ಹೊಸದಿಲ್ಲಿ, : ಭಕ್ತೆಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಇದೀಗ ಮತ್ತೊಂದು ವಿವಾದ ಎಬ್ಬಿಸಿದ್ದಾರೆ. ಮಂಗ, ಹಸು ಹಾಗೂ ಸಿಂಹಗಳನ್ನು ಕೂಡಾ ಸಂಸ್ಕೃತ ಮತ್ತು ತಮಿಳಿನಲ್ಲಿ ಮಾತನಾಡುವಂತೆ ಮಾಡಬಲ್ಲೆ ಎಂದು ನಿತ್ಯಾನಂದ ಹೇಳಿಕೊಂಡಿದ್ದಾರೆ.
ಈ ಕುರಿತ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಹೊಸ ಲುಕ್ನೊಂದಿಗೆ ಕಾಣಿಸಿಕೊಂಡಿರುವ ನಿತ್ಯಾನಂದ, ಪ್ರೇಕ್ಷಕರಿಗೆ ಈ ವಿಚಿತ್ರ ಭರವಸೆ ನೀಡಿದಾಗ, ಪ್ರೇಕ್ಷಕರು ಪ್ರಚಂಡ ಕರತಾಡನದೊಂದಿಗೆ ಸ್ವಾಗತಿಸಿದರು.
“ನಾನು ಪ್ರಾತ್ಯಕ್ಷಿಕೆ ಮಾಡುತ್ತೇನೆ.. ಮಂಗಗಳು ಮತ್ತು ನಾವು ಹೊಂದಿರುವ ಹಲವು ಅಂಗಗಳನ್ನು ಹೊಂದಿದರ ಇತರ ಕೆಲ ಪ್ರಾಣಿಗಳಲ್ಲಿ ಕೂಡಾ ಅತೀಂದ್ರಿಯ ಸಂಶೋಧನೆ ಮೂಲಕ, ಈ ಅಂಗಾಂಗಗಳು ಬೆಳೆಯುವಂತೆ ಮಾಡಬಹುದು. ಅದನ್ನು ಸಾಧಿಸಿ ತೋರಿಸುತ್ತೇನೆ, ವೈಜ್ಞಾನಿಕ, ವೈದ್ಯಕೀಯ ಪರೀಕ್ಷೆ ಮತ್ತು ಸಂಶೋಧನೆ ಮೂಲಕ ದೃಢಪಡಿಸುತ್ತೇನೆ” ಎಂದು ಹೇಳುತ್ತಿರುವ ವೀಡಿಯೊ ವೈರಲ್ ಆಗಿದೆ.
ಆಕಸ್ಮಿಕವಾಗಿ ಪರೀಕ್ಷೆಗೆ ಒಳಪಡಿಸಿದ ಸಾಫ್ಟ್ವೇರ್ನ ನೆರವಿನಿಂದ ಈ ಸಂಶೋಧನೆ ಮಾಡಲಾಗಿದೆ ಎಂದು ಹೇಳಿದ್ದಾರೆ. “ಈ ಸಾಫ್ಟ್ವೇರನ್ನು ನಿನ್ನೆ ಪರೀಕ್ಷೆಗೆ ಒಳಪಡಿಸಿದ ನಂತರ ನಾನಿದನ್ನು ಘೋಷಿಸುತ್ತಿದ್ದೇನೆ. ನಿನ್ನೆ ನಾನು ಆಕಸ್ಮಿಕವಾಗಿ ಇದನ್ನು ಪರಿಶೀಲಿಸಿದೆ. ಇದು ಪರಿಪೂರ್ಣವಾಗಿ ಕೆಲಸ ಮಾಡುತ್ತದೆ. ಬರೆದಿಟ್ಟುಕೊಳ್ಳಿ, ಒಂದು ವರ್ಷದೊಳಗೆ ನಾನಿದನ್ನು ನಿರೂಪಿಸಬಲ್ಲೆ” ಎಂದು ಹೇಳಿದ್ದಾರೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…