ಹೊಸದಿಲ್ಲಿ, : ಭಕ್ತೆಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಇದೀಗ ಮತ್ತೊಂದು ವಿವಾದ ಎಬ್ಬಿಸಿದ್ದಾರೆ. ಮಂಗ, ಹಸು ಹಾಗೂ ಸಿಂಹಗಳನ್ನು ಕೂಡಾ ಸಂಸ್ಕೃತ ಮತ್ತು ತಮಿಳಿನಲ್ಲಿ ಮಾತನಾಡುವಂತೆ ಮಾಡಬಲ್ಲೆ ಎಂದು ನಿತ್ಯಾನಂದ ಹೇಳಿಕೊಂಡಿದ್ದಾರೆ.
ಈ ಕುರಿತ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಹೊಸ ಲುಕ್ನೊಂದಿಗೆ ಕಾಣಿಸಿಕೊಂಡಿರುವ ನಿತ್ಯಾನಂದ, ಪ್ರೇಕ್ಷಕರಿಗೆ ಈ ವಿಚಿತ್ರ ಭರವಸೆ ನೀಡಿದಾಗ, ಪ್ರೇಕ್ಷಕರು ಪ್ರಚಂಡ ಕರತಾಡನದೊಂದಿಗೆ ಸ್ವಾಗತಿಸಿದರು.
“ನಾನು ಪ್ರಾತ್ಯಕ್ಷಿಕೆ ಮಾಡುತ್ತೇನೆ.. ಮಂಗಗಳು ಮತ್ತು ನಾವು ಹೊಂದಿರುವ ಹಲವು ಅಂಗಗಳನ್ನು ಹೊಂದಿದರ ಇತರ ಕೆಲ ಪ್ರಾಣಿಗಳಲ್ಲಿ ಕೂಡಾ ಅತೀಂದ್ರಿಯ ಸಂಶೋಧನೆ ಮೂಲಕ, ಈ ಅಂಗಾಂಗಗಳು ಬೆಳೆಯುವಂತೆ ಮಾಡಬಹುದು. ಅದನ್ನು ಸಾಧಿಸಿ ತೋರಿಸುತ್ತೇನೆ, ವೈಜ್ಞಾನಿಕ, ವೈದ್ಯಕೀಯ ಪರೀಕ್ಷೆ ಮತ್ತು ಸಂಶೋಧನೆ ಮೂಲಕ ದೃಢಪಡಿಸುತ್ತೇನೆ” ಎಂದು ಹೇಳುತ್ತಿರುವ ವೀಡಿಯೊ ವೈರಲ್ ಆಗಿದೆ.
ಆಕಸ್ಮಿಕವಾಗಿ ಪರೀಕ್ಷೆಗೆ ಒಳಪಡಿಸಿದ ಸಾಫ್ಟ್ವೇರ್ನ ನೆರವಿನಿಂದ ಈ ಸಂಶೋಧನೆ ಮಾಡಲಾಗಿದೆ ಎಂದು ಹೇಳಿದ್ದಾರೆ. “ಈ ಸಾಫ್ಟ್ವೇರನ್ನು ನಿನ್ನೆ ಪರೀಕ್ಷೆಗೆ ಒಳಪಡಿಸಿದ ನಂತರ ನಾನಿದನ್ನು ಘೋಷಿಸುತ್ತಿದ್ದೇನೆ. ನಿನ್ನೆ ನಾನು ಆಕಸ್ಮಿಕವಾಗಿ ಇದನ್ನು ಪರಿಶೀಲಿಸಿದೆ. ಇದು ಪರಿಪೂರ್ಣವಾಗಿ ಕೆಲಸ ಮಾಡುತ್ತದೆ. ಬರೆದಿಟ್ಟುಕೊಳ್ಳಿ, ಒಂದು ವರ್ಷದೊಳಗೆ ನಾನಿದನ್ನು ನಿರೂಪಿಸಬಲ್ಲೆ” ಎಂದು ಹೇಳಿದ್ದಾರೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…