಾರೆ.
ಇನ್ನೊಂದೆಡೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸಹೋದರನ ಪರ ಬ್ಯಾಟಿಂಗ್ ಮಾಡಿದ್ದು, “ಸಿಡಿಯನ್ನು ಬಿಜೆಪಿಯವರು ರಿಲೀಸ್ ಮಾಡಿಸಿಲ್ಲ. ಬದಲಾಗಿ ಪ್ರಭಾವಿ ರಾಜಕಾರಣಿ ಇದ್ದಾರೆ. ಸಿಡಿ ರಿಲೀಸ್ ಮಾಡಿದವರು ವಿರುದ್ದ ನೂರು ಕೋಟಿ ಮಾನನಷ್ಟ ಮೊಕದ್ದಮೆ ಹಾಕಲು ತೀರ್ಮಾನ ಮಾಡಿದ್ದೇವೆ. ಈ ವಿಚಾರದ ಬಗ್ಗೆ ತನಿಖೆಯಾಗಲೇ ಬೇಕು. ರಮೇಶ್ ಜಾರಕಿಹೊಳಿ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಬಾರದು. ತನಿಖೆಯಾದ ಬಳಿಕ ರಾಜೀನಾಮೆ ನೀಡಿ ಹೊರ ಹೋಗಲಿ” ಎಂದಿದ್ದಾರೆ.
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…
ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ ಬೆಂಗಳೂರು: ಪ್ರಧಾನಿ ಕುರ್ಚಿಯ…