Featured

ನಿಮ್ಮ ಕೆಟ್ಟ ನಿರ್ಧಾರಗಳಿಂದ ಕಾಂಗ್ರೆಸ್​ ಗೆ ಒಂದು ಸಣ್ಣ ಪಕ್ಷದ ಎದುರು ಭಿಕ್ಷೆ ಬೇಡುವ ಪರಿಸ್ಥಿತಿ ಬಂದಿತು : ಗುಂಡೂರಾವ್ ವಿರುದ್ದ ಸುಧಾಕರ್ -Vishwanews24

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವಿರುದ್ದ ಅನರ್ಹ ಶಾಸಕ ಡಾ.ಸುಧಾಕರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ದಿನೇಶ್ ಗುಂಡೂರಾವ್ ವಿರುದ್ಧ ಟ್ವೀಟ್ ಮಾಡಿರುವ ಡಾ.ಸುಧಾಕರ್, ”ನಿಮ್ಮ ವೈಯಕ್ತಿಕ ಆಸೆ, ಲಾಲಸೆ ಮತ್ತು ಕೆಟ್ಟ ನಿರ್ಧಾರಗಳಿಂದ ಒಂದು ಸಣ್ಣ ಪಕ್ಷದ ಎದುರು ಭಿಕ್ಷೆ ಬೇಡುವ ಪರಿಸ್ಥಿತಿ ಕಾಂಗ್ರೆಸ್ ಪಕ್ಷಕ್ಕೆ ಬಂದಿದ್ದು ಎಂದು ಟೀಕಿಸಿದ್ದಾರೆ.

”ನಾವು ವಿಧಾನಸಭೆ ಚುನಾವಣೆಯಲ್ಲಿ 80 ಸ್ಥಾನ ಗೆದ್ದಿದ್ದೆವು. ಆದರೆ ಲೋಕಸಭೆಯಲ್ಲಿ ಕಾಂಗ್ರೆಸ್ ಕೇವಲ ಒಂದು ಸ್ಥಾನ ಗೆದ್ದಿತು. ಇತಿಹಾಸದಲ್ಲೇ ಕಾಂಗ್ರೆಸ್ ಇಂತಹ ಮುಖಭಂಗ ಅನುಭವಿಸಿರಲಿಲ್ಲ. ನಿಮ್ಮ ಕೆಟ್ಟ ನಿರ್ಧಾರ ಹಾಗೂ ಬಲಹೀನತೆ ಬಗ್ಗೆ ಪರಾಮರ್ಶೆ ಮಾಡಿಕೊಳ್ಳಿ. ನಿಮ್ಮ ವರ್ತನೆಯಿಂದ ಕಾಂಗ್ರೆಸ್ ಪಕ್ಷ ಭಿಕ್ಷಾಪಾತ್ರೆ ಹಿಡಿದು ಹೋಗುವಂತಾಯಿತು ಎಂದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿಮ್ಮ ಮಾತಿನ ಮೇಲೆ ಹಿಡಿತವಿರಲಿ. ನಾವು ಭಿಕ್ಷುಕರಲ್ಲ. ನಿಮ್ಮ ವೈಯಕ್ತಿಕ ಆಸೆ, ಲಾಲಸೆಗಳಿಂದ ಕಾಂಗ್ರೆಸ್ ಪಕ್ಷ ಹೀನಾಯ ಸ್ಥಿತಿ ತಲುಪಿದೆ ಎಂದವರು ಟೀಕಿಸಿದ್ದಾರೆ.

ಲೋಕಸಭೆ ಚನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಒಂದೇ ಒಂದು ಸ್ಥಾನಗೆದ್ದಿತು. ಇತಿಹಾಸದಲ್ಲೇ ಇಂತಹ ಮುಖಭಂಗ ಕಾಂಗ್ರೆಸ್ ಪಕ್ಷಕ್ಕೆ ಎಂದೂ ಆಗಿರಲಿಲ್ಲ. ನಿಮ್ಮ ಕೆಟ್ಟ ನಿರ್ಧಾರ ಹಾಗೂ ಬಲ ಹೀನತೆ ಬಗ್ಗೆ ಪರಾಮರ್ಶಿಸಿಕೊಳ್ಳಿ. ನಿಮ್ಮ ಈ ವರ್ತನೆಯಿಂದ ಕಾಂಗ್ರೆಸ್ ಪಕ್ಷ ಭಿಕ್ಷಾಪಾತ್ರೆ ಹಿಡಿದು ಹೋಗುವಂತಾಯಿತು. ನಿಮ್ಮ ಈ ಭಿಕ್ಷಾ ವರ್ತನೆಯಿಂದ ನಾವು ಹೊರಬಂದು ಇವತ್ತು ರಾಜರಂತಿದ್ದೇವೆ. ‘ಮೂರು’ ಇದ್ದವರು ಆ ಸ್ಥಾನದಲ್ಲಿ ಒಂದೇ ಒಂದು ಕ್ಷಣವು ಕೂರಬಾರದು ಎಂದು ಟ್ವೀಟ್ ಮಾಡುವ ಮೂಲಕ ಅಸಮಾಧಾನ ಹೊರಹಾಕಿದ್ದಾರೆ.

Vishwa News 24

Recent Posts

ಉಡುಪಿ: ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಹಲ್ಲೆ ಪ್ರಕರಣ: ಆರೋಪಿ ವೈದ್ಯನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಎಸ್ಪಿ, ಡಿಎಚ್‌ಓಗೆ ಮನವಿ – vishwanews24

ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಹಲ್ಲೆ ಪ್ರಕರಣ: ಆರೋಪಿ ವೈದ್ಯನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಎಸ್ಪಿ, ಡಿಎಚ್‌ಓಗೆ ಮನವಿ ಉಡುಪಿ: ಉಡುಪಿ…

6 minutes ago

ಮೂಡುಬಿದಿರೆ: ಚಾಲಕನ ನಿಯಂತ್ರಣ ತಪ್ಪಿ ಜನರೇಟರ್ ಸಾಗಿಸುತ್ತಿದ್ದ ಪಿಕಪ್ ವಾಹನ ಪಲ್ಟಿ – vishwanews24

ಮೂಡುಬಿದಿರೆ: ಚಾಲಕನ ನಿಯಂತ್ರಣ ತಪ್ಪಿ ಜನರೇಟರ್ ಸಾಗಿಸುತ್ತಿದ್ದ ಪಿಕಪ್ ವಾಹನ ಪಲ್ಟಿ; ಕೆಲಕಾಲ ಸಂಚಾರ ಅಸ್ತವ್ಯಸ್ತ ಮೂಡುಬಿದಿರೆ: ಜನರೇಟರ್‌ ಸಾಗಿಸುತ್ತಿದ್ದ…

12 minutes ago

ವೆನ್ಲಾಕ್ ಆಸ್ಪತ್ರೆ ಉನ್ನತೀಕರಣಕ್ಕೆ ಸರಕಾರದಿಂದ 70 ಕೋಟಿ ರೂ.ಅನುದಾನ : ಸಚಿವ ಯು.ಟಿ.ಖಾದರ್ – vishwanews24

ವೆನ್‍ಲಾಕ್ ಆಸ್ಪತ್ರೆ ಉನ್ನತೀಕರಣಕ್ಕೆ ಸರಕಾರದಿಂದ 70 ಕೋಟಿ ರೂ.ಅನುದಾನ : ಸಚಿವ ಯು.ಟಿ.ಖಾದರ್ ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ…

36 minutes ago

ಡೇವಿಡ್ ಡಿಸೋಜ ಹತ್ಯೆ ಪ್ರಕರಣ : ಮತ್ತೊಬ್ಬ ಆರೋಪಿ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜ ಹತ್ಯೆ ಪ್ರಕರಣ: ಹಂತಕರಿಗೆ ಬೈಕ್ ಒದಗಿಸಿದ್ದ ಮತ್ತೊಬ್ಬಆರೋಪಿ ಬಂಧನ ಉಡುಪಿ :  ಮುದರಂಗಡಿ ಗ್ರಾಮ ಪಂಚಾಯತ್…

49 minutes ago

ನೇಣು ಬಿಗಿದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ – vishwanews24

ನೇಣು ಬಿಗಿದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ ವಿದ್ಯಾರ್ಥಿನಿಯ ನಿಗೂಢ ಸಾವಿಗೆ ಪೋಷಕರ ಅನುಮಾನ ಹಾಸನ: ಚನ್ನರಾಯಪಟ್ಟಣದ  ಅಂಬಿಕ ನಗರದಲ್ಲಿ…

58 minutes ago

ಬೆಳ್ತಂಗಡಿ: ಸುಮಂತ್ ಸಾವಿನ ಪ್ರಕರಣ; ಬ್ರೈನ್ ಮ್ಯಾಪಿಂಗ್, ನಾರ್ಕೋ ಪರೀಕ್ಷೆ ಆರಂಭ – vishwanews24

ಬೆಳ್ತಂಗಡಿ: ಸುಮಂತ್ ಸಾವಿನ ಪ್ರಕರಣ; ಬ್ರೈನ್ ಮ್ಯಾಪಿಂಗ್, ನಾರ್ಕೋ ಪರೀಕ್ಷೆ ಆರಂಭ ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗೇರುಕಟ್ಟೆ…

1 hour ago