ಬೆಂಗಳೂರು: ನಿಮಗೆ ಧೈರ್ಯ ಇಲ್ಲದಿದ್ರೆ ನಮ್ಮನ್ನ ಕರೆದುಕೊಂಡು ಹೋಗಿ , ನಾವು ಪ್ರಧಾನಿ ಹತ್ತಿರ ಮಾತನಾಡುತ್ತೇವೆ ಎಂದು ಸಿಎಂ ವಿರುದ್ಧ ಮಾಜಿ ಸಿ.ಎಂ ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದರು.
ನೆರೆ ಪರಿಹಾರದ ವಿಷಯದಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಮೊದಲು ವಿಶೇಷ ಅಧಿವೇಶನ ಕರೆಯಿರಿ, ರಾಜ್ಯದ ಜನರು ಕಷ್ಟ, ಸಮಸ್ಯೆ ಚರ್ಚಿಸಬೇಕು, ನಿಮಗೆ ಶಕ್ತಿ, ಸಲಹೆ ಕೊಡುತ್ತೇವೆ. ನಮ್ಮ ಕಾಂಗ್ರೆಸ್ ಪಕ್ಷದವತಿಯಿಂದ ಈ ವಿಚಾರದಲ್ಲಿ ಸಹಕಾರ ನೀಡುತ್ತೇವೆ ಎಂದು ಅವರು ಹೇಳಿದರು.
ಸದ್ಯ ಸರ್ಕಾರ ಸುಮ್ಮನಿದ್ದರೂ ನಾವು ಸುಮ್ಮನೆ ಕೂರಲ್ಲ, ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ. ಇದು ಬೆದರಿಕೆ ಅಲ್ಲ, ಪ್ರತಿಪಕ್ಷವಾಗಿ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಎಚ್ಚರಿಕೆ ಸಂದೇಶ ನೀಡಿದರು.
ಇದೇ ವೇಳೆಯಲ್ಲಿ ರಾಜ್ಯದ ೭ ಜಿಲ್ಲೆಗಳಲ್ಲಿ ಭೀಕರ ಬರಗಾಲವಿದೆ. ಕೂಡಲೇ ಬರಪರಿಹಾರ ಕಾರ್ಯಕ್ರಮ ತೆಗೆದುಕೊಳ್ಳಬೇಕು. ಪ್ರವಾಹ ಪ್ರದೇಶಗಳಲ್ಲಿ ಸಮಾರೋಪಾದಿಯಲ್ಲಿ ಕೆಲಸ ಆಗಬೇಕು, ಬಿದ್ದ ಶಾಲೆಗಳನ್ನ ಕೂಡಲೇ ಪ್ರಾರಂಭಿಸಬೇಕು. ಕನಿಷ್ಠ ಒಂದು ಲಕ್ಷ ಕೋಟಿ ಇದಕ್ಕೆ ಬೇಕಿದೆ. ಕೂಡಲೆ ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ ಎಂದು ಅವರು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…