ಬೆಂಗಳೂರು : ನನಗೂ ಹಾಗೂ ಸಿದ್ಧರಾಮಯ್ಯ ನಡುವೆ ಯಾವುದೇ ಶತೃತ್ವವಿದೆ ಎಂದು ಅನಗತ್ಯವಾದ ಗೊಂದಲ ಉಂಟು ಮಾಡುವುದು ಸರಿಯಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರು ಸ್ಪಷ್ಟಪಡಿಸಿದರು.
ಸದಾಶಿವನಗರ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ಅವರ ವಿಚಾರಣೆ ವೇಳೆ ನನಗೆ ಆರೋಗ್ಯ ಹದಗೆಟ್ಟಿದ್ದ ಕಾರಣ ಅವರನ್ನು ಭೇಟಿ ಮಾಡಲು ಸಾಧ್ಯವಾಗಿರಲಿಲ್ಲ. ಹೀಗಾಗಿ ದೆಹಲಿಗೆ ತೆರಳಿ ಅವರ ಆರೋಗ್ಯ ಹಾಗೂ ಪರಿಸ್ಥಿತಿ ವಿಚಾರಿಸಿದೆ. ಇದೇ ಸಂದರ್ಭದಲ್ಲಿ ಸೋನಿಯಾಗಾಂಧಿ ಅವರನ್ನು ಭೇಟಿ ಮಾಡಿದೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಬಲವಾಗಿದೆ. ಅದನ್ನು ಇನ್ನಷ್ಟು ಬಲಿಷ್ಠಗೊಳಿಸಿ ಎಂದು ಸೋನಿಯಾಗಾಂಧಿ ಅವರು ಸಲಹೆ ನೀಡಿದರು. ಇದು ಬಿಟ್ಟರೆ ಬೇರಾವುದನ್ನು ಚರ್ಚೆ ಮಾಡಲಿಲ್ಲ. ಎಂದರು.
ಸಿದ್ದರಾಮಯ್ಯ ಹಾಗೂ ನನ್ನ ನಡುವೆ ಶತೃತ್ವ ಇರುವಂತೆ ಬಿಂಬಿಸಿರುವ ಹಿಂದೆ ಯಾರದ್ದೋ ಕೈವಾಡವಿದೆ ಎಂದೆನಿಸುತ್ತದೆ. ನಾನು ಮೂಲತಹ ಕಾಂಗ್ರೆಸ್ನವನು. ಕೊನೆಯವರೆಗೂ ಇಲ್ಲಿಯೇ ಉಳಿಯುತ್ತೇವೆ. ಕಾಂಗ್ರೆಸ್ನಲ್ಲಿ ಇರುವ ಪ್ರತಿಯೊಬ್ಬರೂ ಪಕ್ಷದ ಸಿದ್ಧಾಂತವನ್ನು ಒಪ್ಪಿದವರೇ ಆಗಿದ್ದಾರೆ. ಇಲ್ಲಿ ಹೊರಗಿಂದ ಬಂದವರು, ಮೂಲ ಕಾಂಗ್ರೆಸ್ನವರು ಎಂಬ ಬೇಧವಿಲ್ಲ. ಇಲ್ಲಿ ಎಲ್ಲರೂ ಕಾಂಗ್ರೆಸ್ನವರೆ. ನಮ್ಮೆಲ್ಲರ ನಡುವೆ ಯಾವುದೇ ಭಿನ್ನಮತವಿಲ್ಲ ಎಂದು ಹೇಳಿದರು.
ನಾವೆಲ್ಲಾ ಒಟ್ಟಿಗೆ ಪಕ್ಷ ಕಟ್ಟಿ ಮತ್ತೆ ಅಧಿಕಾರಕ್ಕೆ ತರುವತ್ತ ಕೆಲಸ ಮಾಡಲಿದ್ದೇವೆ. ಒಬ್ಬರೇ ಪಕ್ಷ ಬೆಳೆಸುತ್ತೇವೆ ಎಂದುಕೊಳ್ಳುವುದು ತಪ್ಪು. ನಮ್ಮೆಲ್ಲರ ಮಧ್ಯೆ ಆ ಒಮ್ಮತವಿದೆ ಎಂದು ಸ್ಪಷ್ಟಪಡಿಸಿದರು.
ಬಂಟ್ವಾಳ: ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಯುವತಿಯ ಭೀಕರ ಹತ್ಯೆ ಬಂಟ್ವಾಳ : ಯುವತಿಯೊಬ್ಬಳನ್ನು ಚಾಕುವಿಂದ ಹತ್ಯೆ ಮಾಡಿದ ಘಟನೆ ಜುಲೈ…
ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್…
ಭಟ್ಕಳ: ಬೈಕಿಗೆ ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…
ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…
ಉಡುಪಿ : ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…
ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…