Featured

ನಾವೇನಾದರೂ ಬಿಜೆಪಿಯ ‘ಬಿ ಟೀಂ’ ಆಗಿದ್ದರೆ, ಕಾಂಗ್ರೆಸ್‌ನೊಂದಿಗೆ ಸರ್ಕಾರವನ್ನೇ ಮಾಡುತ್ತಿರಲಿಲ್ಲ : ಹೆಚ್‌ಡಿ ಕುಮಾರಸ್ವಾಮಿ -Vishwanews24

ನಾವೇನಾದರೂ ಬಿಜೆಪಿಯ ‘ಬಿ ಟೀಂ’ ಆಗಿದ್ದರೆ, ಕಾಂಗ್ರೆಸ್‌ನೊಂದಿಗೆ ಸರ್ಕಾರವನ್ನೇ ಮಾಡುತ್ತಿರಲಿಲ್ಲ : ಹೆಚ್‌ಡಿ ಕುಮಾರಸ್ವಾಮಿ -Vishwanews24

ಮತ್ತೊಂದು ಪಕ್ಷದೊಂದಿಗೆ ವಿಲೀನ ಮಾಡಿಕೊಳ್ಳುವ ಮೂಲಕ ಸ್ವಯಂ ಆತ್ಮಹತ್ಯೆ ಮಾಡಿಕೊಳ್ಳುವ ಸನ್ನಿವೇಶ ಬಂದಿಲ್ಲ, ಬರುವುದೂ ಇಲ್ಲ

ಬೆಂಗಳೂರು : ”ಮತ್ತೊಂದು ಪಕ್ಷದೊಂದಿಗೆ ವಿಲೀನ ಮಾಡಿಕೊಳ್ಳುವ ಮೂಲಕ ಸ್ವಯಂ ಆತ್ಮಹತ್ಯೆ ಮಾಡಿಕೊಳ್ಳುವ ಸನ್ನಿವೇಶ ಬಂದಿಲ್ಲ, ಬರುವುದೂ ಇಲ್ಲ” ಎಂದು ಜೆಡಿಎಸ್‌ ನಾಯಕ ಹೆಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ.

”ಜೆಡಿಎಸ್‌ ಹಾಗೂ ಬಿಜೆಪಿ ಒಳ ಒಪ್ಪಂದ ಮಾಡಿಕೊಂಡಿದೆ, ಜೆಡಿಎಸ್‌ ಬಿಜೆಪಿ ವಿಲೀನವಾಗುತ್ತದೆ” ಎಂಬ ಸುದ್ದಿಗಳಿಗೆ ಸಂಬಂಧಿಸಿ ಸರಣಿ ಟ್ವೀಟ್‌ ಮೂಲಕ ಸ್ಪಷ್ಟನೆ ನೀಡಿರುವ ಅವರು, ”ಸ್ವಾಭಿಮಾನಿ ಕನ್ನಡಿಗರ ಪಕ್ಷ ಜೆಡಿಎಸ್ ಎಂದಿಗೂ ವಿಲೀನದ ಆಲೋಚನೆ ಮಾಡುವುದಿಲ್ಲ. ಜನರ ಗಟ್ಟಿ ಧ್ವನಿಯಾದ ಜೆಡಿಎಸ್‌ ಅಂತಹ ಅವಿವೇಕತನ ಪ್ರದರ್ಶನ ಮಾಡುವುದಿಲ್ಲ. ಅಗತ್ಯವಿದ್ದಾಗ ವಿಷಯಾಧಾರಿತವಾಗಿ ಮುಂದಿನ ದಿನಗಳಲ್ಲಿ ಬಿಜೆಪಿ ಜೊತೆ ವಿಶ್ವಾಸಪೂರ್ವಕವಾಗಿ ನಡೆಯಬಹುದಷ್ಟೆ. ವಿಲೀನದಂಥ ಕಪೋಲಕಲ್ಪಿತ ಸುದ್ದಿಗಳಿಗೆ ಯಾವುದೇ ಪ್ರಾಮುಖ್ಯತೆ ಇಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

”ಜೆಡಿಎಸ್ ಬಿಜೆಪಿಯ ‘ಬಿ ಟೀಂ’ ಎಂದು ಟೀಕಿಸಿದ್ದ ಕಾಂಗ್ರೆಸ್ ಹೈಕಮಾಂಡ್ ನಮ್ಮ ಮನೆಬಾಗಿಲಿಗೆ ಬಂದು ಕಾಂಗ್ರೆಸ್ ಜೊತೆ ಸರ್ಕಾರ ರಚಿಸುವ ಆಹ್ವಾನ ನೀಡಿತ್ತು. ನಾವೇನಾದರೂ ಬಿಜೆಪಿಯ ‘ಬಿ ಟೀಂ’ ಆಗಿದ್ದರೆ, ಕಾಂಗ್ರೆಸ್‌ನೊಂದಿಗೆ ಸರ್ಕಾರವನ್ನೇ ಮಾಡುತ್ತಿರಲಿಲ್ಲ. ಅವರು ಹೇಳಿದಂತೆ ಒಳಒಪ್ಪಂದವೇನೂ ಇಲ್ಲ. ವಿಷಯಾಧಾರಿತ ಹೊಂದಾಣಿಕೆಯಷ್ಟೇ ಸಾಧ್ಯ” ಎಂದು ತಿಳಿಸಿದ್ದಾರೆ.

‘ರೈತರ ಸಾಲಮನ್ನಾ’, ‘ಬಡವರ ಬಂಧು’ ಇಂತಹ ಕಾರ್ಯಕ್ರಮಗಳನ್ನು ನೀಡಿದ, ಶಿಸ್ತುಬದ್ಧ ಆಡಳಿತ ನಡೆಸಿದ, ದೇವೇಗೌಡರ ಆಶಯದಂತೆ ನಡೆಯುತ್ತಿರುವ ಜೆಡಿಎಸ್‌ ಮೇಲೆ ಜನರ ವಿಶ್ವಾಸವಿದೆ. ಮತ್ತೊಂದು ಪಕ್ಷದೊಂದಿಗೆ ವಿಲೀನ ಮಾಡಿಕೊಳ್ಳುವ ಮೂಲಕ ಸ್ವಯಂ ಆತ್ಮಹತ್ಯೆ ಮಾಡಿಕೊಳ್ಳುವ ಸನ್ನಿವೇಶ ಬಂದಿಲ್ಲ, ಬರುವುದೂ ಇಲ್ಲ ಎಂದು ಈ ಮೂಲಕ ಸ್ಪಷ್ಟಪಡಿಸುತ್ತೇನೆ ಎಂದು ಹೇಳಿದ್ದಾರೆ.

Vishwa News 24

Recent Posts

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ – vishwanews24

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…

24 minutes ago

ಭಟ್ಕಳ ಕಪ್ಪೆಚಿಪ್ಪು ದುರಂತ : ಮೃತ 11 ಮಂದಿಯ ಸಾಮೂಹಿಕ ಅಂತ್ಯಕ್ರಿಯೆ – vishwanews24

ಭಟ್ಕಳ ಕಪ್ಪೆಚಿಪ್ಪು ದುರಂತ : ಮೃತ 11 ಮಂದಿಯ ಸಾಮೂಹಿಕ ಅಂತ್ಯಕ್ರಿಯೆ ಕಾರವಾರ: ಕಪ್ಪೆಚಿಪ್ಪು ತೆಗೆಯಲು ಹೋಗಿ ಸಾವನ್ನಪ್ಪಿದ್ದ 11 ಮಂದಿಯ…

34 minutes ago

ಕಂದಕಕ್ಕೆ ಉರುಳಿದ ಕಾರು : ಎಂಟು ಮಂದಿ ಸಾವು – vishwanews24

ಕಂದಕಕ್ಕೆ ಉರುಳಿದ ಕಾರು : ಎಂಟು ಮಂದಿ ಸಾವು ಜೈಪುರ: ಸ್ಕಾರ್ಪಿಯೋ ಎಸ್‌ಯುವಿ  ಕಾರೊಂದು ಸುಮಾರು 700 ಅಡಿ ಕಂದಕಕ್ಕೆ…

41 minutes ago

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ; ಆರೋಪಿ ಪತ್ತೆಗೆ ತೀವ್ರಗೊಂಡ ತನಿಖೆ – vishwanews24

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ; ಆರೋಪಿ ಪತ್ತೆಗೆ ತೀವ್ರಗೊಂಡ ತನಿಖೆ ಕೊಲ್ಲೂರು: ಮೇ 17ರ…

56 minutes ago

ಮಂಗಳೂರು : ಎಬೋಲಾ ವೈರಸ್ ಪ್ರಕರಣ ; ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ – vishwanews24

ಮಂಗಳೂರು : ಹೆಚ್ಚುತ್ತಿರುವ ಎಬೋಲಾ ವೈರಸ್ ಪ್ರಕರಣ ; ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಣೆ ಮಂಗಳೂರು : ಆಫ್ರಿಕಾ…

2 hours ago

ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ ದುರುಪಯೋಗ : ದಿನೇಶ್ ಗುಂಡೂರಾವ್ -vishwanews24

ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ  ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…

3 days ago