ಬೆಂಗಳೂರು: ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ , ನನ್ನ ಪ್ರಕಾರ ದಸ್ತಗಿರಿ ಮಾಡುವುದೇ ದೊಡ್ಡ ಅಪರಾಧವಾಗಿದೆ. ಕೊಲೆ, ದರೋಡೆ ಮಾಡಿದವರು ಸಾಕ್ಷಿ ನಾಶ ಮಾಡುತ್ತಾರೆ ಎಂದು ದಸ್ತಗಿರಿ ಮಾಡುತ್ತಾರೆ. ಈ ದಸ್ತಗಿರಿ ರಾಜಕೀಯ ಪ್ರೇರಿತವಾಗಿದೆ. ಚಿದಂಬರಂ ಹಾಗೂ ಡಿಕೆಶಿ ಇಬ್ಬರ ಬಂಧನವೂ ರಾಜಕೀಯ ಪ್ರೇರಿತವಾಗಿದ್ದು, ಇದು ಒಳ್ಳೆಯದಲ್ಲ ಎಂದು ಕಿಡಿಕಾರಿದರು.
ರಾಜಕೀಯ ಪ್ರೇರಿತ, ದ್ವೇಷದಿಂದ ಕೂಡಿದೆ. ತಪ್ಪು ಮಾಡಿದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಿ. ಸಮನ್ಸ್ ಕೊಟ್ಟು ಅಟೆಂಡ್ ಆಗದೆ ಹೋದರೆ ದಸ್ತಗಿರಿ ಮಾಡಲಿ. ಆದರೆ ಡಿಕೆಶಿ ಕರೆದಾಗೆಲ್ಲ ಹೋಗಿದ್ದಾರೆ. ಹಬ್ಬದ ದಿನವೂ ಬಿಟ್ಟಿಲ್ಲ. ಪಾಪ ಡಿಕೆಶಿ ಕಣ್ಣೀರೇ ಹಾಕಿಬಿಟ್ಟರು. ಎಷ್ಟು ಅಮಾನವೀಯ ಇದು ಎಂದು ಪ್ರಶ್ನಿಸಿದ್ದಾರೆ.
ನಾಲ್ಕು ದಿನವೂ ಇಡಿ ವಿಚಾರಣೆಗೆ ಡಿಕೆಶಿ ಹೋಗಿದ್ದಾರೆ. ಸಂಪೂರ್ಣ ರಾಜಕೀಯ ಸೇಡಿನ ಕ್ರಮ ಇದು. ಕಾಂಗ್ರೆಸ್ ಪಕ್ಷ ಇದನ್ನು ಸಹಿಸುವುದಿಲ್ಲ. ಪಕ್ಷದ ವತಿಯಿಂದ ಹೋರಾಟ ಮಾಡುತ್ತೇವೆ. ನಾವೆಲ್ಲ ಡಿಕೆಶಿ ಜೊತೆಗಿದ್ದೇವೆ. ರಾಜಕೀಯವಾಗಿ, ಕಾನೂನಾತ್ಮಕವಾಗಿ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದ್ದಾರೆ.
ಮತ್ತಷ್ಟು ಕೈ ಮುಖಂಡರನ್ನ ಕೇಂದ್ರ ಟಾರ್ಗೆಟ್ ಮಾಡಿರೋ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಮಾಡಲಿ, ಕಾಂಗ್ರೆಸ್ ಅದಕ್ಕೆಲ್ಲ ಹೆದರಲ್ಲ. ಇದು ಜನರಿಗೆ ಅರ್ಥವಾಗುತ್ತಿದೆ. ರಾಷ್ಟ್ರ ಮತ್ತು ರಾಜ್ಯದಲ್ಲೂ ಈ ಬಗ್ಗೆ ಕಾಂಗ್ರೆಸ್ ಧ್ವನಿ ಎತ್ತಲಿದೆ ಎಂದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…