Featured

ನಾಸಾದ ಗಗನಯಾತ್ರಿಗಳ ಪಟ್ಟಿಯಲ್ಲಿ ಭಾರತ ಮೂಲದ ಅನಿಲ್ ಮೆನನ್ ಸೇರ್ಪಡೆ – Vishwanews24

ನಾಸಾದ ಗಗನಯಾತ್ರಿಗಳ ಪಟ್ಟಿಯಲ್ಲಿ ಭಾರತ ಮೂಲದ ಅನಿಲ್ ಮೆನನ್ ಆಯ್ಕೆ – Vishwanews24

ವಾಷಿಂಗ್ಟನ್ : ಅಮೇರಿಕಾದ ಬಾಹ್ಯಾಕಾಶ ಸಂಸ್ಥೆಯಾಗಿರುವ ನಾಸಾ, ತನ್ನ ಚಂದ್ರನ ಸಂಶೋಧನೆಗಾಗಿ 10 ತರಬೇತಿ ಗಗನಯಾತ್ರಿಗಳನ್ನು ಆಯ್ಕೆ ಮಾಡಿದ್ದು, ಈ ಯೋಜನೆಯಲ್ಲಿ ಭಾರತೀಯ ಮೂಲದ ಅನಿಲ್‌‌ ಮೆನನ್‌ ಅವರು ಸೇರ್ಪಡೆಯಾಗಿದ್ದಾರೆ.

45 ವರ್ಷದ ಅನಿಲ್‌ ಮನನ್‌ ಅವರು ನಾಸಾದ ಸ್ಪೇಸ್‌‌ ಎಕ್ಸ್‌‌ ಕಾರ್ಯಾಚರಣೆಯಲ್ಲಿ ಫ್ಲೈಟ್‌‌‌ ಸರ್ಜನ್‌‌ ಆಗಿ ಕಾರ್ಯ ನಿರ್ವಹಿಸಿದ್ದರು. ಅನಿಲ್‌ ಅವರು ಅಮೇರಿಕಾ ವಾಯುಪಡೆಯಲ್ಲಿ ಲೆಫ್ಟಿನೆಂಟ್‌ ಕರ್ನಲ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ನಾಸಾದ ಮೂನ್‌ ಮಿಷನ್‌ಗೆ 12 ಸಾವಿರ ಅರ್ಜಿಗಳು ಬಂದಿದ್ದು, ಆ ಪೈಕಿ 10 ಮಂದಿ ಮಾತ್ರ ತರಬೇತಿಗೆ ಆಯ್ಕೆಯಾಗಿದ್ದಾರೆ. ಈ ತಂಡ ಮತ್ತೆ ಎರಡು ವರ್ಷಗಳ ತರಬೇತಿಯನ್ನು ಪಡೆದುಕೊಳ್ಳಬೇಕಾಗುತ್ತದೆ. ನಾಸಾದ ಎಲ್ಲಾ ರೀತಿಯ ತರಬೇತಿಯನ್ನು ಪೂರ್ಣಗೊಳಿಸಿದ ಬಳಿಕ ಅವರೆಲ್ಲರೂ ನಾಸಾದ ಆರ್ಟೆಮಿಸ್‌‌ ಜನರೇಷನ್‌‌ ಪ್ರೋಗ್ರಾಮ್‌ನಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಕಾರ್ಯಕ್ರಮದಡಿ 2025ರಲ್ಲಿ ಚಂದ್ರನ ಮೇಲ್ಮೈಗೆ ಮೊದಲ ಮಹಿಳೆ ಹಾಗೂ ಪುರುಷನನ್ನು ಕಳುಹಿಸುವ ಯೋಜನೆಯನ್ನು ನಾಸಾ ಹಾಕಿಕೊಂಡಿದೆ.

ಅನಿಲ್‌ ಮೆನನ್‌ ಅವರ ಪೋಷಕರು ಭಾರತೀಯ ಹಾಗೂ ಉಕ್ರೀನಿಯನ್‌ ಆಗಿದ್ದು, ಇವರು ಅಮೇರಿಕಾದ ಮಿನ್ನೇಸೋಟದಲ್ಲಿ ನೆಲೆಸಿದ್ದಾರೆ. ಅನಿಲ್‌ ಮೆನನ್‌‌‌‌ ಅವರು 1999ರಲ್ಲಿ ಹಾರ್ವರ್ಡ್‌ ವಿಶ್ವಿವಿದ್ಯಾಲಯದಿಂದ ನ್ಯೂರೋಬಯಾಲಜಿಯಲ್ಲಿ ಪದವಿ ಪಡೆದರು. ಕ್ಯಾಲಿಫೋರ್ನಿಯಾದ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯದಿಂದ 2004 ರಲ್ಲಿ ಮೆಕ್ಯಾನಿಕ್‌‌‌ ಎಂಜಿನಿಯರಿಂಗ್‌‌‌ ಹಾಗೂ ಸ್ಟ್ಯಾನ್‌ಫೋರ್ಡ್ ವೈದ್ಯಕೀಯ ಶಾಲೆಯಿಂದ ಡಾಕ್ಟರೇಟ್ ಪದವಿಯನ್ನೂ ಪಡೆದಿದ್ದಾರೆ. ಅನಿಲ್‌ ಮೆನನ್‌ ಅವರು ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ನಾಸಾದ ಹಲವು ಯೋಜನೆಗಳಿಗೆ ಸೇವೆ ಸಲ್ಲಿಸಿದ್ದಾರೆ.

Vishwa News 24

Recent Posts

SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ – vishwanews24

SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ…

14 hours ago

ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ – vishwanews24

ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ…

15 hours ago

ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ ಪುನರಾರಂಭ – vishwanews24

ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ ಪುನರಾರಂಭ ಉಡುಪಿ : ಹಲವು ದಿನಗಳಿಂದ ಉಡುಪಿಯಲ್ಲಿ ಸ್ಥಗಿತಗೊಂಡಿದ್ದ ಆಟೋ ಎಲ್‌ಪಿಜಿ ಪೂರೈಕೆ…

16 hours ago

ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ – vishwanews24

ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ  ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ…

16 hours ago

ನಾಳೆ SSLC ಫಲಿತಾಂಶ  ಪ್ರಕಟ – vishwanews24

ನಾಳೆ SSLC ಫಲಿತಾಂಶ  ಪ್ರಕಟ ಬೆಂಗಳೂರು: ನಾಳೆ ಎಸ್‌ಎಸ್‌ಎಲ್‌ಸಿ ಫಲಿತಾಂಶ  ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.…

1 day ago

ಕಾಪು : ಸ್ಕೂಟಿ ಹಿಂಬದಿಗೆ ತಡೆರಹಿತ ಬಸ್‌ ಢಿಕ್ಕಿ ; ಬಾಲಕಿ ಸಾವು -vishwanews24

ಕಾಪು : ಸ್ಕೂಟಿ ಹಿಂಬದಿಗೆ ತಡೆರಹಿತ ಬಸ್‌ ಢಿಕ್ಕಿ - ಬಾಲಕಿ ಸಾವು ಕಾಪು : ಸರ್ವಿಸ್‌ ರಸ್ತೆಯಿಂದ ರಾಷ್ಟ್ರೀಯ…

2 days ago