Featured

ನಿಟ್ಟೆ ಅಪಘಾತ ಪ್ರಕರಣ : ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಮೃತ್ಯು – vishwanews24

ನಿಟ್ಟೆ ಅಪಘಾತ ಪ್ರಕರಣ : ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಮೃತ್ಯು

ಕಾರ್ಕಳ : ನಿಟ್ಟೆಯ ಕಾಲೇಜು ಬಳಿ ಬೈಕಿಗೆ ಕಾರು ಡಿಕ್ಕಿಯಾಗಿ ಬೈಕ್ ಸವಾರ ನವೀನ್‌ಚಂದ್ರ ಮೂಲ್ಯ ಸ್ಥಳದಲ್ಲೇ ಮೃತಪಟ್ಟು, ಅವರ ಮಗಳು ಪ್ರೇರಣಾ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದು, ಇದೀಗ ಆಕೆಯೂ ಕೂಡ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

ಏ .24 ರಂದು ಈ ಭೀಕರ ಅಪಘಾತ ಸಂಭವಿಸಿದ್ದು, ಕಾಲೇಜಿಗೆ ಪರೀಕ್ಷೆಗೆ ಹೋಗಿದ್ದ ಮಗಳು ಪ್ರೇರಣಾಳ ಹಾಗೂ ತಂದೆ ನವೀನ್ ಚಂದ್ರ ಮೂಲ್ಯ ಬೈಕಿನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಪೆಟ್ರೋಲ್ ಬಂಕ್ ಬಳಿ ಕಾರ್ಕಳದಿಂದ ನಿಟ್ಟೆ ಕಡೆಗೆ ಯಮ ವೇಗದಲ್ಲಿ ನುಗ್ಗಿ ಬಂದ ನಿಟ್ಟೆ ಕಾಲೇಜಿನ ವಿದ್ಯಾರ್ಥಿಗಳಿದ್ದ ಕಾರು ನೇರವಾಗಿ ನವೀನ್ ಚಂದ್ರ ಅವರು ಚಲಾಯಿಸುತ್ತಿದ್ದ ಬೈಕಿಗೆ ಅಪ್ಪಳಿಸಿದೆ. ಈ ಭೀಕರ ಅಪಘಾತದಲ್ಲಿ ಬೈಕ್ ಸವಾರ ನವೀನ್‌ಚಂದ್ರ ಅವರು ರಸ್ತೆಗೆ ಎಸೆಯಲ್ಪಟ್ಟು ದಾರುಣವಾಗಿ ಮೃತಪಟ್ಟಿದ್ದರು.

ಮಗಳು ಪ್ರೇರಣಾ ಗಂಭೀರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡಿ ಸೋಮವಾರ ಬೆಳಗ್ಗೆ ಉಸಿರು ಚೆಲ್ಲಿದ್ದಾರೆ.

ಕುಟುಂಬಕ್ಕೆ ಆಧಾರವಾಗಿದ್ದ ತಂದೆ ಹಾಗೂ ಬಾಳಿ ಬದುಕಬೇಕಿದ್ದ ಮಗಳು ತಮ್ಮದಲ್ಲದ ತಪ್ಪಿಗೆ ಜೀವ ಕಳೆದುಕೊಂಡಿದ್ದು, ಈ ಅಪಘಾತಕ್ಕೆ ಕಾರಣರಾದ ವಿದ್ಯಾರ್ಥಿಗಳ ವಿರುದ್ದ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಇತ್ತ ಪತಿ ಹಾಗೂ ಮಗಳನ್ನು ಕಳದುಕೊಂಡ ತಾಯಿ ಹಾಗೂ ಅವರ ಸಂಬoಧಿಕರ ನೋವು ಆಕ್ರಂದನ ಮುಗಿಲುಮುಟ್ಟಿದೆ. ಅಮಾಯಕರ ಪ್ರಾಣ ತೆಗೆದ ವಿದ್ಯಾರ್ಥಿಗಳಿಗೆ ಕಠಿಣ ಶಿಕ್ಷೆಯಾಗಬೇಕೆನ್ನುವುದು ಎಲ್ಲರ ಆಗ್ರಹವಾಗಿದೆ.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

8 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

8 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

8 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

9 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago