ರಾಜ್ಯ ನ್ಯೂಸ್

ನಿಪಾಹ್ ವೈರಸ್ ಸೋಂಕಿಗೆ ಬಾವಲಿಗಳು ಕಾರಣವಲ್ಲ,.. ಈ ಮಾರಣಾಂತಿಕ ವೈರಸ್ ನಿಗೂಢ, ಪ್ರಯೋಗಾಲಯ ವರದಿ

ಕೇರಳದಲ್ಲಿ ಈಗಾಗಲೇ 12 ಮಂದಿಯನ್ನು ಬಲಿ ಪಡೆದಿರುವ ಹಾಗೂ ದೇಶಾದ್ಯಂತ ಆತಂಕಕ್ಕೆ ಕಾರಣವಾಗಿರವ ನಿಪಾಹ್ ವೈರಸ್ ಬಾವಲಿಗಳ ಮೂಲಕ ಹರಡುತ್ತಿದೆ ಎಂದು ವ್ಯಾಪಕವಾಗಿ ನಂಬಲಾಗಿತ್ತಾದರೂ ಭೋಪಾಲದ ನ್ಯಾಷನಲ್ ಇನಸ್ಟಿಟ್ಯೂಟ್ ಆಫ್ ಹೈ ಸೆಕ್ಯುರಿಟಿ ಅನಿಮಲ್ ಡಿಸೀಸಸ್ ಇಲ್ಲಿ ಪರೀಕ್ಷಿಸಲ್ಪಟ್ಟ 21 ಬಾವಲಿಗಳ ರಕ್ತ ಹಾಗೂ ಸೀರಂ ಮಾದರಿಗಳಲ್ಲಿ ನಿಪಾಹ್ ವೈರಸ್ ಇಲ್ಲ ಎಂಬುದು ದೃಢಪಟ್ಟ ಹಿನ್ನೆಲೆಯಲ್ಲಿ ನಿಪಾಹ್ ಹೇಗೆ ಹರಡುತ್ತದೆ ಎಂಬ ವಿಚಾರ ಇನ್ನಷ್ಟು ನಿಗೂಢವಾಗಿ ಬಿಟ್ಟಿದೆ.

ಪ್ರಯೋಗಾಲಯ ವರದಿಗಳ ಹಿನ್ನೆಲೆಯಲ್ಲಿ ಆರೋಗ್ಯಾಧಿಕಾರಿಗಳು ನಿಪಾಹ್ ವೈರಸ್ ಸೋಂಕಿಗೆ ಮೊದಲು ಬಲಿಯಾದ ಕೇರಳದ ಮೊಹಮ್ಮದ್ ಸಾಬಿತ್ (26) ಎಂಬ ಯುವಕ ಎಲ್ಲೆಲ್ಲಿಗೆ ಪಯಣಿಸಿದ್ದ ಎಂಬ ಬಗ್ಗೆ ಮಾಹಿತಿ ಪಡೆಯಲು ನಿರ್ಧರಿಸಿದ್ದಾರೆ.

ಸೌದಿ ಅರೇಬಿಯಾದಲ್ಲಿ ಹೆಲ್ಪರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಸಾಬಿತ್ ಕೆಲ ಸಮಯದ ಹಿಂದೆ ಮನೆಗೆ ಹಿಂದಿರುಗಿದ್ದಾಗ `ಹೊಟ್ಟೆಯ ಸಮಸ್ಯೆ’ ಎದುರಿಸುತ್ತಿದ್ದ ಎಂದು ಆತನ ತಾಯಿ ಹೇಳಿದ್ದರು. ಆತನ ಕುಟುಂಬದ ನಾಲ್ಕು ಮಂದಿಯೂ ಈ ವೈರಸ್ ಸೋಂಕಿಗೆ ಬಲಿಯಾಗಿದ್ದರಿಂದ ಆರೋಗ್ಯಾಧಿಕಾರಿಗಳು ಈ ವೈರಾಣುವಿನ ಮೂಲ ಹುಡುಕಲಾರಂಭಿಸಿದ್ದು ಚಂಗರೊತ್ ಗ್ರಾಮದಲ್ಲಿರುವ ಕುಟುಂಬದ ಮನೆಯ ಬಾವಿಯಲ್ಲಿ ಬಾವಲಿಗಳು ಸತ್ತು ಬಿದ್ದಿರುವುದನ್ನು ಪತ್ತೆ ಹಚ್ಚಿದ್ದರು. ಸಾಮಾನ್ಯವಾಗಿ ಪಾರಾಮೈಕ್ಸೊವಿರಿಡಾಯಿ ಕುಟುಂಬದ ಹೆನಿಪವೈರಸ್ ಜಾತಿಗೆ ಸೇರಿರುವ ಬಾವಲಿಗಳಲ್ಲಿ ಈ ಎನ್‍ಐವಿ ವೈರಸ್ ಕಂಡು ಬರುವುದರಿಂದ ಈ ಬಾವಲಿಗಳ ರಕ್ತ ಹಾಗೂ ಸೀರಂ ಮಾದರಿಗಳ ಜತೆಗೆ ಸಾಕು ಪ್ರಾಣಿಗಳಾದ ದನ, ಆಡು, ಮೊಲ, ನಾಯಿ ಹಾಗೂ ಬೆಕ್ಕುಗಳ ರಕ್ತ ಮಾದರಿಗಳನ್ನೂ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಆದರೆ ಈಗ ಯಾವುದರಲ್ಲೂ ನಿಪಾಹ್ ವೈರಸ್ ಪತ್ತೆಯಾಗಿಲ್ಲ ಎಂಬುದು ಗೊಂದಲಕ್ಕೆ ಕಾರಣವಾಗಿದೆ.

“ಇವು ಆರಂಭಿಕ ಫಲಿತಾಂಶವಷ್ಟೇ ಆಗಿರಬಹುದು, ಈ ನಿಟ್ಟಿನಲ್ಲಿ ಇನ್ನಷ್ಟು ಪರೀಕ್ಷೆಗಳು ನಡೆಯಬೇಕಿದೆ. ಹಿಂದೆ ಕೂಡ ಈ ರೋಗ ಕಾಣಿಸಿಕೊಂಡಾಗ ಅವುಗಳ ಮೂಲ ಬಾವಲಿಗಳೇ ಆಗಿದ್ದವು. ಪ್ರಾಯಶಃ ಪರೀಕ್ಷಿಸಲ್ಪಟ್ಟ ಮಾದರಿಗಳಲ್ಲಿ ಈ ವೈರಸ್ ಇಲ್ಲದೇ ಇದ್ದಿರಬಹುದು” ಎಂದು ಕೆಲ ಅಧಿಕಾರಿಗಳು ಹೇಳಿದ್ದಾರೆ.

ಅತ್ತ ಕೇರಳದ ಕೊಝಿಕ್ಕೋಡ್ ಹಾಗೂ ಮಲಪ್ಪುರಂ ಜಿಲ್ಲೆಗಳಲ್ಲಿ ನಿಪಾಹ್ ಬಗ್ಗೆ ಭೀತರಾಗಿ ಹಲವು ಕುಟುಂಬಗಳು ತಮ್ಮ ಮನೆಗಳು ಹಾಗೂ ಸಾಕು ಪ್ರಾಣಿಗಳನ್ನು ತೊರೆದು ಇತರೆಡೆ ವಲಸೆ ಹೋಗುತ್ತಿವೆ. ಜನರಲ್ಲಿ ಆತ್ಮವಿಶ್ವಾಸ ಮೂಡಿಸಲು ಎಲ್ಲಾ ಪಕ್ಷಗಳ ನಾಯಕರೂ ಕೊಝಿಕ್ಕೋಡಿನಲ್ಲಿ ಪಾದಯಾತ್ರೆ ಕೈಗೊಳ್ಳಲು ನಿರ್ಧರಿಸಿದ್ದು ರಾಜ್ಯ ಆರೋಗ್ಯ ಸಚಿವೆ ಕೆ ಕೆ ಶೈಲಜಾ ಹಾಗೂ ಅಬಕಾರಿ ಸಚಿವ ಟಿ ಪಿ ರಾಮಕೃಷ್ಣನ್ ಕೂಡ ರ್ಯಾಲಿಯಲ್ಲಿ ಭಾಗವಹಿಸಲಿದ್ದಾರೆ.

ನಿಪಾಹ್ ವೈರಸ್ ಸೋಂಕಿನಿಂದ ಮೃತಪಟ್ಟವರ ಕಳೇಬರಗಳನ್ನು ವಿದ್ಯುತ್ ಚಿತಾಗಾರದಲ್ಲಿ ಸುಡಲು ನಿರಾಕರಿಸಿದ ಉದ್ಯೋಗಿಗಳನ್ನೂ ಸೇವೆಯಿಂದ ವಜಾಗೊಳಿಸಲು ಕೇರಳ ಸರಕಾರ ನಿರ್ಧರಿಸಿದೆ.

“ಪರಿಸ್ಥಿತಿ ನಿಯಂತ್ರಣದಲ್ಲಿದೆ, ಯಾವುದೇ ಭಯದ ಅಗತ್ಯವಿಲ್ಲ, ಸರಕಾರ ಎಲ್ಲಾ ಮುಂಜಾಗರೂಕತಾ ಕ್ರಮಗಳನ್ನು ಕೈಗೊಂಡಿದೆ” ಎಂದು ಸಚಿವೆ ಶೈಲಜಾ ಹೇಳಿದ್ದಾರೆ.

Vishwa News 24

Recent Posts

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು – vishwanews24

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್‌ಸ್ಟಾಗ್ರಾಮ್…

16 minutes ago

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ – vishwanews24

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…

37 minutes ago

ಉಡುಪಿ: ಸ್ಪೀಡ್‌ ರಾಡಾರ್‌ ಕೆಮರಾ ಕಣ್ಣು ; ಒಂದು ವಾರದಲ್ಲಿ 47,709 ವಾಹನಗಳು ಸಂಚಾರ ನಿಯಮ ಉಲ್ಲಂಘನೆ  – vishwanews24

ಉಡುಪಿ: ಸ್ಪೀಡ್‌ ರಾಡಾರ್‌ ಕೆಮರಾ ಕಣ್ಣು ; ಒಂದು ವಾರದಲ್ಲಿ 47,709 ವಾಹನಗಳು ಸಂಚಾರ ನಿಯಮ ಉಲ್ಲಂಘನೆ  ಉಡುಪಿ :…

54 minutes ago

CMRL ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ಈಡಿ ದಾಳಿ – vishwanews24

CMRL ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ಈಡಿ ದಾಳಿ ತಿರುವನಂತಪುರಂ: ಕೊಚ್ಚಿನ್…

1 hour ago

ಮೇ 30-31 ರಂದು ದ.ಕ. ಜಿಲ್ಲೆಗೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಭೇಟಿ – vishwanews24

ಮೇ 30-31 ರಂದು ದ.ಕ. ಜಿಲ್ಲೆಗೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಭೇಟಿ ಮಂಗಳೂರು: ಭಾರತದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು…

1 hour ago

ಬೇಕರಿ ತಿನಿಸು, ಚಿಪ್ಸ್‌ಗಳಲ್ಲಿ ಕ್ಯಾನ್ಸರ್ ಕಾರಕ ರಾಸಾಯನಿಕ ಬಣ್ಣಗಳ ಬಳಕೆ: ಆಹಾರ ಸುರಕ್ಷತಾ ಇಲಾಖೆ ವರದಿ ಪ್ರಕಟ – vishwanews24

ಬೇಕರಿ ತಿನಿಸು, ಚಿಪ್ಸ್‌ಗಳಲ್ಲಿ ಕ್ಯಾನ್ಸರ್ ಕಾರಕ ರಾಸಾಯನಿಕ ಬಣ್ಣಗಳ ಬಳಕೆ: ಆಹಾರ ಸುರಕ್ಷತಾ ಇಲಾಖೆ ವರದಿ ಪ್ರಕಟ ಬೆಂಗಳೂರು: ಬೇಕರಿಯ…

1 hour ago