ರಾಜ್ಯ ನ್ಯೂಸ್

ನಿಪಾಹ್ ವೈರಸ್ ಸೋಂಕಿಗೆ ಬಾವಲಿಗಳು ಕಾರಣವಲ್ಲ,.. ಈ ಮಾರಣಾಂತಿಕ ವೈರಸ್ ನಿಗೂಢ, ಪ್ರಯೋಗಾಲಯ ವರದಿ

ಕೇರಳದಲ್ಲಿ ಈಗಾಗಲೇ 12 ಮಂದಿಯನ್ನು ಬಲಿ ಪಡೆದಿರುವ ಹಾಗೂ ದೇಶಾದ್ಯಂತ ಆತಂಕಕ್ಕೆ ಕಾರಣವಾಗಿರವ ನಿಪಾಹ್ ವೈರಸ್ ಬಾವಲಿಗಳ ಮೂಲಕ ಹರಡುತ್ತಿದೆ ಎಂದು ವ್ಯಾಪಕವಾಗಿ ನಂಬಲಾಗಿತ್ತಾದರೂ ಭೋಪಾಲದ ನ್ಯಾಷನಲ್ ಇನಸ್ಟಿಟ್ಯೂಟ್ ಆಫ್ ಹೈ ಸೆಕ್ಯುರಿಟಿ ಅನಿಮಲ್ ಡಿಸೀಸಸ್ ಇಲ್ಲಿ ಪರೀಕ್ಷಿಸಲ್ಪಟ್ಟ 21 ಬಾವಲಿಗಳ ರಕ್ತ ಹಾಗೂ ಸೀರಂ ಮಾದರಿಗಳಲ್ಲಿ ನಿಪಾಹ್ ವೈರಸ್ ಇಲ್ಲ ಎಂಬುದು ದೃಢಪಟ್ಟ ಹಿನ್ನೆಲೆಯಲ್ಲಿ ನಿಪಾಹ್ ಹೇಗೆ ಹರಡುತ್ತದೆ ಎಂಬ ವಿಚಾರ ಇನ್ನಷ್ಟು ನಿಗೂಢವಾಗಿ ಬಿಟ್ಟಿದೆ.

ಪ್ರಯೋಗಾಲಯ ವರದಿಗಳ ಹಿನ್ನೆಲೆಯಲ್ಲಿ ಆರೋಗ್ಯಾಧಿಕಾರಿಗಳು ನಿಪಾಹ್ ವೈರಸ್ ಸೋಂಕಿಗೆ ಮೊದಲು ಬಲಿಯಾದ ಕೇರಳದ ಮೊಹಮ್ಮದ್ ಸಾಬಿತ್ (26) ಎಂಬ ಯುವಕ ಎಲ್ಲೆಲ್ಲಿಗೆ ಪಯಣಿಸಿದ್ದ ಎಂಬ ಬಗ್ಗೆ ಮಾಹಿತಿ ಪಡೆಯಲು ನಿರ್ಧರಿಸಿದ್ದಾರೆ.

ಸೌದಿ ಅರೇಬಿಯಾದಲ್ಲಿ ಹೆಲ್ಪರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಸಾಬಿತ್ ಕೆಲ ಸಮಯದ ಹಿಂದೆ ಮನೆಗೆ ಹಿಂದಿರುಗಿದ್ದಾಗ `ಹೊಟ್ಟೆಯ ಸಮಸ್ಯೆ’ ಎದುರಿಸುತ್ತಿದ್ದ ಎಂದು ಆತನ ತಾಯಿ ಹೇಳಿದ್ದರು. ಆತನ ಕುಟುಂಬದ ನಾಲ್ಕು ಮಂದಿಯೂ ಈ ವೈರಸ್ ಸೋಂಕಿಗೆ ಬಲಿಯಾಗಿದ್ದರಿಂದ ಆರೋಗ್ಯಾಧಿಕಾರಿಗಳು ಈ ವೈರಾಣುವಿನ ಮೂಲ ಹುಡುಕಲಾರಂಭಿಸಿದ್ದು ಚಂಗರೊತ್ ಗ್ರಾಮದಲ್ಲಿರುವ ಕುಟುಂಬದ ಮನೆಯ ಬಾವಿಯಲ್ಲಿ ಬಾವಲಿಗಳು ಸತ್ತು ಬಿದ್ದಿರುವುದನ್ನು ಪತ್ತೆ ಹಚ್ಚಿದ್ದರು. ಸಾಮಾನ್ಯವಾಗಿ ಪಾರಾಮೈಕ್ಸೊವಿರಿಡಾಯಿ ಕುಟುಂಬದ ಹೆನಿಪವೈರಸ್ ಜಾತಿಗೆ ಸೇರಿರುವ ಬಾವಲಿಗಳಲ್ಲಿ ಈ ಎನ್‍ಐವಿ ವೈರಸ್ ಕಂಡು ಬರುವುದರಿಂದ ಈ ಬಾವಲಿಗಳ ರಕ್ತ ಹಾಗೂ ಸೀರಂ ಮಾದರಿಗಳ ಜತೆಗೆ ಸಾಕು ಪ್ರಾಣಿಗಳಾದ ದನ, ಆಡು, ಮೊಲ, ನಾಯಿ ಹಾಗೂ ಬೆಕ್ಕುಗಳ ರಕ್ತ ಮಾದರಿಗಳನ್ನೂ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಆದರೆ ಈಗ ಯಾವುದರಲ್ಲೂ ನಿಪಾಹ್ ವೈರಸ್ ಪತ್ತೆಯಾಗಿಲ್ಲ ಎಂಬುದು ಗೊಂದಲಕ್ಕೆ ಕಾರಣವಾಗಿದೆ.

“ಇವು ಆರಂಭಿಕ ಫಲಿತಾಂಶವಷ್ಟೇ ಆಗಿರಬಹುದು, ಈ ನಿಟ್ಟಿನಲ್ಲಿ ಇನ್ನಷ್ಟು ಪರೀಕ್ಷೆಗಳು ನಡೆಯಬೇಕಿದೆ. ಹಿಂದೆ ಕೂಡ ಈ ರೋಗ ಕಾಣಿಸಿಕೊಂಡಾಗ ಅವುಗಳ ಮೂಲ ಬಾವಲಿಗಳೇ ಆಗಿದ್ದವು. ಪ್ರಾಯಶಃ ಪರೀಕ್ಷಿಸಲ್ಪಟ್ಟ ಮಾದರಿಗಳಲ್ಲಿ ಈ ವೈರಸ್ ಇಲ್ಲದೇ ಇದ್ದಿರಬಹುದು” ಎಂದು ಕೆಲ ಅಧಿಕಾರಿಗಳು ಹೇಳಿದ್ದಾರೆ.

ಅತ್ತ ಕೇರಳದ ಕೊಝಿಕ್ಕೋಡ್ ಹಾಗೂ ಮಲಪ್ಪುರಂ ಜಿಲ್ಲೆಗಳಲ್ಲಿ ನಿಪಾಹ್ ಬಗ್ಗೆ ಭೀತರಾಗಿ ಹಲವು ಕುಟುಂಬಗಳು ತಮ್ಮ ಮನೆಗಳು ಹಾಗೂ ಸಾಕು ಪ್ರಾಣಿಗಳನ್ನು ತೊರೆದು ಇತರೆಡೆ ವಲಸೆ ಹೋಗುತ್ತಿವೆ. ಜನರಲ್ಲಿ ಆತ್ಮವಿಶ್ವಾಸ ಮೂಡಿಸಲು ಎಲ್ಲಾ ಪಕ್ಷಗಳ ನಾಯಕರೂ ಕೊಝಿಕ್ಕೋಡಿನಲ್ಲಿ ಪಾದಯಾತ್ರೆ ಕೈಗೊಳ್ಳಲು ನಿರ್ಧರಿಸಿದ್ದು ರಾಜ್ಯ ಆರೋಗ್ಯ ಸಚಿವೆ ಕೆ ಕೆ ಶೈಲಜಾ ಹಾಗೂ ಅಬಕಾರಿ ಸಚಿವ ಟಿ ಪಿ ರಾಮಕೃಷ್ಣನ್ ಕೂಡ ರ್ಯಾಲಿಯಲ್ಲಿ ಭಾಗವಹಿಸಲಿದ್ದಾರೆ.

ನಿಪಾಹ್ ವೈರಸ್ ಸೋಂಕಿನಿಂದ ಮೃತಪಟ್ಟವರ ಕಳೇಬರಗಳನ್ನು ವಿದ್ಯುತ್ ಚಿತಾಗಾರದಲ್ಲಿ ಸುಡಲು ನಿರಾಕರಿಸಿದ ಉದ್ಯೋಗಿಗಳನ್ನೂ ಸೇವೆಯಿಂದ ವಜಾಗೊಳಿಸಲು ಕೇರಳ ಸರಕಾರ ನಿರ್ಧರಿಸಿದೆ.

“ಪರಿಸ್ಥಿತಿ ನಿಯಂತ್ರಣದಲ್ಲಿದೆ, ಯಾವುದೇ ಭಯದ ಅಗತ್ಯವಿಲ್ಲ, ಸರಕಾರ ಎಲ್ಲಾ ಮುಂಜಾಗರೂಕತಾ ಕ್ರಮಗಳನ್ನು ಕೈಗೊಂಡಿದೆ” ಎಂದು ಸಚಿವೆ ಶೈಲಜಾ ಹೇಳಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

1 day ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago