Featured

ನಿಮ್ಮ ಕೆಟ್ಟ ನಿರ್ಧಾರಗಳಿಂದ ಕಾಂಗ್ರೆಸ್​ ಗೆ ಒಂದು ಸಣ್ಣ ಪಕ್ಷದ ಎದುರು ಭಿಕ್ಷೆ ಬೇಡುವ ಪರಿಸ್ಥಿತಿ ಬಂದಿತು : ಗುಂಡೂರಾವ್ ವಿರುದ್ದ ಸುಧಾಕರ್ -Vishwanews24

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವಿರುದ್ದ ಅನರ್ಹ ಶಾಸಕ ಡಾ.ಸುಧಾಕರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ದಿನೇಶ್ ಗುಂಡೂರಾವ್ ವಿರುದ್ಧ ಟ್ವೀಟ್ ಮಾಡಿರುವ ಡಾ.ಸುಧಾಕರ್, ”ನಿಮ್ಮ ವೈಯಕ್ತಿಕ ಆಸೆ, ಲಾಲಸೆ ಮತ್ತು ಕೆಟ್ಟ ನಿರ್ಧಾರಗಳಿಂದ ಒಂದು ಸಣ್ಣ ಪಕ್ಷದ ಎದುರು ಭಿಕ್ಷೆ ಬೇಡುವ ಪರಿಸ್ಥಿತಿ ಕಾಂಗ್ರೆಸ್ ಪಕ್ಷಕ್ಕೆ ಬಂದಿದ್ದು ಎಂದು ಟೀಕಿಸಿದ್ದಾರೆ.

”ನಾವು ವಿಧಾನಸಭೆ ಚುನಾವಣೆಯಲ್ಲಿ 80 ಸ್ಥಾನ ಗೆದ್ದಿದ್ದೆವು. ಆದರೆ ಲೋಕಸಭೆಯಲ್ಲಿ ಕಾಂಗ್ರೆಸ್ ಕೇವಲ ಒಂದು ಸ್ಥಾನ ಗೆದ್ದಿತು. ಇತಿಹಾಸದಲ್ಲೇ ಕಾಂಗ್ರೆಸ್ ಇಂತಹ ಮುಖಭಂಗ ಅನುಭವಿಸಿರಲಿಲ್ಲ. ನಿಮ್ಮ ಕೆಟ್ಟ ನಿರ್ಧಾರ ಹಾಗೂ ಬಲಹೀನತೆ ಬಗ್ಗೆ ಪರಾಮರ್ಶೆ ಮಾಡಿಕೊಳ್ಳಿ. ನಿಮ್ಮ ವರ್ತನೆಯಿಂದ ಕಾಂಗ್ರೆಸ್ ಪಕ್ಷ ಭಿಕ್ಷಾಪಾತ್ರೆ ಹಿಡಿದು ಹೋಗುವಂತಾಯಿತು ಎಂದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿಮ್ಮ ಮಾತಿನ ಮೇಲೆ ಹಿಡಿತವಿರಲಿ. ನಾವು ಭಿಕ್ಷುಕರಲ್ಲ. ನಿಮ್ಮ ವೈಯಕ್ತಿಕ ಆಸೆ, ಲಾಲಸೆಗಳಿಂದ ಕಾಂಗ್ರೆಸ್ ಪಕ್ಷ ಹೀನಾಯ ಸ್ಥಿತಿ ತಲುಪಿದೆ ಎಂದವರು ಟೀಕಿಸಿದ್ದಾರೆ.

ಲೋಕಸಭೆ ಚನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಒಂದೇ ಒಂದು ಸ್ಥಾನಗೆದ್ದಿತು. ಇತಿಹಾಸದಲ್ಲೇ ಇಂತಹ ಮುಖಭಂಗ ಕಾಂಗ್ರೆಸ್ ಪಕ್ಷಕ್ಕೆ ಎಂದೂ ಆಗಿರಲಿಲ್ಲ. ನಿಮ್ಮ ಕೆಟ್ಟ ನಿರ್ಧಾರ ಹಾಗೂ ಬಲ ಹೀನತೆ ಬಗ್ಗೆ ಪರಾಮರ್ಶಿಸಿಕೊಳ್ಳಿ. ನಿಮ್ಮ ಈ ವರ್ತನೆಯಿಂದ ಕಾಂಗ್ರೆಸ್ ಪಕ್ಷ ಭಿಕ್ಷಾಪಾತ್ರೆ ಹಿಡಿದು ಹೋಗುವಂತಾಯಿತು. ನಿಮ್ಮ ಈ ಭಿಕ್ಷಾ ವರ್ತನೆಯಿಂದ ನಾವು ಹೊರಬಂದು ಇವತ್ತು ರಾಜರಂತಿದ್ದೇವೆ. ‘ಮೂರು’ ಇದ್ದವರು ಆ ಸ್ಥಾನದಲ್ಲಿ ಒಂದೇ ಒಂದು ಕ್ಷಣವು ಕೂರಬಾರದು ಎಂದು ಟ್ವೀಟ್ ಮಾಡುವ ಮೂಲಕ ಅಸಮಾಧಾನ ಹೊರಹಾಕಿದ್ದಾರೆ.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

18 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

1 day ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago