ಬೆಂಗಳೂರು: ನಾವು ವಿಶ್ವಾಸಮತ ಯಾಚನೆಗೆ ಮಾಡುವುದಕ್ಕೆ ಮುಂದಾಗಿದ್ದೇವೆ. ಗೆಲ್ಲುತ್ತೇವೆ ಎಂಬ ವಿಶ್ವಾಸವೂ ಇದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದರು
ಕೆಕೆ ಗೆಸ್ಟ್ ಹೌಸ್ ಬಳಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬೇಗ್ ಗೆ ವಿಶೇಷ ವಿಮಾನದ ವ್ಯವಸ್ಥೆ ಮಾಡಿಸಿ ಬಿಜೆಪಿ ನಾಯಕರೇ ಅವರ ಜೊತೆಗೆ ಇದ್ದರು. ಬಿಜೆಪಿ ಯಾವ ಮಟ್ಟಕ್ಕೆ ಇಳಿದಿದೆ ಎಂದು ಇದರಿಂದ ಸ್ಪಷ್ಟವಾಗಿ ಗೊತ್ತಾಗ್ತಿದೆ. ಅವರಿಗೆ ಸರ್ಕಾರ ಉರುಳಿಸಬೇಕು ಎಂಬುದೇ ಉದ್ದೇಶವಾಗಿದೆ ಎಂದು ದೂರಿದರು.
ಐಎಂಎ ಪ್ರಕರಣದಲ್ಲಿ ಬಿಜೆಪಿ ಹೋರಾಟ ನಡೆಸಿತ್ತು. ಈಗ ರೋಷನ್ ಬೇಗ್ ಅವರನ್ನು ಕರೆದುಕೊಂಡು ಹೋಗುವ ಪ್ರಯತ್ನವನ್ನು ಬಿಜೆಪಿ ನಾಯಕರು ಮಾಡಿದ್ದಾರೆ. ರೋಷನ್ ಬೇಗ್ ಮೇಲೆ ಬಿಜೆಪಿಗೆ ಯಾಕೆ ಇಷ್ಟೊಂದು ಪ್ರೀತಿ ಎಂದು ಗೊತ್ತಿಲ್ಲ ಎಂದು ಗುಂಡೂರಾವ್ ಹೇಳಿದರು.
ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರ ಹೇಳಿಕೆಯೇ ಸಾಕು. ನಮ್ಮ ಶಾಸಕರನ್ನು ಸೆಳೆಯಲು ಎಂತಹ ಕೆಲಸ ಮಾಡಿದ್ದಾರೆ ಎಂದು ಆ ಹೇಳಿಕೆ ಹಿಂದೆ ಏನ್ ಇದೆ ಅಂತ ಗೊತ್ತಾಗ್ತಿದೆ ಎಂದರು.
ನಾವು ವಿಶ್ವಾಸಮತಯಾಚನೆ ಮಾಡುವುದಕ್ಕೆ ಮುಂದಾಗಿದ್ದೇವೆ, ನಮಗೆ ವಿಶ್ವಾಸ ಇದೆ. ನಮ್ಮಲ್ಲಿ ಗೊಂದಲ ಇರಬಾರದು ಅದಕ್ಕೆ ನಾವು ವಿಶ್ವಾಸಮತಯಾಚನೆಗೆ ಮುಂದಾಗಿದ್ದೇವೆ. ನಮಗೆ ವಿಶ್ವಾಸ ಇದೆ ನಾವು ಗೆಲ್ಲುತ್ತೇವೆ . ಸುಪ್ರೀಂಕೋರ್ಟ್ ತೀರ್ಪಿನ ಮೇಲೆ ರಾಜ್ಯದ ರಾಜಕೀಯ ಬೆಳವಣಿಗೆ ನಿಂತಿದೆ ಎಂದು ಹೇಳಿದರು ..
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…