ರಾಜ್ಯ ನ್ಯೂಸ್

ನಾ ಕೀಳುಭಾಷೆ ಬಲ್ಲೆ, ಆಡಲಾರೆ : ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕ ಕೆ ಎಸ್‌, ಈಶ್ವರಪ್ಪ!

ಹಾವೇರಿ: ವರುಣಾ ಕ್ಷೇತ್ರದಲ್ಲಿ ವಿಜಯೇಂದ್ರ ಅವರು ಸ್ಪರ್ಧೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿರುವ ಹೇಳಿಕೆಗೆ ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕ ಕೆ. ಎಸ್‌. ಈಶ್ವರಪ್ಪ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.
”ಆ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ಸ್ಪರ್ಧಿಸುವುದಕ್ಕೆ ನಮ್ಮ ವಿರೋಧ ಇಲ್ಲ. ಆದರೆ ಬಿ.ಎಸ್‌.ಯಡಿಯೂರಪ್ಪ ಪುತ್ರ ವಿಜಯೇಂದ್ರ ಸ್ಪರ್ಧಿಸುತ್ತಾರೆ ಎನ್ನುತ್ತಿದ್ದಂತೆ, ಮಗನೇ ಬರಲಿ, ಅವರಪ್ಪನೇ ಬರಲಿ- ನಮ್ಮ ಗೆಲುವು ನಿಶ್ಚಿತ ಎಂದು ಸಿಎಂ ಸಿದ್ಧರಾಮಯ್ಯ ಲಘುವಾಗಿ ಮಾತನಾಡಿದ್ದಾರೆ. ಇದು ಮನಸ್ಸಿಗೆ ನೋವು ತಂದಿದೆ. ನಮಗೂ ಇದಕ್ಕಿಂತ ಕೀಳು ಮಟ್ಟದ ಭಾಷೆ ಬಳಸಲು ಗೊತ್ತಿದೆ,” ಎಂದು ತಿರುಗೇಟು ನೀಡಿದರು.

ಪಕ್ಷಕ್ಕೆ ದುಡಿದವರು ಚುನಾವಣೆಯಲ್ಲಿ ಟಿಕೆಟ್‌ ಕೇಳುವುದು ಅವರ ಹಕ್ಕು. ಇದನ್ನೇ ಬಂಡಾಯ, ಭಿನ್ನಮತ, ಪಕ್ಷ ವಿರೋಧಿ ಚಟುವಟಿಕೆ, ಅಶಿಸ್ತು ಎನ್ನಲಾಗದು. ಪರಿವರ್ತನಾ ರಾರ‍ಯಲಿಯಲ್ಲಿ ಘೋಷಣೆಯಾಗಿರುವ ಅಭ್ಯರ್ಥಿಗಳ ಹೆಸರು ಅಸಿಂಧು ಎಂದು ಖುದ್ದು ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರೇ ಹೇಳಿಕೆ ನೀಡಿದ್ದಾರೆ. ಈ ಹಂತದಲ್ಲಿ ವಿಧಾನ ಪರಿಷತ್‌ ಸದಸ್ಯ ಬೇವಿನಮರದ ಸೇರಿದಂತೆ ಟಿಕೆಟ್‌ಗೆ ಪಟ್ಟು ಹಿಡಿದವರೆಲ್ಲ ಭಿನ್ನಮತೀಯರು ಎಂದು ಪರಿಗಣಿಸಲಾಗದು ಎಂದರು.

ಬಿಜೆಪಿ ಗಂಗಾನದಿ: ಬಿಜೆಪಿ ಗಂಗಾನದಿಯಷ್ಟೇ ಪವಿತ್ರ. ನಮ್ಮ ಪಕ್ಷಕ್ಕೆ ಎಂಥವರೇ ಬಂದರೂ ಪರಿಶುದ್ಧರಾಗುತ್ತಾರೆ. ಇದು ತೆರೆದ ಮನೆ ಇಲ್ಲಿಗೆ ಬರುತ್ತೇವೆ ಎನ್ನುವವರಿಗೆ ಇಲ್ಲ ಎನ್ನಲಾಗದು. ಆದರೆ ಬರುವ ವ್ಯಕ್ತಿ ಲಕ್ಷಣಗಳು, ಅವರ ಕಾರ್ಯವೈಖರಿ ವಾಂತಿ ಬರುವಂತಿದ್ದರೆ ಹೇಗೆ ಎಲ್ಲವನ್ನೂ ಕಕ್ಕುತ್ತೆವೆಯೋ ಹಾಗೆಯೇ ವ್ಯಕ್ತಿಗತವಾಗಿ ಅಮಿತ್‌ ಶಾ ಅವರು ಜನಾರ್ಧನರೆಡ್ಡಿ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದರು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

12 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

12 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

13 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

13 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

14 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

14 hours ago