Featured

ನಾಸಾದ ಗಗನಯಾತ್ರಿಗಳ ಪಟ್ಟಿಯಲ್ಲಿ ಭಾರತ ಮೂಲದ ಅನಿಲ್ ಮೆನನ್ ಸೇರ್ಪಡೆ – Vishwanews24

ನಾಸಾದ ಗಗನಯಾತ್ರಿಗಳ ಪಟ್ಟಿಯಲ್ಲಿ ಭಾರತ ಮೂಲದ ಅನಿಲ್ ಮೆನನ್ ಆಯ್ಕೆ – Vishwanews24

ವಾಷಿಂಗ್ಟನ್ : ಅಮೇರಿಕಾದ ಬಾಹ್ಯಾಕಾಶ ಸಂಸ್ಥೆಯಾಗಿರುವ ನಾಸಾ, ತನ್ನ ಚಂದ್ರನ ಸಂಶೋಧನೆಗಾಗಿ 10 ತರಬೇತಿ ಗಗನಯಾತ್ರಿಗಳನ್ನು ಆಯ್ಕೆ ಮಾಡಿದ್ದು, ಈ ಯೋಜನೆಯಲ್ಲಿ ಭಾರತೀಯ ಮೂಲದ ಅನಿಲ್‌‌ ಮೆನನ್‌ ಅವರು ಸೇರ್ಪಡೆಯಾಗಿದ್ದಾರೆ.

45 ವರ್ಷದ ಅನಿಲ್‌ ಮನನ್‌ ಅವರು ನಾಸಾದ ಸ್ಪೇಸ್‌‌ ಎಕ್ಸ್‌‌ ಕಾರ್ಯಾಚರಣೆಯಲ್ಲಿ ಫ್ಲೈಟ್‌‌‌ ಸರ್ಜನ್‌‌ ಆಗಿ ಕಾರ್ಯ ನಿರ್ವಹಿಸಿದ್ದರು. ಅನಿಲ್‌ ಅವರು ಅಮೇರಿಕಾ ವಾಯುಪಡೆಯಲ್ಲಿ ಲೆಫ್ಟಿನೆಂಟ್‌ ಕರ್ನಲ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ನಾಸಾದ ಮೂನ್‌ ಮಿಷನ್‌ಗೆ 12 ಸಾವಿರ ಅರ್ಜಿಗಳು ಬಂದಿದ್ದು, ಆ ಪೈಕಿ 10 ಮಂದಿ ಮಾತ್ರ ತರಬೇತಿಗೆ ಆಯ್ಕೆಯಾಗಿದ್ದಾರೆ. ಈ ತಂಡ ಮತ್ತೆ ಎರಡು ವರ್ಷಗಳ ತರಬೇತಿಯನ್ನು ಪಡೆದುಕೊಳ್ಳಬೇಕಾಗುತ್ತದೆ. ನಾಸಾದ ಎಲ್ಲಾ ರೀತಿಯ ತರಬೇತಿಯನ್ನು ಪೂರ್ಣಗೊಳಿಸಿದ ಬಳಿಕ ಅವರೆಲ್ಲರೂ ನಾಸಾದ ಆರ್ಟೆಮಿಸ್‌‌ ಜನರೇಷನ್‌‌ ಪ್ರೋಗ್ರಾಮ್‌ನಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಕಾರ್ಯಕ್ರಮದಡಿ 2025ರಲ್ಲಿ ಚಂದ್ರನ ಮೇಲ್ಮೈಗೆ ಮೊದಲ ಮಹಿಳೆ ಹಾಗೂ ಪುರುಷನನ್ನು ಕಳುಹಿಸುವ ಯೋಜನೆಯನ್ನು ನಾಸಾ ಹಾಕಿಕೊಂಡಿದೆ.

ಅನಿಲ್‌ ಮೆನನ್‌ ಅವರ ಪೋಷಕರು ಭಾರತೀಯ ಹಾಗೂ ಉಕ್ರೀನಿಯನ್‌ ಆಗಿದ್ದು, ಇವರು ಅಮೇರಿಕಾದ ಮಿನ್ನೇಸೋಟದಲ್ಲಿ ನೆಲೆಸಿದ್ದಾರೆ. ಅನಿಲ್‌ ಮೆನನ್‌‌‌‌ ಅವರು 1999ರಲ್ಲಿ ಹಾರ್ವರ್ಡ್‌ ವಿಶ್ವಿವಿದ್ಯಾಲಯದಿಂದ ನ್ಯೂರೋಬಯಾಲಜಿಯಲ್ಲಿ ಪದವಿ ಪಡೆದರು. ಕ್ಯಾಲಿಫೋರ್ನಿಯಾದ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯದಿಂದ 2004 ರಲ್ಲಿ ಮೆಕ್ಯಾನಿಕ್‌‌‌ ಎಂಜಿನಿಯರಿಂಗ್‌‌‌ ಹಾಗೂ ಸ್ಟ್ಯಾನ್‌ಫೋರ್ಡ್ ವೈದ್ಯಕೀಯ ಶಾಲೆಯಿಂದ ಡಾಕ್ಟರೇಟ್ ಪದವಿಯನ್ನೂ ಪಡೆದಿದ್ದಾರೆ. ಅನಿಲ್‌ ಮೆನನ್‌ ಅವರು ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ನಾಸಾದ ಹಲವು ಯೋಜನೆಗಳಿಗೆ ಸೇವೆ ಸಲ್ಲಿಸಿದ್ದಾರೆ.

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

17 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

17 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

18 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

21 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

21 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

21 hours ago