Featured

ನಿಮ್ಮೆಲ್ಲರ ಮುಂದೆ ಮತ್ತೊಮ್ಮೆ ಅನಾರೋಗ್ಯ ಪೀಡಿತ ಮಕ್ಕಳ ನೆರವಿಗೆ ಸಹಾಯಾರ್ಥವಾಗಿ ವಾಂಪೈರ್ ವೇಷಧರಿಸಿಕೊಂಡು ಈ ಬಾರಿಯೂ ಬರಲಿದ್ದಾರೆ ರವಿ ಕಟಪಾಡಿ -Vishwanews24

ಉಡುಪಿ: ಪ್ರತಿವರ್ಷದಂತೆ ಈ ಬಾರಿಯೂ ಕೃಷ್ಣ ಜನ್ಮಾಷ್ಟಮಿಯ ದಿನ ವಿಭಿನ್ನ ವೇಷ ಹಾಕಿ ನಿಧಿ ಸಂಗ್ರಹಿಸಿ, ಬಡ ಆರ್ಥಿಕ ನೆರವು ನೀಡಲಾಗುವುದು ಎಂದು ಕಲಾವಿದ ರವಿ ಕಟಪಾಡಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 5 ವರ್ಷಗಳಿಂದ ವಿಭಿ ವೇಷ ಹಾಕುತ್ತಾ ಜನರಿಂದ ದೇಣಿಗೆ ಸಂಗ್ರಹಿಸಿ ಬಡ ಮಕ್ಕಳ ಚಿಕಿತ್ಸಾ ವೆಚ್ಚ ಭರಿಸಲಾಗುತ್ತಿದೆ ಎಂದರು.

ಈ ಬಾರಿ ಸಂಗ್ರಹವಾದ ಹಣವನ್ನು ಲಿವರ್ ಕ್ಯಾನ್ಸರ್ನಿಂದ ಬಳಲುತ್ತಿರುವ ಮೂಡುಬಾರಳಿಯ ಮಂದರ್ತಿಯ ಕುಶಲ ಹಾಗೂ ಉಷಾ ದಂಪತಿ ಪುತ್ರ ಶ್ರೀತನ್ ಚಿಕಿತ್ಸೆಗೆ, ಬಿಳಿ ರಕ್ತಕಣ ಸಮಸ್ಯೆ ಇರುವ ಕಳ್ಳಿಗುಡ್ಡೆ ವಕ್ವಾಡಿಯ ರವೀಂದ್ರ ಯಶೋಧ ದಂಪತಿ ಪುತ್ರ ಪ್ರಥಮ್ಗೆ, ಮೆದುಳಿನ ರಕ್ತಸ್ರಾವದಿಂದ ಬಳಲುತ್ತಿರುವ ಪಂಚಬೆಟ್ಟು ಹಿರಿಯಡಕ ಕೃಷ್ಣಮೂರ್ತಿ ಆಚಾರ್ಯ, ಕುಶಲ ದಂಪತಿ ಪುತ್ರ ಕಿರಣ್ ಸೇರಿದಂತೆ 5 ಮಕ್ಕಳ ಚಿಕಿತ್ಸೆಗೆ ನೀಡಲಾಗುವುದು ಎಂದರು.

ಮೊದಲ ವರ್ಷ ಸಂಗ್ರಹವಾದ ₹ 1.04 ಲಕ್ಷದಲ್ಲಿ ಎಳ್ಳಂಪಳ್ಳಿ ದಿಪಾನ್ ಗುಡ್ಡೆಯ ಮುಕಾಂಬಿಕಾ ಅವರ ಪುತ್ರಿ ಅನ್ವಿತಾಳ ಶಸ್ತ್ರಚಿಕಿತ್ಸೆಗೆ ನೀಡಲಾಯಿತು.

2ನೇ ವರ್ಷದ ₹3.20 ಲಕ್ಷವನ್ನು ನಾಲ್ಕು ಮಕ್ಕಳಿಗೆ,

3ನೇ ವರ್ಷದ ₹4.65 ಲಕ್ಷವನ್ನು ಮೂರು ಮಕ್ಕಳಿಗೆ,

4ನೇ ವರ್ಷ ಸಂಗ್ರಹವಾದ 5.12 ಲಕ್ಷವನ್ನು ಮೂವರು ಮಕ್ಕಳಿಗೆ ಹಾಗೂ

5ನೇ ವರ್ಷ ಸಂಗ್ರಹವಾದ ₹5.32 ಲಕ್ಷವನ್ನು ಹಾಗೂ ಮಿಲಾಪ್ ಸಂಸ್ಥೆ ನೀಡಿದ ₹16 ಲಕ್ಷವನ್ನು 7 ಮಕ್ಕಳ ವೈದ್ಯಕೀಯ ಚಿಕಿತ್ಸೆಗೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಜಾಹಿರಾತು

ದೇಣಿಗೆಯನ್ನು ಸೆ.3ರಂದು ಸಂಜೆ 5ಕ್ಕೆ ಕಟಪಾಡಿ ಸಾರ್ವಜನಿಕ ಗಣೇಶೋತ್ಸವ ವೇದಿಕೆಯಲ್ಲಿ ಫಲಾನುಭವಿಗಳಿಗೆ ಕೊಡಲಾಗುವುದು. ಅಂದು ಕೇಮಾರು ಮಠದ ಈಶವಿಠಲದಾಸ ಸ್ವಾಮೀಜಿ, ಎಸ್ಪಿ ನಿಶಾ ಜೇಮ್ಸ್ ಉಪಸ್ಥಿತರಿರಲಿದ್ದಾರೆ ಎಂದು ತಿಳಿಸಿದರು.

ಈ ಬಾರಿ ನಿರೀಕ್ಷೆಗೂ ಮೀರಿ ಸಾರ್ವಜನಿಕರು ಸ್ಪಂದಿಸಬೇಕು. ವಿಜಯಾ ಬ್ಯಾಂಕ್ ಖಾತೆ ಸಂಖ್ಯೆ 117201011001056, ಐಎಫ್ ಎಸ್ಸಿ ಕೋಡ್ ವಿಐಜೆಬಿ 0001172 ನೆರವು ನೀಡಬಹುದು ಎಂದರು.

ಉಡುಪಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಸುಸಂಧರ್ಭದಲ್ಲಿ ವಿಭಿನ್ನ ರೀತಿಯಲ್ಲಿ ಜನಾಕರ್ಷಣೀಯವಾಗಿ ವೇಷ ಧರಿಸಿಕೊಂಡು ಜಿಲ್ಲೆಯಾದ್ಯಂತ ಸಂಚರಿಸುತ್ತಾ ಅನಾರೋಗ್ಯ ಪೀಡಿತ ಮಕ್ಕಳಿಗೆ ಕಳೆದೈದು ವರುಷಗಳಿಂದ ಆಸರೆಯಾಗುತ್ತ ಬಂದಿರುವ ರವಿ ಕಟಪಾಡಿಯವರು ನಿಮ್ಮೆಲ್ಲರ ಮುಂದೆ ಮತ್ತೊಮ್ಮೆ ಸಹಾಯಾರ್ಥ ವಾಗಿ ವೇಷಧರಿಸಿಕೊಂಡು ಈ ಬಾರಿಯೂ ಬರಲಿದ್ದಾರೆ ತಮ್ಮೆಲ್ಲರ ಸಹಕಾರವಿರಲಿ…….

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

20 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago