ಮಂಗಳೂರು, : “ಸರ್ಕಾರ ಸದ್ಯಕ್ಕೆ ಸುಭದ್ರವಾಗಿದೆ. ಯಾವುದೇ ಆತಂಕ ನಮಗಿಲ್ಲ. ಅತೃಪ್ತರು, ನಾವೆಲ್ಲರೂ ಅಣ್ಣ ತಮ್ಮಂದಿರಂತೆ ಇದ್ದೇವೆ. ವಿಶ್ವಾಸಮತ ಗಳಿಸುವ ನಂಬಿಕೆಯಿದೆ. ಕುಟುಂಬದಲ್ಲಿ ಸಣ್ಣಪುಟ್ಟ ಭೇದ ಭಾವ ಸಹಜ. ಇಲ್ಲೂ ಹಾಗೆಯೇ. ಅವೆಲ್ಲಾ ಸರಿಯಾಗುತ್ತವೆ” ಎಂದು ಹೇಳಿಕೆ ನೀಡಿದ್ದಾರೆ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್.
ಅತೃಪ್ತ ಶಾಸಕರು, ನಾಳೆ ನಡೆಯುವ ವಿಶ್ವಾಸಮತ ಯಾಚನೆಯಲ್ಲಿ ಭಾಗವಹಿಸಲೇಬೇಕು ಎಂದು ವಿಪ್ ಮೂಲಕ ಒತ್ತಾಯ ಮಾಡುವಂತಿಲ್ಲ ಎಂದು ಇಂದು ಸುಪ್ರೀಂಕೋರ್ಟ್ ಆದೇಶ ನೀಡಿದೆ. ಈ ತೀರ್ಪು ಬಂದ ಮೇಲೆ, ವಿಶ್ವಾಸಮತ ಯಾಚನೆವರೆಗೂ ಕಾಯದೇ ಕುಮಾರಸ್ವಾಮಿ ರಾಜೀನಾಮೆ ನೀಡಬೇಕು, ಅವರಿಗೆ ಸೋಲು ಕಟ್ಟಿಟ್ಟ ಬುತ್ತಿ ಎಂದು ಬಿಜೆಪಿಯವರೂ ಒತ್ತಾಯಿಸಿದ್ದಾರೆ.
“ನಾಳೆ ವಿಶ್ವಾಸಮತ ಸಾಬೀತಿಗೆ ಅವಕಾಶವಿದೆ. ಎಲ್ಲವೂ ಸುಸುತ್ರವಾಗಿ ನಡೆಯಲಿದೆ. ನಮ್ಮಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಅಂದು ಬೇರೆ ಬೇರೆ ಇಲ್ಲ. ನಮ್ಮ ಸರ್ಕಾರ ಒಂದೇ, ಅದೇ ಸಮ್ಮಿಶ್ರ ಸರ್ಕಾರ. ನಾವು ವಿಶ್ವಾಸ ಮತ ಗೆಲ್ಲುತ್ತೇವೆ. ಪ್ರಜಾಪ್ರಭುತ್ವದ ಅನುಸಾರ ಆಯ್ಕೆಯಾದವರು ನಾವು. ನಮ್ಮನ್ನು ಯಾರೂ ಏನೂ ಮಾಡಲು ಆಗುವುದಿಲ್ಲ ಎಂದು ಕರ್ನಾಟಕದಿಂದ ಇಡೀ ದೇಶಕ್ಕೆ ಸಂದೇಶ ಹೋಗುತ್ತದೆ” ಎಂದು ಆತ್ಮವಿಶ್ವಾಸದಿಂದ ಹೇಳಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…