ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವಿರುದ್ದ ಅನರ್ಹ ಶಾಸಕ ಡಾ.ಸುಧಾಕರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ದಿನೇಶ್ ಗುಂಡೂರಾವ್ ವಿರುದ್ಧ ಟ್ವೀಟ್ ಮಾಡಿರುವ ಡಾ.ಸುಧಾಕರ್, ”ನಿಮ್ಮ ವೈಯಕ್ತಿಕ ಆಸೆ, ಲಾಲಸೆ ಮತ್ತು ಕೆಟ್ಟ ನಿರ್ಧಾರಗಳಿಂದ ಒಂದು ಸಣ್ಣ ಪಕ್ಷದ ಎದುರು ಭಿಕ್ಷೆ ಬೇಡುವ ಪರಿಸ್ಥಿತಿ ಕಾಂಗ್ರೆಸ್ ಪಕ್ಷಕ್ಕೆ ಬಂದಿದ್ದು ಎಂದು ಟೀಕಿಸಿದ್ದಾರೆ.
”ನಾವು ವಿಧಾನಸಭೆ ಚುನಾವಣೆಯಲ್ಲಿ 80 ಸ್ಥಾನ ಗೆದ್ದಿದ್ದೆವು. ಆದರೆ ಲೋಕಸಭೆಯಲ್ಲಿ ಕಾಂಗ್ರೆಸ್ ಕೇವಲ ಒಂದು ಸ್ಥಾನ ಗೆದ್ದಿತು. ಇತಿಹಾಸದಲ್ಲೇ ಕಾಂಗ್ರೆಸ್ ಇಂತಹ ಮುಖಭಂಗ ಅನುಭವಿಸಿರಲಿಲ್ಲ. ನಿಮ್ಮ ಕೆಟ್ಟ ನಿರ್ಧಾರ ಹಾಗೂ ಬಲಹೀನತೆ ಬಗ್ಗೆ ಪರಾಮರ್ಶೆ ಮಾಡಿಕೊಳ್ಳಿ. ನಿಮ್ಮ ವರ್ತನೆಯಿಂದ ಕಾಂಗ್ರೆಸ್ ಪಕ್ಷ ಭಿಕ್ಷಾಪಾತ್ರೆ ಹಿಡಿದು ಹೋಗುವಂತಾಯಿತು ಎಂದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಿಮ್ಮ ಮಾತಿನ ಮೇಲೆ ಹಿಡಿತವಿರಲಿ. ನಾವು ಭಿಕ್ಷುಕರಲ್ಲ. ನಿಮ್ಮ ವೈಯಕ್ತಿಕ ಆಸೆ, ಲಾಲಸೆಗಳಿಂದ ಕಾಂಗ್ರೆಸ್ ಪಕ್ಷ ಹೀನಾಯ ಸ್ಥಿತಿ ತಲುಪಿದೆ ಎಂದವರು ಟೀಕಿಸಿದ್ದಾರೆ.
ಲೋಕಸಭೆ ಚನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಒಂದೇ ಒಂದು ಸ್ಥಾನಗೆದ್ದಿತು. ಇತಿಹಾಸದಲ್ಲೇ ಇಂತಹ ಮುಖಭಂಗ ಕಾಂಗ್ರೆಸ್ ಪಕ್ಷಕ್ಕೆ ಎಂದೂ ಆಗಿರಲಿಲ್ಲ. ನಿಮ್ಮ ಕೆಟ್ಟ ನಿರ್ಧಾರ ಹಾಗೂ ಬಲ ಹೀನತೆ ಬಗ್ಗೆ ಪರಾಮರ್ಶಿಸಿಕೊಳ್ಳಿ. ನಿಮ್ಮ ಈ ವರ್ತನೆಯಿಂದ ಕಾಂಗ್ರೆಸ್ ಪಕ್ಷ ಭಿಕ್ಷಾಪಾತ್ರೆ ಹಿಡಿದು ಹೋಗುವಂತಾಯಿತು. ನಿಮ್ಮ ಈ ಭಿಕ್ಷಾ ವರ್ತನೆಯಿಂದ ನಾವು ಹೊರಬಂದು ಇವತ್ತು ರಾಜರಂತಿದ್ದೇವೆ. ‘ಮೂರು’ ಇದ್ದವರು ಆ ಸ್ಥಾನದಲ್ಲಿ ಒಂದೇ ಒಂದು ಕ್ಷಣವು ಕೂರಬಾರದು ಎಂದು ಟ್ವೀಟ್ ಮಾಡುವ ಮೂಲಕ ಅಸಮಾಧಾನ ಹೊರಹಾಕಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…