ಬೆಂಗಳೂರು: ನಾವು ವಿಶ್ವಾಸಮತ ಯಾಚನೆಗೆ ಮಾಡುವುದಕ್ಕೆ ಮುಂದಾಗಿದ್ದೇವೆ. ಗೆಲ್ಲುತ್ತೇವೆ ಎಂಬ ವಿಶ್ವಾಸವೂ ಇದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದರು
ಕೆಕೆ ಗೆಸ್ಟ್ ಹೌಸ್ ಬಳಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬೇಗ್ ಗೆ ವಿಶೇಷ ವಿಮಾನದ ವ್ಯವಸ್ಥೆ ಮಾಡಿಸಿ ಬಿಜೆಪಿ ನಾಯಕರೇ ಅವರ ಜೊತೆಗೆ ಇದ್ದರು. ಬಿಜೆಪಿ ಯಾವ ಮಟ್ಟಕ್ಕೆ ಇಳಿದಿದೆ ಎಂದು ಇದರಿಂದ ಸ್ಪಷ್ಟವಾಗಿ ಗೊತ್ತಾಗ್ತಿದೆ. ಅವರಿಗೆ ಸರ್ಕಾರ ಉರುಳಿಸಬೇಕು ಎಂಬುದೇ ಉದ್ದೇಶವಾಗಿದೆ ಎಂದು ದೂರಿದರು.
ಐಎಂಎ ಪ್ರಕರಣದಲ್ಲಿ ಬಿಜೆಪಿ ಹೋರಾಟ ನಡೆಸಿತ್ತು. ಈಗ ರೋಷನ್ ಬೇಗ್ ಅವರನ್ನು ಕರೆದುಕೊಂಡು ಹೋಗುವ ಪ್ರಯತ್ನವನ್ನು ಬಿಜೆಪಿ ನಾಯಕರು ಮಾಡಿದ್ದಾರೆ. ರೋಷನ್ ಬೇಗ್ ಮೇಲೆ ಬಿಜೆಪಿಗೆ ಯಾಕೆ ಇಷ್ಟೊಂದು ಪ್ರೀತಿ ಎಂದು ಗೊತ್ತಿಲ್ಲ ಎಂದು ಗುಂಡೂರಾವ್ ಹೇಳಿದರು.
ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರ ಹೇಳಿಕೆಯೇ ಸಾಕು. ನಮ್ಮ ಶಾಸಕರನ್ನು ಸೆಳೆಯಲು ಎಂತಹ ಕೆಲಸ ಮಾಡಿದ್ದಾರೆ ಎಂದು ಆ ಹೇಳಿಕೆ ಹಿಂದೆ ಏನ್ ಇದೆ ಅಂತ ಗೊತ್ತಾಗ್ತಿದೆ ಎಂದರು.
ನಾವು ವಿಶ್ವಾಸಮತಯಾಚನೆ ಮಾಡುವುದಕ್ಕೆ ಮುಂದಾಗಿದ್ದೇವೆ, ನಮಗೆ ವಿಶ್ವಾಸ ಇದೆ. ನಮ್ಮಲ್ಲಿ ಗೊಂದಲ ಇರಬಾರದು ಅದಕ್ಕೆ ನಾವು ವಿಶ್ವಾಸಮತಯಾಚನೆಗೆ ಮುಂದಾಗಿದ್ದೇವೆ. ನಮಗೆ ವಿಶ್ವಾಸ ಇದೆ ನಾವು ಗೆಲ್ಲುತ್ತೇವೆ . ಸುಪ್ರೀಂಕೋರ್ಟ್ ತೀರ್ಪಿನ ಮೇಲೆ ರಾಜ್ಯದ ರಾಜಕೀಯ ಬೆಳವಣಿಗೆ ನಿಂತಿದೆ ಎಂದು ಹೇಳಿದರು ..
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…