ಮಂಗಳೂರು, : “ಸರ್ಕಾರ ಸದ್ಯಕ್ಕೆ ಸುಭದ್ರವಾಗಿದೆ. ಯಾವುದೇ ಆತಂಕ ನಮಗಿಲ್ಲ. ಅತೃಪ್ತರು, ನಾವೆಲ್ಲರೂ ಅಣ್ಣ ತಮ್ಮಂದಿರಂತೆ ಇದ್ದೇವೆ. ವಿಶ್ವಾಸಮತ ಗಳಿಸುವ ನಂಬಿಕೆಯಿದೆ. ಕುಟುಂಬದಲ್ಲಿ ಸಣ್ಣಪುಟ್ಟ ಭೇದ ಭಾವ ಸಹಜ. ಇಲ್ಲೂ ಹಾಗೆಯೇ. ಅವೆಲ್ಲಾ ಸರಿಯಾಗುತ್ತವೆ” ಎಂದು ಹೇಳಿಕೆ ನೀಡಿದ್ದಾರೆ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್.
ಅತೃಪ್ತ ಶಾಸಕರು, ನಾಳೆ ನಡೆಯುವ ವಿಶ್ವಾಸಮತ ಯಾಚನೆಯಲ್ಲಿ ಭಾಗವಹಿಸಲೇಬೇಕು ಎಂದು ವಿಪ್ ಮೂಲಕ ಒತ್ತಾಯ ಮಾಡುವಂತಿಲ್ಲ ಎಂದು ಇಂದು ಸುಪ್ರೀಂಕೋರ್ಟ್ ಆದೇಶ ನೀಡಿದೆ. ಈ ತೀರ್ಪು ಬಂದ ಮೇಲೆ, ವಿಶ್ವಾಸಮತ ಯಾಚನೆವರೆಗೂ ಕಾಯದೇ ಕುಮಾರಸ್ವಾಮಿ ರಾಜೀನಾಮೆ ನೀಡಬೇಕು, ಅವರಿಗೆ ಸೋಲು ಕಟ್ಟಿಟ್ಟ ಬುತ್ತಿ ಎಂದು ಬಿಜೆಪಿಯವರೂ ಒತ್ತಾಯಿಸಿದ್ದಾರೆ.
“ನಾಳೆ ವಿಶ್ವಾಸಮತ ಸಾಬೀತಿಗೆ ಅವಕಾಶವಿದೆ. ಎಲ್ಲವೂ ಸುಸುತ್ರವಾಗಿ ನಡೆಯಲಿದೆ. ನಮ್ಮಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಅಂದು ಬೇರೆ ಬೇರೆ ಇಲ್ಲ. ನಮ್ಮ ಸರ್ಕಾರ ಒಂದೇ, ಅದೇ ಸಮ್ಮಿಶ್ರ ಸರ್ಕಾರ. ನಾವು ವಿಶ್ವಾಸ ಮತ ಗೆಲ್ಲುತ್ತೇವೆ. ಪ್ರಜಾಪ್ರಭುತ್ವದ ಅನುಸಾರ ಆಯ್ಕೆಯಾದವರು ನಾವು. ನಮ್ಮನ್ನು ಯಾರೂ ಏನೂ ಮಾಡಲು ಆಗುವುದಿಲ್ಲ ಎಂದು ಕರ್ನಾಟಕದಿಂದ ಇಡೀ ದೇಶಕ್ಕೆ ಸಂದೇಶ ಹೋಗುತ್ತದೆ” ಎಂದು ಆತ್ಮವಿಶ್ವಾಸದಿಂದ ಹೇಳಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…