Featured

ನಾವೆಲ್ಲಾ ಬ್ರದರ್ಸ್ ಥರ ಕೆಲಸ ಮಾಡ್ತೀವಿ; ನಮ್ಮಲ್ಲಿ ಯಾವುದೇ ಗುಂಪು ಇಲ್ಲ : ಡಿಕೆಶಿ – vishwanews24

ನಾನು ಸಿದ್ದರಾಮಯ್ಯ ಬ್ರದರ್ಸ್ ರೀತಿ ಕೆಲಸ ಮಾಡ್ತೇವೆ, 140 ಶಾಸಕರು ನನ್ನ ಜೊತೆಗಿದ್ದಾರೆ: ಡಿಕೆಶಿ

ಬೆಂಗಳೂರು: ಕರ್ನಾಟಕ ಉಪಮುಖ್ಯಮಂತ್ರಿ ಡಿಕೆಶಿ ಅವರು ನಗರದ ವಿಧಾನಸೌಧದಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ತಮ್ಮ ಮತ್ತು ಸಿಎಂ ಸಿದ್ದರಾಮಯ್ಯರ ನಡುವೆ ಯಾವುದೇ ಗುಂಪಿನ ಉದ್ಭವ ಇಲ್ಲವೆಂದು ಪುನಃ ಒತ್ತಿ ಹೇಳಿದ್ದಾರೆ.

ವಿಧಾನಸೌಧದ ನಿರ್ಮಾತೃ ಕೆಂಗಲ್ ಹನುಮಂತಯ್ಯನವರ ಪುಣ್ಯತಿಥಿ ಸಂದರ್ಭದಲ್ಲಿ ಡಿಕೆಶಿ ಹನುಮಂತಯ್ಯನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನ ಸಲ್ಲಿಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ನಾವೆಲ್ಲಾ ಬ್ರದರ್ಸ್ ಥರ ಕೆಲಸ ಮಾಡ್ತೀವಿ. ನಮ್ಮಲ್ಲಿ ಯಾವುದೇ ಗುಂಪು ಇಲ್ಲ. ನಾವೆಲ್ಲ ಹುಟ್ಟುವಾಗ ಒಬ್ಬರೇ, ಸಾಯುವಾಗಲೂ ಒಬ್ಬರೇ. ಸಿದ್ದರಾಮಯ್ಯನೊಬ್ಬ ಗುಂಪಾಗಿರೋರು, ಡಿಕೆಶಿ ಗುಂಪು ಅಂತ ತೋರಿಸಬೇಡಿ,” ಎಂದು ಹೇಳಿದರು.

ಮುಂದುವರಿದು, ಅವರು ಕಳೆದ ನಾಯಕರು ಮಾಡಿರುವ ನಗರಾಭಿವೃದ್ಧಿ ಕಾರ್ಯಗಳನ್ನು ಉಲ್ಲೇಖಿಸಿ, “ಹನುನಂತಯ್ಯ ವಿಧಾನಸೌಧ ಕಟ್ಟಿದ್ರು, ಎಸ್.ಎಂ ಕೃಷ್ಣ ವಿಕಾಸಸೌಧ ಕಟ್ಟಿದ್ರು, ಕೆಂಪೇಗೌಡ ಬೆಂಗಳೂರನ್ನು ನಿರ್ಮಿಸಿದ್ದಾರೆ. ಅಧಿಕಾರ ಸಿಕ್ಕಿದಾಗ ಇವರೆಲ್ಲ ಸಾಕ್ಷಿಗುಡ್ಡೆ ಬಿಟ್ ಹೋಗಿದ್ದಾರೆ. ನಾವೂ ಅದೇ ರೀತಿಯಲ್ಲಿ ಕೆಲಸ ಮಾಡಬೇಕು,” ಎಂದರು.

ಡಿಕೆಶಿ, ತಮ್ಮ ಪಕ್ಷದ 140 ಮಂದಿ ಶಾಸಕರೊಂದಿಗೆ ಒಟ್ಟಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು. “ನಾವು ಬ್ರೇಕ್‌ಫಾಸ್ಟ್ ಮೀಟಿಂಗ್ ಆಯೋಜಿಸುತ್ತೇವೆ, ನಮ್ಮಲ್ಲಿ ಯಾವುದಕ್ಕೂ ಒತ್ತಡವಿಲ್ಲ. ಯಾವುದೇ ಗುಂಪು ಇಲ್ಲ,” ಎಂದು ಸ್ಪಷ್ಟಪಡಿಸಿದರು.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

1 day ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

2 days ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago