Featured

ನಿಗದಿತ ಕಿ.ಮೀ. ಗಳಷ್ಟು ಸಂಚರಿಸಿ ಸಾಮರ್ಥ್ಯ ಕಳೆದುಕೊಂಡ KSRTC ಬಸ್ ಗಳನ್ನು ಸಂಚಾರಕ್ಕೆ ಬಳಸದಂತೆ ಹೈಕೋರ್ಟ್ ಆದೇಶ – vishwanews24

ನಿಗದಿತ ಕಿ.ಮೀ. ಗಳಷ್ಟು ಸಂಚರಿಸಿ ಸಾಮರ್ಥ್ಯ ಕಳೆದುಕೊಂಡ ಬಸ್ ಗಳನ್ನು ಸಂಚಾರಕ್ಕೆ ಬಳಸದಂತೆ ಹೈಕೋರ್ಟ್ ಆದೇಶ

ಬೆಂಗಳೂರು : ನಿಗದಿತ ಕಿ.ಮೀ. ಗಳಷ್ಟು ಸಂಚರಿಸಿ ಸಾಮರ್ಥ್ಯ ಕಳೆದುಕೊಂಡ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಗಳನ್ನು ಗುಜರಿಗೆ ಹಾಕಬೇಕು. ಗುಜರಿಗೆ ಹಾಕಿದ ಬಸ್ಗಳನ್ನು ಮತ್ತೆ ಸಂಚಾರಕ್ಕೆ ಬಳಸಲು ಅನುಮತಿ ನೀಡುವಂತಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ.

ಸಾಮರ್ಥ್ಯ ಕಳೆದುಕೊಂಡು ಗುಜರಿಗೆ ಸೇರಬೇಕಾಗಿದ್ದ ಕೆಎಸ್ ಆರ್ ಟಿಸಿ ಬಸ್ ನಿಂದ ಅಪಘಾತ ಉಂಟಾಗಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ ಪ್ರಕರಣವೊಂದರಲ್ಲಿ ನ್ಯಾ. ರಾಮಚಂದ್ರ ಡಿ.ಹುದ್ದಾರ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಬಗ್ಗೆ ಮಹತ್ವದ ಆದೇಶ ಹೊರಡಿಸಲಾಗಿದೆ.

’ಬಸ್ಗಳು ಸಂಚಾರಕ್ಕೆ ಅರ್ಹವಾಗಿದೆ ಎಂದು ಪ್ರತಿ ವರ್ಷವೂ ಸಂಬಂಧಿಸಿದ ಪ್ರಾದೇಶಿಕ ಸಾರಿಗೆ ಅಧಿಕಾರಿಯಿಂದ ಸುಸ್ಥಿತಿ ದೃಢೀಕರಣ ಪತ್ರ (ಎಫ್ ಸಿ)ವನ್ನು ಪಡೆದುಕೊಳ್ಳಬೇಕು. ಆರ್ ಟಿಓ ದಿಂದ ಎಫ್ ಸಿ ಪಡೆದ ಬಸ್ ಗಳಿಗೆ ಮಾತ್ರ ಸಂಚಾರಕ್ಕೆ ಅನುಮತಿ ನೀಡಬೇಕು. ಆಗ್ಗಾಗ್ಗೆ ಬಸ್ ಗಳನ್ನು ಪರಿಶೀಲನೆ ಮಾಡುವುದರ ಜೊತೆಗೆ ದುರಸ್ತಿ ಮಾಡುತ್ತಿರಬೇಕು ಎಂಬ ವಿವಿಧ ನಿರ್ದೇಶನಗಳನ್ನು ಏಕಸದಸ್ಯ ನ್ಯಾಯಪೀಠ ನೀಡಿದೆ.

ಇನ್ನು ತೀರ್ಪಿನಲ್ಲಿ ನೀಡಲಾದ ನಿರ್ದೇಶನಗಳನ್ನು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮತ್ತು ಕೆಎಸ್ ಆರ್ ಟಿಸಿ ವ್ಯವಸ್ಥಾಪಕ ನಿರ್ದೇಶಕರು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

18 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

2 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

2 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

2 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

2 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

2 days ago