ಬೆಂಗಳೂರು: ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ರಾಜ್ಯದಲ್ಲಿ ಹೋಟೆಲ್ ಗಳು, ರೆಸ್ಟೋರೆಂಟ್ ಗಳನ್ನು ತೆರೆಯಲು ಅವಕಾಶ ನೀಡಲಾಗುತ್ತಿದೆ. ಆದರೆ ನಿಗದಿ ಪಡಿಸಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚಿಸಿದರು.
ಮುಖ್ಯಮಂತ್ರಿಗಳು ಇಂದು ರಾಜ್ಯದಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಹಾಗೂ ಕೆಲವು ತೊಡಕುಗಳ ನಿವಾರಣೆ ಕುರಿತು ಪ್ರವಾಸೋದ್ಯಮ ಹಾಗೂ ಸಾರಿಗೆ ಇಲಾಖೆ ಮತ್ತು ವಿವಿಧ ಭಾಗೀದಾರರ ಜೊತೆಗೆ ಚರ್ಚೆ ನಡೆಸಿದರು.
ಈ ಸಭೆಯಲ್ಲಿ ಭಾಗವಹಿಸಿದ್ದ ಬಸ್ ಮಾಲೀಕರ ಸಂಘ ಹೋಟೆಲ್ ಮಾಲೀಕರ ಸಂಘ ಹಾಗು ಟ್ಯಾಕ್ಸಿ ಮಾಲಿಕರ ಸಂಘಗಳ ನಿಯೋಗವು ಸರ್ಕಾರದ ಮುಂದೆ ಕೆಲ ಬೇಡಿಕೆಗಳನ್ನು ಮುಂದಿಟ್ಟರು. ಅವರ ಬೇಡಿಕೆಗಳನ್ನು ಕೂಲಂಕಷವಾಗಿ ಪರಿಶೀಲಿಸಿ, ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಪ್ರವಾಸೋದ್ಯಮ ಇಲಾಖೆಯು ಹೋಟೆಲ್ ಗಳು, ಆತಿಥ್ಯ ಘಟಕಗಳು ಮತ್ತು ಪ್ರವಾಸಿ ತಾಣಗಳನ್ನು ತೆರೆಯುವ ಹಿನ್ನೆಲೆಯಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಗಳ ಕೈಪಿಡಿಯನ್ನು ಬಿಡುಗಡೆ ಮಾಡಿದರು.
ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ, ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರುತಿ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…
ಮಂಗಳೂರು: ಡಿವೈಡರ್ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…