ಜಿಲ್ಲೆ

ನಿಮ್ಮ ಕರ್ಮಕಾಂಡ ಬಯಲಿಗೆಳೆಯಲು ಉಪವಾಸ ಸತ್ಯಾಗ್ರಹ ಮಾಡುತ್ತೇವೆ: ಪ್ರಧಾನಿ ಮೋದಿ

ಪ್ರಧಾನಿ ಮೋದಿ  ಕಾಂಗ್ರೆಸ್ ವಿರುದ್ಧ ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ಉಪವಾಸ ಸತ್ಯಾಗ್ರಹ  ವಿಚಾರದಲ್ಲಿ ಟಾಂಗ್ ಕೊಟ್ಟ ಕಾಂಗ್ರೆಸ್ ಗೆ ತಿರುಗೇಟು ನೀಡಿದ್ದಾರೆ.

ಬಿಜೆಪಿ ಅಧ್ಯಕ್ಷ ಅಮಿತ್ ಶಾ ಪಕ್ಷದ ಸಂಸದರು ಒಂದು ದಿನ ಸಂಸತ್ತಿನ ಎದುರು ಉಪವಾಸ ಸತ್ಯಾಗ್ರಹ ಕೈಗೊಳ್ಳುವುದಾಗಿ ಘೋಷಿಸಿದ್ದರು. ಸಂಸತ್ ಅಧಿವೇಶನ ಸರಿಯಾಗಿ ನಡೆಯಲು ಬಿಡಲಿಲ್ಲ ಎಂಬ ಕಾರಣಕ್ಕೆ ಉಪವಾಸ ಸತ್ಯಾಗ್ರಹ ನಡೆಸಲು ಬಿಜೆಪಿ ತೀರ್ಮಾನಿಸಿದೆ.

ಬಿಜೆಪಿಯ ಈ ತೀರ್ಮಾನವನ್ನು ಟೀಕಿಸಿರುವ ಕಾಂಗ್ರೆಸ್ ವಕ್ತಾರ ರಣ್ ದೀಪ್ ಸುರ್ಜೇವಾಲ ಇದೊಂದು ನಾಟಕ ಎಂದಿದ್ದಾರೆ.  ‘ಸಿಬಿಎಸ್ ಇ ಮತ್ತು ಎಸ್ಎಸ್ ಸಿ ಹಗರಣದ ಮೂಲಕ ವಿದ್ಯಾರ್ಥಿಗಳ ಭವಿಷ್ಯ ಹಾಳು ಮಾಡಿದ್ದಕ್ಕೆ ಕೇಂದ್ರ ಸರ್ಕಾರ ಪ್ರಾಯಶ್ಚಿತ ರೂಪದಲ್ಲಿ ಸತ್ಯಾಗ್ರಹ ಮಾಡಲಿ’ ಎಂದು ಟೀಕಿಸಿದ್ದರು.

ಕಾಂಗ್ರೆಸ್ ಪ್ರತಿಕ್ರಿಯೆಗೆ ತಕ್ಕ ತಿರುಗೇಟು ಕೊಟ್ಟಿರುವ ಪ್ರಧಾನಿ ಮೋದಿ ‘ಮೊದಲು ನಿಮ್ಮ ಅಕ್ರಮಗಳನ್ನು ಬಯಲಿಗೆಳೆಯಲು ಉಪವಾಸ ಸತ್ಯಾಗ್ರಹ ಮಾಡುತ್ತೇವೆ. 2014 ರಲ್ಲಿ ಸೋತ ಒಂದು ರಾಜಕೀಯ ಪಕ್ಷ ದೇಶವನ್ನು ಮುಂದುವರಿಯಲು ಬಿಡುತ್ತಿಲ್ಲ. ಒಂದು ದಿನವೂ ಸಂಸತ್ ಕಲಾಪ ನಡೆಯಲು ಬಿಡದೇ ಇವರು ದೇಶದ ಪ್ರಜಾಪ್ರಭುತ್ವವನ್ನು ಕೊಲೆ ಮಾಡಿದರು. ಇಂತಹವರ ವಿರುದ್ಧ ನಾನು ಉಪವಾಸ ಸತ್ಯಾಗ್ರಹ ಮಾಡುತ್ತೇನೆ ಮತ್ತು ನನ್ನ ಕರ್ತವ್ಯವನ್ನೂ ನಿಭಾಯಿಸುತ್ತೇನೆ’ ಎಂದು ಮೋದಿ ವಾಗ್ದಾಳಿ ನಡೆಸಿದ್ದಾರೆ.

Vishwa News 24

Recent Posts

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ; ನಾಲ್ವರ ಬಂಧನ -vishwanews24

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…

5 hours ago

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! vishwanews24

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ ಸೋಂಕಿನ…

7 hours ago

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ – vishwanews24

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

7 hours ago

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ – vishwanews24

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…

8 hours ago

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…

8 hours ago

ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ – vishwanews24

 ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್‌ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ಕಾಪು: ಎರಡು ಎಕ್ಸ್‌ಪ್ರೆಸ್ ಬಸ್ಸುಗಳು ಪ್ರಯಾಣಿಕರು…

8 hours ago