ಬೆಂಗಳೂರು: ನಿಮಗೆ ಧೈರ್ಯ ಇಲ್ಲದಿದ್ರೆ ನಮ್ಮನ್ನ ಕರೆದುಕೊಂಡು ಹೋಗಿ , ನಾವು ಪ್ರಧಾನಿ ಹತ್ತಿರ ಮಾತನಾಡುತ್ತೇವೆ ಎಂದು ಸಿಎಂ ವಿರುದ್ಧ ಮಾಜಿ ಸಿ.ಎಂ ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದರು.
ನೆರೆ ಪರಿಹಾರದ ವಿಷಯದಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಮೊದಲು ವಿಶೇಷ ಅಧಿವೇಶನ ಕರೆಯಿರಿ, ರಾಜ್ಯದ ಜನರು ಕಷ್ಟ, ಸಮಸ್ಯೆ ಚರ್ಚಿಸಬೇಕು, ನಿಮಗೆ ಶಕ್ತಿ, ಸಲಹೆ ಕೊಡುತ್ತೇವೆ. ನಮ್ಮ ಕಾಂಗ್ರೆಸ್ ಪಕ್ಷದವತಿಯಿಂದ ಈ ವಿಚಾರದಲ್ಲಿ ಸಹಕಾರ ನೀಡುತ್ತೇವೆ ಎಂದು ಅವರು ಹೇಳಿದರು.
ಸದ್ಯ ಸರ್ಕಾರ ಸುಮ್ಮನಿದ್ದರೂ ನಾವು ಸುಮ್ಮನೆ ಕೂರಲ್ಲ, ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ. ಇದು ಬೆದರಿಕೆ ಅಲ್ಲ, ಪ್ರತಿಪಕ್ಷವಾಗಿ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಎಚ್ಚರಿಕೆ ಸಂದೇಶ ನೀಡಿದರು.
ಇದೇ ವೇಳೆಯಲ್ಲಿ ರಾಜ್ಯದ ೭ ಜಿಲ್ಲೆಗಳಲ್ಲಿ ಭೀಕರ ಬರಗಾಲವಿದೆ. ಕೂಡಲೇ ಬರಪರಿಹಾರ ಕಾರ್ಯಕ್ರಮ ತೆಗೆದುಕೊಳ್ಳಬೇಕು. ಪ್ರವಾಹ ಪ್ರದೇಶಗಳಲ್ಲಿ ಸಮಾರೋಪಾದಿಯಲ್ಲಿ ಕೆಲಸ ಆಗಬೇಕು, ಬಿದ್ದ ಶಾಲೆಗಳನ್ನ ಕೂಡಲೇ ಪ್ರಾರಂಭಿಸಬೇಕು. ಕನಿಷ್ಠ ಒಂದು ಲಕ್ಷ ಕೋಟಿ ಇದಕ್ಕೆ ಬೇಕಿದೆ. ಕೂಡಲೆ ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ ಎಂದು ಅವರು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದರು.
ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…
ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…
ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…
ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ ಕಾಪು: ಕಾಪು ಕಡಲ ಕಿನಾರೆಯಲ್ಲಿ…
ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…
ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…