ಬೆಂಗಳೂರು: ನಿಮ್ಮೆಲ್ಲರ ಸಹಕಾರದಿಂದ ನನ್ನ ಸ್ಥಾನವನ್ನು ಜವಾಬ್ದಾರಿಯಿಂದ ನಿರ್ವಹಿಸುತ್ತೇವೆ ಎಂಬ ವಿಶ್ವಾಸವಿದೆ. ರಾಷ್ಟ್ರೀಯ ಅಧ್ಯಕ್ಷರು ಒಬ್ಬ ಸಾಮಾನ್ಯ ಕಾರ್ಯಕರ್ತನಿಗೆ ಬಹು ದೊಡ್ಡ ಜವಾಬ್ದಾರಿಯನ್ನು ನೀಡಿದ್ದಾರೆ ಎಂದು ನೂತನ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು
ಕೆಐಎಎಲ್ನಲ್ಲಿ ಮಾತನಾಡಿದ ನಳಿನ್ ಕುಮಾರ್, ಇಂದು ನನಗೆ ಬಹಳ ಖುಷಿಯಾಗಿದೆ. ಕರ್ನಾಟಕದ ಬೆಂಗಳೂರು ನಗರವನ್ನು ಸಂವೃದ್ಧಿ ಮಾಡಿರುವ ಕೆಂಪೇಗೌಡರ ಪುಣ್ಯ ಭೂಮಿಯಲ್ಲಿ ಅವರ ಆಶೀರ್ವಾದ ಪಡೆಯುವ ಮೂಲಕ ಈ ಜವಾಬ್ದಾರಿಯನ್ನು ನಿರ್ವಹಿಸಲು ಹೋಗುತ್ತಿದ್ದೇನೆ ಎಂದು ತಮಗೆ ಸ್ವಾಗತ ಕೋರಿದ ಎಲ್ಲರಿಗೂ ಧನ್ಯವಾದಗಳನ್ನು ತಿಳಿಸಿದರು.
ಸಾಮಾನ್ಯ ಕಾರ್ಯಕರ್ತ ಪ್ರಧಾನಿ ಆಗುವುದು, ರಾಜ್ಯಾಧ್ಯಕ್ಷ ಆಗೋದು ಸುಲಭದ ಮಾತಲ್ಲ.ನಿಮ್ಮೆಲ್ಲರ ಸಹಕಾರದಿಂದ ನನ್ನ ಸ್ಥಾನವನ್ನು ಜವಾಬ್ದಾರಿಯಿಂದ ನಿರ್ವಹಿಸುತ್ತೇವೆ ಎಂಬ ವಿಶ್ವಾಸವಿದೆ. ಇಡೀ ರಾಷ್ಟ್ರದಲ್ಲಿ ಗುರುತಿಸುವಂತಹ ಪ್ರಧಾನಿ ಮೋದಿಯವರ ನೇತೃತ್ವವಿದೆ. ರಾಜ್ಯದಲ್ಲಿ ರೈತರ ಪರವಾಗಿ ಹೋರಾಟ ಮಾಡುವ ಯಡಿಯೂರಪ್ಪ ಅವರ ನೇತೃತ್ವವಿದೆ. ಎಲ್ಲಾ ಹಿರಿಯರ ಮಾರ್ಗದರ್ಶನದಲ್ಲಿ ಕಿರಿಯರ ಜೊತೆಯಲ್ಲಿ ಪಕ್ಷವನ್ನು ಕಟ್ಟುವ ಕೆಲಸ ಮಾಡುತ್ತೇನೆ ಎಂದರು.
ಶ್ರೇಷ್ಠವಾದ ಜವಾಬ್ದಾರಿ ನೀಡಿದ್ದಾರೆ. ಒಬ್ಬ ಕಾರ್ಯಕರ್ತನ ಪ್ರತಿನಿಧಿಯಾಗಿ ಕಾರ್ಯ ನಿರ್ವಹಿಸುತ್ತೇನೆ. ಬಿಜೆಪಿ ಸರ್ವ ವ್ಯಾಪಿ, ಸರ್ವ ಸ್ಪರ್ಶಿಯಾಗಿ ರಾಜ್ಯದ ಮೂಲೆ ಮೂಲೆಗಳಲ್ಲಿ ಬೆಳೆದಿದೆ. ಇದನ್ನ ಇನ್ನಷ್ಟು ಗಟ್ಟಿ ಮಾಡುತ್ತೀನಿ. ಯಡಿಯೂರಪ್ಪ ಅವರ ಜೊತೆ ಸಹಕಾರಿಯಾಗಿ ನಿಂತು ಕೆಲಸ ನಿರ್ವಹಿಸುತ್ತೇನೆ ಎಂದು ನಳೀನ್ ಕುಮಾರ್ ಕಟೀಲ್ ಹೇಳಿದರು.
ಬಂಟ್ವಾಳ: ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಯುವತಿಯ ಭೀಕರ ಹತ್ಯೆ ಬಂಟ್ವಾಳ : ಯುವತಿಯೊಬ್ಬಳನ್ನು ಚಾಕುವಿಂದ ಹತ್ಯೆ ಮಾಡಿದ ಘಟನೆ ಜುಲೈ…
ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್…
ಭಟ್ಕಳ: ಬೈಕಿಗೆ ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…
ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…
ಉಡುಪಿ : ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…
ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…