Featured

ನಾವೇನಾದರೂ ಬಿಜೆಪಿಯ ‘ಬಿ ಟೀಂ’ ಆಗಿದ್ದರೆ, ಕಾಂಗ್ರೆಸ್‌ನೊಂದಿಗೆ ಸರ್ಕಾರವನ್ನೇ ಮಾಡುತ್ತಿರಲಿಲ್ಲ : ಹೆಚ್‌ಡಿ ಕುಮಾರಸ್ವಾಮಿ -Vishwanews24

ನಾವೇನಾದರೂ ಬಿಜೆಪಿಯ ‘ಬಿ ಟೀಂ’ ಆಗಿದ್ದರೆ, ಕಾಂಗ್ರೆಸ್‌ನೊಂದಿಗೆ ಸರ್ಕಾರವನ್ನೇ ಮಾಡುತ್ತಿರಲಿಲ್ಲ : ಹೆಚ್‌ಡಿ ಕುಮಾರಸ್ವಾಮಿ -Vishwanews24

ಮತ್ತೊಂದು ಪಕ್ಷದೊಂದಿಗೆ ವಿಲೀನ ಮಾಡಿಕೊಳ್ಳುವ ಮೂಲಕ ಸ್ವಯಂ ಆತ್ಮಹತ್ಯೆ ಮಾಡಿಕೊಳ್ಳುವ ಸನ್ನಿವೇಶ ಬಂದಿಲ್ಲ, ಬರುವುದೂ ಇಲ್ಲ

ಬೆಂಗಳೂರು : ”ಮತ್ತೊಂದು ಪಕ್ಷದೊಂದಿಗೆ ವಿಲೀನ ಮಾಡಿಕೊಳ್ಳುವ ಮೂಲಕ ಸ್ವಯಂ ಆತ್ಮಹತ್ಯೆ ಮಾಡಿಕೊಳ್ಳುವ ಸನ್ನಿವೇಶ ಬಂದಿಲ್ಲ, ಬರುವುದೂ ಇಲ್ಲ” ಎಂದು ಜೆಡಿಎಸ್‌ ನಾಯಕ ಹೆಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ.

”ಜೆಡಿಎಸ್‌ ಹಾಗೂ ಬಿಜೆಪಿ ಒಳ ಒಪ್ಪಂದ ಮಾಡಿಕೊಂಡಿದೆ, ಜೆಡಿಎಸ್‌ ಬಿಜೆಪಿ ವಿಲೀನವಾಗುತ್ತದೆ” ಎಂಬ ಸುದ್ದಿಗಳಿಗೆ ಸಂಬಂಧಿಸಿ ಸರಣಿ ಟ್ವೀಟ್‌ ಮೂಲಕ ಸ್ಪಷ್ಟನೆ ನೀಡಿರುವ ಅವರು, ”ಸ್ವಾಭಿಮಾನಿ ಕನ್ನಡಿಗರ ಪಕ್ಷ ಜೆಡಿಎಸ್ ಎಂದಿಗೂ ವಿಲೀನದ ಆಲೋಚನೆ ಮಾಡುವುದಿಲ್ಲ. ಜನರ ಗಟ್ಟಿ ಧ್ವನಿಯಾದ ಜೆಡಿಎಸ್‌ ಅಂತಹ ಅವಿವೇಕತನ ಪ್ರದರ್ಶನ ಮಾಡುವುದಿಲ್ಲ. ಅಗತ್ಯವಿದ್ದಾಗ ವಿಷಯಾಧಾರಿತವಾಗಿ ಮುಂದಿನ ದಿನಗಳಲ್ಲಿ ಬಿಜೆಪಿ ಜೊತೆ ವಿಶ್ವಾಸಪೂರ್ವಕವಾಗಿ ನಡೆಯಬಹುದಷ್ಟೆ. ವಿಲೀನದಂಥ ಕಪೋಲಕಲ್ಪಿತ ಸುದ್ದಿಗಳಿಗೆ ಯಾವುದೇ ಪ್ರಾಮುಖ್ಯತೆ ಇಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

”ಜೆಡಿಎಸ್ ಬಿಜೆಪಿಯ ‘ಬಿ ಟೀಂ’ ಎಂದು ಟೀಕಿಸಿದ್ದ ಕಾಂಗ್ರೆಸ್ ಹೈಕಮಾಂಡ್ ನಮ್ಮ ಮನೆಬಾಗಿಲಿಗೆ ಬಂದು ಕಾಂಗ್ರೆಸ್ ಜೊತೆ ಸರ್ಕಾರ ರಚಿಸುವ ಆಹ್ವಾನ ನೀಡಿತ್ತು. ನಾವೇನಾದರೂ ಬಿಜೆಪಿಯ ‘ಬಿ ಟೀಂ’ ಆಗಿದ್ದರೆ, ಕಾಂಗ್ರೆಸ್‌ನೊಂದಿಗೆ ಸರ್ಕಾರವನ್ನೇ ಮಾಡುತ್ತಿರಲಿಲ್ಲ. ಅವರು ಹೇಳಿದಂತೆ ಒಳಒಪ್ಪಂದವೇನೂ ಇಲ್ಲ. ವಿಷಯಾಧಾರಿತ ಹೊಂದಾಣಿಕೆಯಷ್ಟೇ ಸಾಧ್ಯ” ಎಂದು ತಿಳಿಸಿದ್ದಾರೆ.

‘ರೈತರ ಸಾಲಮನ್ನಾ’, ‘ಬಡವರ ಬಂಧು’ ಇಂತಹ ಕಾರ್ಯಕ್ರಮಗಳನ್ನು ನೀಡಿದ, ಶಿಸ್ತುಬದ್ಧ ಆಡಳಿತ ನಡೆಸಿದ, ದೇವೇಗೌಡರ ಆಶಯದಂತೆ ನಡೆಯುತ್ತಿರುವ ಜೆಡಿಎಸ್‌ ಮೇಲೆ ಜನರ ವಿಶ್ವಾಸವಿದೆ. ಮತ್ತೊಂದು ಪಕ್ಷದೊಂದಿಗೆ ವಿಲೀನ ಮಾಡಿಕೊಳ್ಳುವ ಮೂಲಕ ಸ್ವಯಂ ಆತ್ಮಹತ್ಯೆ ಮಾಡಿಕೊಳ್ಳುವ ಸನ್ನಿವೇಶ ಬಂದಿಲ್ಲ, ಬರುವುದೂ ಇಲ್ಲ ಎಂದು ಈ ಮೂಲಕ ಸ್ಪಷ್ಟಪಡಿಸುತ್ತೇನೆ ಎಂದು ಹೇಳಿದ್ದಾರೆ.

Vishwa News 24

Recent Posts

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿ – vishwanews24

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…

33 minutes ago

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ – vishwanews24

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…

1 hour ago

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ – vishwanews24

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…

2 hours ago

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ – vishwanews24

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…

2 hours ago

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ – vishwanews24

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…

2 hours ago

ಕಣ್ಣೂರು: ಅನಸ್ತೇಶಿಯಾ ನೀಡಿ ಶಸ್ತ್ರಚಿಕಿತ್ಸೆ :  18 ತಿಂಗಳ ಮಗು ನಿಧನ  ; ವೈದ್ಯರ ವಿರುದ್ಧ ಪ್ರಕರಣ ದಾಖಲು – vishwanews24

ಕಣ್ಣೂರು: ಅನಸ್ತೇಶಿಯಾ ನೀಡಿ ಶಸ್ತ್ರಚಿಕಿತ್ಸೆ :  18 ತಿಂಗಳ ಮಗು ನಿಧನ  ; ವೈದ್ಯರ ವಿರುದ್ಧ ಪ್ರಕರಣ ದಾಖಲು ತಿರುವನಂತಪುರಂ:…

2 hours ago