ರಾಜ್ಯ ನ್ಯೂಸ್

ನಾ ಕೀಳುಭಾಷೆ ಬಲ್ಲೆ, ಆಡಲಾರೆ : ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕ ಕೆ ಎಸ್‌, ಈಶ್ವರಪ್ಪ!

ಹಾವೇರಿ: ವರುಣಾ ಕ್ಷೇತ್ರದಲ್ಲಿ ವಿಜಯೇಂದ್ರ ಅವರು ಸ್ಪರ್ಧೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿರುವ ಹೇಳಿಕೆಗೆ ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕ ಕೆ. ಎಸ್‌. ಈಶ್ವರಪ್ಪ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.
”ಆ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ಸ್ಪರ್ಧಿಸುವುದಕ್ಕೆ ನಮ್ಮ ವಿರೋಧ ಇಲ್ಲ. ಆದರೆ ಬಿ.ಎಸ್‌.ಯಡಿಯೂರಪ್ಪ ಪುತ್ರ ವಿಜಯೇಂದ್ರ ಸ್ಪರ್ಧಿಸುತ್ತಾರೆ ಎನ್ನುತ್ತಿದ್ದಂತೆ, ಮಗನೇ ಬರಲಿ, ಅವರಪ್ಪನೇ ಬರಲಿ- ನಮ್ಮ ಗೆಲುವು ನಿಶ್ಚಿತ ಎಂದು ಸಿಎಂ ಸಿದ್ಧರಾಮಯ್ಯ ಲಘುವಾಗಿ ಮಾತನಾಡಿದ್ದಾರೆ. ಇದು ಮನಸ್ಸಿಗೆ ನೋವು ತಂದಿದೆ. ನಮಗೂ ಇದಕ್ಕಿಂತ ಕೀಳು ಮಟ್ಟದ ಭಾಷೆ ಬಳಸಲು ಗೊತ್ತಿದೆ,” ಎಂದು ತಿರುಗೇಟು ನೀಡಿದರು.

ಪಕ್ಷಕ್ಕೆ ದುಡಿದವರು ಚುನಾವಣೆಯಲ್ಲಿ ಟಿಕೆಟ್‌ ಕೇಳುವುದು ಅವರ ಹಕ್ಕು. ಇದನ್ನೇ ಬಂಡಾಯ, ಭಿನ್ನಮತ, ಪಕ್ಷ ವಿರೋಧಿ ಚಟುವಟಿಕೆ, ಅಶಿಸ್ತು ಎನ್ನಲಾಗದು. ಪರಿವರ್ತನಾ ರಾರ‍ಯಲಿಯಲ್ಲಿ ಘೋಷಣೆಯಾಗಿರುವ ಅಭ್ಯರ್ಥಿಗಳ ಹೆಸರು ಅಸಿಂಧು ಎಂದು ಖುದ್ದು ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರೇ ಹೇಳಿಕೆ ನೀಡಿದ್ದಾರೆ. ಈ ಹಂತದಲ್ಲಿ ವಿಧಾನ ಪರಿಷತ್‌ ಸದಸ್ಯ ಬೇವಿನಮರದ ಸೇರಿದಂತೆ ಟಿಕೆಟ್‌ಗೆ ಪಟ್ಟು ಹಿಡಿದವರೆಲ್ಲ ಭಿನ್ನಮತೀಯರು ಎಂದು ಪರಿಗಣಿಸಲಾಗದು ಎಂದರು.

ಬಿಜೆಪಿ ಗಂಗಾನದಿ: ಬಿಜೆಪಿ ಗಂಗಾನದಿಯಷ್ಟೇ ಪವಿತ್ರ. ನಮ್ಮ ಪಕ್ಷಕ್ಕೆ ಎಂಥವರೇ ಬಂದರೂ ಪರಿಶುದ್ಧರಾಗುತ್ತಾರೆ. ಇದು ತೆರೆದ ಮನೆ ಇಲ್ಲಿಗೆ ಬರುತ್ತೇವೆ ಎನ್ನುವವರಿಗೆ ಇಲ್ಲ ಎನ್ನಲಾಗದು. ಆದರೆ ಬರುವ ವ್ಯಕ್ತಿ ಲಕ್ಷಣಗಳು, ಅವರ ಕಾರ್ಯವೈಖರಿ ವಾಂತಿ ಬರುವಂತಿದ್ದರೆ ಹೇಗೆ ಎಲ್ಲವನ್ನೂ ಕಕ್ಕುತ್ತೆವೆಯೋ ಹಾಗೆಯೇ ವ್ಯಕ್ತಿಗತವಾಗಿ ಅಮಿತ್‌ ಶಾ ಅವರು ಜನಾರ್ಧನರೆಡ್ಡಿ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದರು.

Vishwa News 24

Recent Posts

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ – vishwanews24

ಕೌಟುಂಬಿಕ ಕಲಹ : ಕೊಲೆಯಲ್ಲಿ  ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…

19 minutes ago

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ – vishwanews24

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ  ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…

57 minutes ago

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ – vishwanews24

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…

1 hour ago

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು – vishwanews24

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು ಹಾಸನ: ಕೆಲವೇ…

1 hour ago

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ – vishwanews24

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ ಪುತ್ತೂರು: ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ…

1 hour ago

ಸುದೀಪ್‌ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ – vishwanews24

ಸುದೀಪ್‌ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ ಉಡುಪಿ : ಸುದೀಪ್‌ ಶೆಟ್ಟಿ ಆತ್ಮಹತ್ಯೆ…

1 hour ago