Featured

ನಿಮಗೆ ಅಧಿಕಾರ ಕೊಟ್ಟ ಕನ್ನಡಿಗರ ದೌರ್ಭಾಗ್ಯ : ಆರಗ ಜ್ಞಾನೇಂದ್ರ ಗೆ ಎಚ್‌ಡಿಕೆ – Vishwanews24

ಮನುಷ್ಯನ ಜೀವಕ್ಕೆ ಬೆಲೆ ಏನಾದರೂ‌ ಇದೆಯಾ? ಜೈಲುಗಳು ಸಾವಿನ ಕೂಪ ..

ಬೆಂಗಳೂರು : ರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರೇ, ನಿಮ್ಮ ಸರ್ಕಾರದ ಆಡಳಿತದಲ್ಲಿ ಮನುಷ್ಯನ ಜೀವಕ್ಕೆ ಬೆಲೆ ಏನಾದರೂ‌ ಇದೆಯಾ? ಜೈಲುಗಳು ಸಾವಿನ ಕೂಪ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

2021ರ ರಾಷ್ಟ್ರೀಯ ಅಪರಾಧ ದಾಖಲೆಗಳ (ಎನ್ ಸಿಆರ್ ಬಿ) ಬ್ಯೂರೋ ವರದಿ ಪ್ರಕಾರ ಕರ್ನಾಟಕದ ಜೈಲುಗಳಲ್ಲಿ ಅನಾರೋಗ್ಯದ ಕಾರಣ 58 ಕೈದಿಗಳು ಸಾವೀಗೀಡಾಗಿರುವ ಕುರಿತು ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ದ ಸರಣಿ ಟ್ವೀಟ್ ಮಾಡಿರುವ ಎಚ್‌ಡಿಕೆ, ನಿಮ್ಮದೇ ಪಕ್ಷದ ಕಾರ್ಯಕರ್ತರಿಗೂ ಜೀವರಕ್ಷಣೆ ಇಲ್ಲ. ಜೈಲುಗಳಲ್ಲಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳಿಗೂ ಸಮರ್ಪಕ ಆರೋಗ್ಯ ವ್ಯವಸ್ಥೆ ಕಲ್ಪಿಸಲು ವಿಫಲರಾಗಿದ್ದೀರಿ. ಮಾನವ ಹಕ್ಕುಗಳು ನಿಮ್ಮ ಪಾಲಿಗೆ ತಮಾಷೆಯ ಸಂಗತಿ ಇರಬೇಕೇನೋ. ನಿಮಗೆ ಅಧಿಕಾರ ಕೊಟ್ಟ ಕನ್ನಡಿಗರ ದೌರ್ಭಾಗ್ಯ ಇದು ಎಂದರು.

ಸಾವಿಗೀಡಾದ 58 ಕೈದಿಗಳಲ್ಲಿ 16 ಮಂದಿ ಹೃದಯಾಘಾತ, 11 ಜನ ಶ್ವಾಸಕೋಶ ಸಂಬಂಧಿ ಕಾಯಿಲೆ, ಉಳಿದವರು ಎಚ್ ಐವಿ & ಟಿ.ಬಿ., ಯಕೃತ್ತು, ಕಿಡ್ನಿ, ಕ್ಯಾನ್ಸರ್ ಸಮಸ್ಯೆಗಳಿಂದ ಬಳಲುತ್ತಿದ್ದರು. ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಕಾರ ಬೆಂಗಳೂರಿನ ಕಾರಾಗೃಹಗಳಲ್ಲಿರುವ 8,681 ಕೈದಿಗಳಿಗೆ ಸಮರ್ಪಕ ಆರೋಗ್ಯ ಸೇವೆಯ ಅಗತ್ಯವಿತ್ತು. ಆದರೆ, ಕೇವಲ 2,537 ಮಂದಿಗೆ ಮಾತ್ರ ವೈದ್ಯಕೀಯ ನೆರವು ಸಿಕ್ಕಿದೆ. ಜೈಲುಗಳೂ ಅಸಮರ್ಪಕ ಅವ್ಯವಸ್ಥೆಯಿಂದ ಕೊಳೆಯುತ್ತಿರುವ ಸಂಗತಿ 40% ಕಮಿಷನ್ ಸರ್ಕಾರಕ್ಕೆ ತಿಳಿದಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

ರಾಜ್ಯ ಬಂಧೀಖಾನೆಗಳಲ್ಲಿ 80 ಜನರ ಆರೋಗ್ಯ ಸಿಬ್ಬಂದಿಯ ಅಗತ್ಯ ಇದೆ. ಅಂಕಿ-ಸಂಖ್ಯೆಯ ಪ್ರಕಾರ ಕೇವಲ 31 ಮಂದಿಯ ಸಿಬ್ಬಂದಿ ವರ್ಗ ಕಾರ್ಯನಿರ್ವಹಿಸುತ್ತಿದೆ ಎಂದು ಎನ್ ಸಿ ಆರ್ ಬಿ ವರದಿ ಬಹಿರಂಗಗೊಳಿಸಿದೆ. 27 ಮಂದಿ ಆರೋಗ್ಯ ವೈದ್ಯಕೀಯ ಅಧಿಕಾರಿಗಳ ಬದಲಿಗೆ 9 ಜನ ಅಧಿಕಾರಿಗಳು ಮಾತ್ರ ಕೆಲಸ ಮಾಡುತ್ತಿದ್ದಾರೆ. 499 ಕೈದಿಗಳಿಗೆ ಒಬ್ಬ ಆರೋಗ್ಯ ಸಿಬ್ಬಂದಿ ಕೆಲಸ ಮಾಡುತ್ತಿರುವ ಸಂಗತಿ ರಾಷ್ಟ್ರಮಟ್ಟದಲ್ಲಿ ರಾಜ್ಯದ ಮಾನ ಹರಾಜು ಹಾಕಿದೆ. ಅರಗ ಜ್ಞಾನೇಂದ್ರ ಅವರೆ, ನಿಮ್ಮ ಆಡಳಿತದಲ್ಲಿ ಸಾಮಾನ್ಯ ರೈತನಿಗಾಗಲಿ, ಕೆಲಸ ಸಿಗದೇ ಪರಿತಪಿಸುತ್ತಿರುವ ಯುವಕ-ಯುವತಿಯರಿಗಾಗಲಿ, ಕಮಿಷನ್ ದಂಧೆಯಲ್ಲಿ ಹೈರಾಣಾಗಿ ಜೀವ ಕಳೆದುಕೊಳ್ಳುತ್ತಿರುವ ಗುತ್ತಿಗೆದಾರರಿಗಾಗಲಿ, ಅಧಿಕಾರಿ ವರ್ಗವಾಗಲಿ, ಕಾರ್ಮಿಕರಾಗಲಿ ಯಾರೂ ಸುರಕ್ಷಿತವಾಗಿಲ್ಲ ಎಂದು ಆರೋಪಿಸಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

23 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

23 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago