ಫಾರಂ ಕೋಳಿಗಳಿಂದನಿಫಾ ವೈರಸ್ ಹರಡುತ್ತದೆ ಎಂದು ಸಾಮಾಜಿಕ ತಾಣ ಹಾಗೂ ವಾಟ್ಸ್ ಆಪ್ಗಳಲ್ಲಿ ಸುಳ್ಳು ಸಂದೇಶರವಾನೆ ಸಂಬಂಧ 2 ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.
ಫಾರಂ ಕೋಳಿ ವಿತರಕರ ಸಂಘವು, ಸುಳ್ಳು ಮಾಹಿತಿ ಹಬ್ಬಿಸುತ್ತಿರುವ ಬಗ್ಗೆ ದೂರು ನೀಡಿದ್ದು, ಈ ಸಂಬಂಧ ಮೂವಾಟ್ಟುಪುಳದಲ್ಲಿ ಓರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ಓರ್ವನನ್ನು ವಿಚಾರಣೆ ನಡೆಸಿ ಬಿಡುಗಡೆ ಮಾಡಿರುವುದಾಗಿ ತಿಳಿದು ಬಂದಿದೆ.
ಕಣ್ಣೂರಿನ ಮೂವಾಟ್ಟುಪುಳದಲ್ಲಿ ಕೋಳಿಗಳಿಂದ ನಿಫಾ ವೈರಸ್ ಹರಡುತ್ತಿರುವುದನ್ನು ಪುಣೆಯ ವೈರಾಲಜಿ ಸಂಸ್ಥೆ ನಿರ್ದೇಶಕ ಡಾ. ಆನಂದ ಬಸು ಅವರು ಖಚಿತಪಡಿಸಿದ್ದಾರೆ ಎಂಬ ವಾಟ್ಸ್ಆಪ್ ಸಂದೇಶವನ್ನು ರವಾನಿಸಿದ್ದಾರೆ. ಈ ಸಂಬಂಧ ಸುನಿಲ್ ಕುಮಾರ್(28) ಬಂಧಿಸಲಾಗಿದೆ. ಸುನಿಲ್ ಕುಮಾರ್ ತನೆಗೆ ಬಂದ ಸಂದೇಶಕ್ಕೆ ಸಂದೇಶ ರವಾನಿಸಿ, ಜೀವ ಉಳಿಸಿ ಎಂಬ ಟ್ಯಾಗ್ ಲೈನ್ ಸೇರಿಸಿ, ಇತರರಿಗೆ ಕಳುಹಿಸಿದ್ದಾನೆ. ಅಲ್ಲದೆ ಕೋಳಿ ಮಾಂಸ ತಿನ್ನದಂತೆ ಎಚ್ಚರಿಕೆ ಸಂದೇಶವನ್ನೂ ರವಾನಿಸಿರುವುದಾಗಿ ಕಣ್ಣೂರು ನಗರ ಉಪ ಪೊಲೀಸ್ ಅಧೀಕ್ಷಕ ಶ್ರೀಜಿತ್ ಕೊಡೇರಿ ತಿಳಿಸಿದ್ದಾರೆ.
ನಕಲಿ ಸಂದೇಶ
ಮತ್ತೊಂದು ಪ್ರಕರಣದಲ್ಲಿ, ಫಾರಂ ಕೋಳಿಗಳಲ್ಲಿ ನಿಫಾ ವೈರಸ್ ಪತ್ತೆಯಾಗಿದ್ದು, ಪ್ರಯೋಗಾಲಯಗಳು ಈ ವಿಚಾರವನ್ನು ಅಧಿಕೃತಗೊಳಿಸಿದೆ. ಅಲ್ಲದೆ ಆರೋಗ್ಯ ಇಲಾಖೆಯೂ ಈ ಬಗ್ಗೆ ಎಚ್ಚರಿಕೆ ನೀಡಿರುವುದಾಗಿ ಸಂದೇಶ ಹರಿದಾಡಿತ್ತು. ಅಲ್ಲದೆ ಜಿಲ್ಲಾ ಆರೋಗ್ಯ ಅಧಿಕಾರಿಗಳ ನಕಲಿ ಸೀಲ್ ಬಳಸಿ, ಎಚ್ಚರಿಕೆ ಸಂದೇಶಗಳನ್ನೂ ರವಾನಿಸಲಾಗಿದೆ. ಈ ಸಂಬಂಧ ಓರ್ವನನ್ನು ವಿಚಾರಣೆ ನಡೆಸಿರುವ ಅಧಿಕಾರಿಗಳು ಬಳಿಕ ಬಿಡುಗಡೆ ಮಾಡಿದ್ದಾರೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…