ಬೆಂಗಳೂರು: ನಿಮ್ಮೆಲ್ಲರ ಸಹಕಾರದಿಂದ ನನ್ನ ಸ್ಥಾನವನ್ನು ಜವಾಬ್ದಾರಿಯಿಂದ ನಿರ್ವಹಿಸುತ್ತೇವೆ ಎಂಬ ವಿಶ್ವಾಸವಿದೆ. ರಾಷ್ಟ್ರೀಯ ಅಧ್ಯಕ್ಷರು ಒಬ್ಬ ಸಾಮಾನ್ಯ ಕಾರ್ಯಕರ್ತನಿಗೆ ಬಹು ದೊಡ್ಡ ಜವಾಬ್ದಾರಿಯನ್ನು ನೀಡಿದ್ದಾರೆ ಎಂದು ನೂತನ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು
ಕೆಐಎಎಲ್ನಲ್ಲಿ ಮಾತನಾಡಿದ ನಳಿನ್ ಕುಮಾರ್, ಇಂದು ನನಗೆ ಬಹಳ ಖುಷಿಯಾಗಿದೆ. ಕರ್ನಾಟಕದ ಬೆಂಗಳೂರು ನಗರವನ್ನು ಸಂವೃದ್ಧಿ ಮಾಡಿರುವ ಕೆಂಪೇಗೌಡರ ಪುಣ್ಯ ಭೂಮಿಯಲ್ಲಿ ಅವರ ಆಶೀರ್ವಾದ ಪಡೆಯುವ ಮೂಲಕ ಈ ಜವಾಬ್ದಾರಿಯನ್ನು ನಿರ್ವಹಿಸಲು ಹೋಗುತ್ತಿದ್ದೇನೆ ಎಂದು ತಮಗೆ ಸ್ವಾಗತ ಕೋರಿದ ಎಲ್ಲರಿಗೂ ಧನ್ಯವಾದಗಳನ್ನು ತಿಳಿಸಿದರು.
ಸಾಮಾನ್ಯ ಕಾರ್ಯಕರ್ತ ಪ್ರಧಾನಿ ಆಗುವುದು, ರಾಜ್ಯಾಧ್ಯಕ್ಷ ಆಗೋದು ಸುಲಭದ ಮಾತಲ್ಲ.ನಿಮ್ಮೆಲ್ಲರ ಸಹಕಾರದಿಂದ ನನ್ನ ಸ್ಥಾನವನ್ನು ಜವಾಬ್ದಾರಿಯಿಂದ ನಿರ್ವಹಿಸುತ್ತೇವೆ ಎಂಬ ವಿಶ್ವಾಸವಿದೆ. ಇಡೀ ರಾಷ್ಟ್ರದಲ್ಲಿ ಗುರುತಿಸುವಂತಹ ಪ್ರಧಾನಿ ಮೋದಿಯವರ ನೇತೃತ್ವವಿದೆ. ರಾಜ್ಯದಲ್ಲಿ ರೈತರ ಪರವಾಗಿ ಹೋರಾಟ ಮಾಡುವ ಯಡಿಯೂರಪ್ಪ ಅವರ ನೇತೃತ್ವವಿದೆ. ಎಲ್ಲಾ ಹಿರಿಯರ ಮಾರ್ಗದರ್ಶನದಲ್ಲಿ ಕಿರಿಯರ ಜೊತೆಯಲ್ಲಿ ಪಕ್ಷವನ್ನು ಕಟ್ಟುವ ಕೆಲಸ ಮಾಡುತ್ತೇನೆ ಎಂದರು.
ಶ್ರೇಷ್ಠವಾದ ಜವಾಬ್ದಾರಿ ನೀಡಿದ್ದಾರೆ. ಒಬ್ಬ ಕಾರ್ಯಕರ್ತನ ಪ್ರತಿನಿಧಿಯಾಗಿ ಕಾರ್ಯ ನಿರ್ವಹಿಸುತ್ತೇನೆ. ಬಿಜೆಪಿ ಸರ್ವ ವ್ಯಾಪಿ, ಸರ್ವ ಸ್ಪರ್ಶಿಯಾಗಿ ರಾಜ್ಯದ ಮೂಲೆ ಮೂಲೆಗಳಲ್ಲಿ ಬೆಳೆದಿದೆ. ಇದನ್ನ ಇನ್ನಷ್ಟು ಗಟ್ಟಿ ಮಾಡುತ್ತೀನಿ. ಯಡಿಯೂರಪ್ಪ ಅವರ ಜೊತೆ ಸಹಕಾರಿಯಾಗಿ ನಿಂತು ಕೆಲಸ ನಿರ್ವಹಿಸುತ್ತೇನೆ ಎಂದು ನಳೀನ್ ಕುಮಾರ್ ಕಟೀಲ್ ಹೇಳಿದರು.
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…