Mumbai: Vehicles ply on a waterlogged street during rain, at King's circle in Mumbai, Friday, July 3, 2020. (PTI Photo/Shashank Parade)(PTI03-07-2020_000101A)
ಹೊಸದಿಲ್ಲಿ: ಈ ಬಾರಿ ನೈಋತ್ಯ ಮುಂಗಾರು ನಿಗದಿತ ಸಮಯಕ್ಕೆ ಕೇರಳಕ್ಕೆ ಆಗಮಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಂಎಡಿ) ಬುಧವಾರ ಹೇಳಿದೆ. ಮೇ 31ಕ್ಕೆ ಮುಂಗಾರು ಭಾರತ ಪ್ರವೇಶಿಸಲಿದ್ದು, ಈ ವರ್ಷ ಭಾರತದ ಕೃಷಿ ಚಟುವಟಿಕೆಗಳಿಗೆ ನೆರವಾಗಲಿದೆ ಎಂದು ಇಲಾಖೆ ಹೇಳಿದೆ.
ಈ ಬಾರಿ ಮುಂಚಿತವಾಗಿ ಮುಂಗಾರು ಭಾರತ ಪ್ರವೇಶಿಸುತ್ತಿಲ್ಲ. ಜೂ.1 ಮುಂಗಾರು ಭಾರತ ಪ್ರವೇಶಿಸುವ ದಿನವಾಗಿದೆ. ಕೆಲವೊಮ್ಮೆ ಇದು 7 ದಿನಗಳ ಕಾಲ ತಡವಾಗುವ ಸಾಧ್ಯತೆಯೂ ಇತ್ತು. ಆದರೆ ಈ ವರ್ಷ ನಿಗದಿತ ಸಮಯಕ್ಕೆ ಮಳೆ ಬೀಳಲಿದೆ. ಈ ಬಾರಿ ಹೆಚ್ಚೆಂದರೆ 4 ದಿನಗಳ ವ್ಯತ್ಯಾಸವಾಗಬಹುದು ಎಂದು ಐಎಂಡಿ ನಿರ್ದೇಶಕ ಮೃತ್ಯುಂಜಯ್ ಮಹೋಪಾತ್ರ ಹೇಳಿದ್ದಾರೆ. ಈ ಭಾರಿ ಭಾರತದಲ್ಲಿ ಮುಂಗಾರಿನ ಪ್ರಭಾವದಿಂದ ಸಾಮಾನ್ಯಕ್ಕಿಂತ ಅಧಿಕ ಮಳೆಯಾಗಲಿದೆ. ಜೂನ್ನಿಂದ ಸೆಪ್ಟಂಬರ್ವರೆಗೆ ಮಳೆ ಅಧಿಕವಾಗಿರಲಿದೆ ಎಂದು ಇಲಾಖೆ ಕಳೆದ ತಿಂಗಳು ಹೇಳಿತ್ತು. ಭಾರತದ ಕೃಷಿಗೆ ಅನುಕೂಲವಾಗುವ ದೃಷ್ಟಿಯಲ್ಲಿ ಗಮನಿಸಿದರೆ ಜೂನ್ ಮತ್ತು ಜುಲೈ ತಿಂಗಳಿನಲ್ಲಿ ಬೀಳುವ ಮಳೆ ಅತ್ಯಂತ ಪ್ರಮುಖವಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…