ನಿಮ್ಮ ಕೈಕಾಲಿನ ಪಾದಗಳು ಅತಿಯಾಗಿ ಬೆವರುತ್ತಿವೆಯೇ?, ಹಾಗಿದ್ದರೆ ಇದರಿಂದ ಈ ಮನೆಮದ್ದುಗಳನ್ನು ಬಳಸಿ ನೋಡಿ…..
ತೆಂಗಿನೆಣ್ಣೆ: ತೆಂಗಿನೆಣ್ಣೆಯು ಕೈಗಳು ಮತ್ತು ಪಾದಗಳನ್ನು ತೇವಗೊಳಿಸುತ್ತದೆ ಮತ್ತು ಬೆವರುವಿಕೆಯನ್ನು ತಡೆಯುತ್ತದೆ. ಅದು ಬೆವರು ಮತ್ತು ವಾಸನೆಯನ್ನುಂಟು ಮಾಡುವ ಬ್ಯಾಕ್ಟೀರಿಯಾಗಳನ್ನು ನಿವಾರಿಸುತ್ತದೆ ಮತ್ತು ತನ್ನ ನೈಸರ್ಗಿಕ ಸುಗಂಧದಿಂದಾಗಿ ನಿಮ್ಮನ್ನು ತಾಜಾ ಆಗಿರಿಸುತ್ತದೆ. ಸ್ನಾನದ ಬಳಿಕ ಸ್ವಲ್ಪ ತೆಂಗಿನೆಣ್ಣೆಯಲ್ಲಿ ಪೀಡಿತ ಜಾಗಗಳಿಗೆ ಹಚ್ಚಿಕೊಂಡರೆ ಸಾಕು.
ಚಹಾ: ಚಹಾ ಯಾವುದೇ ಬ್ಯಾಕ್ಟೀರಿಯಾಗಳನ್ನು ನಿವಾರಿಸಲು ನೆರವಾಗುತ್ತದೆ ಮತ್ತು ಚರ್ಮದಲ್ಲಿಯ ರಂಧ್ರಗಳನ್ನು ಕಿರಿದಾಗಿಸಿ ನೀವು ಕಡಿಮೆ ಬೆವರುವಂತೆ ಮಾಡುತ್ತದೆ. ಕೆಲವು ಬ್ಲಾಕ್ ಟೀ ಬ್ಯಾಗ್ಗಳನ್ನು ಬಿಸಿನೀರಿನಲ್ಲಿ ಮುಳುಗಿಸಿ ಬಳಿಕ ಅವನ್ನು ಹೊರತೆಗೆದು ತಣ್ಣಗಾದ ಬಳಿಕ ಪಾದಗಳ ಮೇಲಿರಿಸಿಕೊಳ್ಳಿ.
ತಣ್ಣೀರು: ಪ್ರತಿ ದಿನ 20 ನಿಮಿಷಗಳ ಕಾಲ ನಿಮ್ಮ ಕೈಗಳು ಮತ್ತು ಕಾಲುಗಳನ್ನು ತಣ್ಣೀರಿನಲ್ಲಿ ಮುಳುಗಿಸಿ. ಇದು ಬಹುಮಟ್ಟಿಗೆ ಸಮಸ್ಯೆಯನ್ನು ಬಗೆಹರಿಸುತ್ತದೆ
ಗಂಧದ ಹುಡಿ: ಜನರು ಬಹು ಹಿಂದಿನಿಂದಲೂ ಅರೆದ ಗಂಧವನ್ನು ಹಣೆಗೆ ಹಚ್ಚಿಕೊಳ್ಳುವ ಪದ್ಧತಿಯನ್ನು ಬೆಳೆಸಿಕೊಂಡು ಬಂದಿದ್ದಾರೆ. ಗಂಧವು ತಂಪನ್ನುಂಟು ಮಾಡುವ ಗುಣವನ್ನು ಹೊಂದಿದೆ. ಗಂಧದ ಹುಡಿಗೆ ನೀರು,ಲಿಂಬೆರಸ ಅಥವಾ ಪನ್ನೀರು ಬೆರೆಸಿ ಪೇಸ್ಟ್ ಅನ್ನು ತಯಾರಿಸಿಕೊಳ್ಳ್ಳಿ. ಇದನ್ನು ಬೆವರುವ ಸ್ಥಳಗಳಲ್ಲಿ ಲೇಪಿಸಿ,ಒಣಗಿದ ಬಳಿಕ ತೊಳೆದುಕೊಳ್ಳಿ.
ಬೇಕಿಂಗ್ ಸೋಡಾ: ಬೇಕಿಂಗ್ ಸೋಡಾ ತನ್ನ ಕ್ಷಾರಗುಣದಿಂದಾಗಿ ಪಾದಗಳು ಮತ್ತು ಅಂಗೈಗಳ ಪಿಎಚ್ ಸಮತೋಲನಕ್ಕೆ ನೆರವಾಗುತ್ತದೆ. ಬೆವರುವಿಕೆಯನ್ನು ಮತ್ತು ಪಾದಗಳ ಕೆಟ್ಟ ವಾಸನೆಯನ್ನು ಕಡಿಮೆ ಮಾಡುತ್ತದೆ. ಬೆಚ್ಚಗಿನ ನೀರಿನಲ್ಲಿ ಬೇಕಿಂಗ್ ಸೋಡಾ ಕರಗಿಸಿ,15-20 ನಿಮಿಷಗಳ ಕಾಲ ಪಾದಗಳನ್ನು ಮುಳುಗಿಸಿ
ಲಿಂಬೆ: ಲಿಂಬೆ ಮತ್ತು ಕಿತ್ತಳೆ ಸಿಪ್ಪೆಗಳನ್ನು ಚೆನ್ನಾಗಿ ಒಣಗಿಸಿ ಬಳಿಕ ಹುಡಿ ಮಾಡಿ ಕೈಕಾಲುಗಳ ಮೇಲೆ ಉದುರಿಸಿಕೊಂಡರೆ ಬೆವರುವಿಕೆ ಕಡಿಮೆಯಾಗುತ್ತದೆ. ಲಿಂಬೆ ರಸವನ್ನು ಉಪ್ಪಿನೊಂದಿಗೆ ಮಿಶ್ರಗೊಳಿಸಿ ಕೈಗಳಿಗೆ ಉಜ್ಜಿಕೊಳ್ಳಿ ಮತ್ತು ಅದು ಒಣಗಿದ ಬಳಿಕ ತೊಳೆೆದುಕೊಳ್ಳಿ. ಈ ವಿಧಾನವೂ ಬೆವರುವಿಕೆಯನ್ನು ತಗ್ಗಿಸುತ್ತದೆ.
ವಿನೆಗರ್: ವಿನೆಗರ್ ಆಮ್ಲೀಯ ಸ್ವರೂಪ ಹೊಂದಿರುವುದರಿಂದ ಅದು ನಿಮ್ಮ ಅಂಗೈಗಳು ಮತ್ತು ಪಾದಗಳ ಮೇಲಿರುವ ಯಾವುದೇ ಬ್ಯಾಕ್ಟೀರಿಯಾಗಳನ್ನು ಕೊಲ್ಲುತ್ತದೆ. ಬೆಚ್ಚಗಿನ ನೀರಿನಲ್ಲಿ ವಿನೆಗರ್ ಬೆರೆಸಿ ಅದರಲ್ಲಿ ಸುಮಾರು 15ರಿಂದ 30 ನಿಮಿಷಗಳ ಕಾಲ ಕೈಗಳು ಮತ್ತು ಪಾದಗಳನ್ನಿರಿಸಿ. ಉತ್ತಮ ಪರಿಣಾಮಕ್ಕಾಗಿ ಆಯಪಲ್ ಸಿಡೆರ್ ವಿನೆಗರ್ ಬಳಸಿ.
ಪನ್ನೀರು: ಹತ್ತಿಯಿಂದ ಸಾವಯವ ಪನ್ನೀರನ್ನು ನಿಮ್ಮ ಅಂಗೈಗಳು ಮತ್ತು ಪಾದಗಳಿಗೆ ಲೇಪಿಸಿಕೊಳ್ಳಿ. ಅದು ನಿಮ್ಮ ಚರ್ಮಕ್ಕೆ ತಂಪಿನ ಅನುಭವವನ್ನೂ ನೀಡುತ್ತದೆ
ಕಾರ್ನ್ ಸ್ಟಾರ್ಚ್: ನೀವು ಟಾಲ್ಕಂ ಪೌಡರ್ ಬಳಸುವ ರೀತಿಯಲ್ಲೇ ಕಾರ್ನ್ ಸ್ಟಾರ್ಚ್ನ್ನು ಅಂಗೈಗಳು ಮತ್ತು ಪಾದಗಳ ಮೇಲೆ ಉದುರಿಸಿಕೊಳ್ಳಿ. ಇದು ಬೆವರನ್ನು ಹೀರಿಕೊಳ್ಳುತ್ತದೆ ಮತ್ತು ಕೈಗಳು ಹಾಗೂ ಪಾದಗಳನ್ನು ಒಣದಾಗಿರಿಸುತ್ತದೆ.
ಟೊಮೆಟೊ ರಸ: ಟೊಮೆಟೊ ರಸವು ಶರೀರಕ್ಕೆ ತಂಪು ಅನುಭವ ನೀಡುವುದರೊಂದಿಗೆ ಬೆವರುವುದನ್ನು ಕಡಿಮೆ ಮಾಡುತ್ತದೆ. ಇದನ್ನು ಪ್ರತಿದಿನ ಸೇವಿಸಬಹುದು ಅಥವಾ ಕೈಗಳಿಗೆ ಲೇಪಿಸಿಕೊಳ್ಳಬಹುದು. ಅದರಲ್ಲಿ ಸೋಡಿಯಂ ಸಹ ಇರುವುದರಿಂದ ಕೈಗಳು ಮತ್ತು ಪಾದಗಳು ಒಣದಾಗಿರುತ್ತವೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…