ರಾಮನಗರ: ನಿಧಿ ಆಸೆಗಾಗಿ ಬೆತ್ತಲೆ ಪೂಜೆ ಸೇರಿದಂತೆ ಮೌಢ್ಯದ ಆಚರಣೆಯಲ್ಲಿ ತೊಡಗಿದ್ದ ಆರೋಪದ ಮೇಲೆ ಆರು ಮಂದಿಯನ್ನು ಜಿಲ್ಲೆಯ ಸಾತನೂರು ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದಾರೆ.
ತಮಿಳುನಾಡು ಮೂಲದವರಾದ ಪಾರ್ಥಸಾರಥಿ, ನಾಗರಾಜು, ಶಶಿಕುಮಾರ್, ಲೋಕೇಶ್, ಮೋಹನ್, ಲಕ್ಷ್ಮಿನರಸಪ್ಪ ಬಂಧಿತರು. ಇವರೊಂದಿಗೆ ಇದ್ದ ಕಾರ್ಮಿಕ ಮಹಿಳೆಯನ್ನು ಪೊಲೀಸರು ರಕ್ಷಿಸಿದ್ದಾರೆ. ಕನಕಪುರ ತಾಲ್ಲೂಕಿನ ಸಾತನೂರು ಸಮೀಪದ ಭೂಹಳ್ಳಿ ಗ್ರಾಮದ ಶ್ರೀನಿವಾಸ ಎಂಬುವರ ಮನೆಯಲ್ಲಿ ಆಗಾಗ ಗುಟ್ಟಾಗಿ ಪೂಜೆ ನಡೆಯುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿತು.
ಮನೆ ಮಾಲೀಕರಾದ ಶ್ರೀನಿವಾಸ ಆರ್ಥಿಕ ನಷ್ಟದಿಂದ ಜಮೀನು ಕಳೆದುಕೊಂಡು ಊರು ಬಿಟ್ಟು, ಪತ್ನಿ ಊರಾದ ಬನ್ನೂರಿನಲ್ಲಿ ನೆಲೆಸಿದ್ದರು. 6 ತಿಂಗಳ ಹಿಂದೆ ಅವರಿಗೆ ಮದುವೆ ಒಂದರಲ್ಲಿ ಆರೋಪಿಗಳಾದ ನಾಗರಾಜು ಹಾಗೂ ಪಾರ್ಥಸಾರಥಿ ಅವರ ಪರಿಚಯ ಆಗಿತ್ತು. ಅವರ ಬಳಿ ಶ್ರೀನಿವಾಸ ತಮ್ಮ ಕಷ್ಟ ಹೇಳಿಕೊಂಡಿದ್ದರು.
ನಿಮ್ಮ ಮನೆಯಲ್ಲಿ ನಿಧಿ ಇರುವ ಕಾರಣ ಹೀಗೆಲ್ಲ ನಷ್ಟ ಆಗುತ್ತಿದೆ ಎಂದು ನಂಬಿಸಿದ್ದ ಆರೋಪಿಗಳು ತಮಿಳುನಾಡಿನ ಶಶಿಕುಮಾರ್ ಎಂಬ ಪೂಜಾರಿ ಮೂಲಕ ಶ್ರೀನಿವಾಸ ಅವರ ಮನೆಯಲ್ಲಿ ನಿರಂತರ ಪೂಜೆ ಹಮ್ಮಿಕೊಳ್ಳುತ್ತಾ ಬಂದಿದ್ದರು. ಮಹಿಳೆಯನ್ನು ಬೆತ್ತಲಾಗಿಸಿ ಪೂಜೆ ನಡೆಸಿದರೆ ನಿಧಿ ದೊರೆಯುತ್ತದೆ ಎಂದು ನಂಬಿಸಿದ್ದ, ಆರೋಪಿಗಳು ಮಂಗಳವಾರ ಪೂಜೆಗಾಗಿ ಕೂಲಿ ಕಾರ್ಮಿಕ ಮಹಿಳೆ ಒಬ್ಬರಿಗೆ ₹ 50 ಸಾವಿರ ಆಮಿಷವೊಡ್ಡಿ ಕರೆ ತಂದಿದ್ದರು. ಪೂಜೆ ನಡೆಯುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ಬಂಧಿಸಿದರು.
ಮೌಢ್ಯ ನಿಷೇಧ ಕಾಯ್ದೆ ಉಲ್ಲಂಘನೆ, ಪೂಜೆಗೆ ಕೂಲಿ ಕಾರ್ಮಿಕ ಮಹಿಳೆ ಬಳಕೆ, ನಿಧಿ ನೆಪದಲ್ಲಿ ಮನೆ ಮಾಲೀಕರಿಗೆ ವಂಚನೆ ಯತ್ನ ಸೇರಿದಂತೆ ವಿವಿಧ ಆರೋಪಗಳ ಅಡಿ ಸಾತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…