Featured

ನಿಮ್ಮ ತಾಳಕ್ಕೆ ಕುಣಿಯಲು ಜೆಡಿಎಸ್ ಗುಲಾಮಿ ಸಂಸ್ಕೃತಿಯ ಪಕ್ಷವಲ್ಲ, ಕಾಂಗ್ರೆಸ್ ನ ದೌಲತ್ತೇ ಅದರ ದುಸ್ಥಿತಿಗೆ ಕಾರಣ : ಕುಮಾರಸ್ವಾಮಿ -Vishwanews24

ನಿಮ್ಮ ತಾಳಕ್ಕೆ ಕುಣಿಯಲು ಜೆಡಿಎಸ್ ಗುಲಾಮಿ ಸಂಸ್ಕೃತಿಯ ಪಕ್ಷವಲ್ಲ, ಕಾಂಗ್ರೆಸ್ ನ ದೌಲತ್ತೇ ಅದರ ದುಸ್ಥಿತಿಗೆ ಕಾರಣ : ಕುಮಾರಸ್ವಾಮಿ -Vishwanews24

ಬೆಂಗಳೂರು, : ”ವಿಧಾನ ಪರಿಷತ್ ಸಭಾಪತಿ ಅವಿಶ್ವಾಸ ನಿರ್ಣಯದ ವೇಳೆ ಬೆಂಬಲ ನೀಡುವಂತೆ ಕಾಂಗ್ರೆಸ್ ನ ಯಾವ ನಾಯಕನೂ ಸೌಜನ್ಯಕ್ಕೂ ಜೆಡಿಎಸ್ ಬಳಿ ಚರ್ಚಿಸಿಲ್ಲ. ಹೀಗಿದ್ದೂ, ಜೆಡಿಎಸ್ ನ ಜಾತ್ಯತೀತತೆಯ ಪರೀಕ್ಷೆ ನಡೆಯುತ್ತದೆ ಎಂಬ ಸಿದ್ದರಾಮಯ್ಯ ಹೇಳಿಕೆ ದುರಹಂಕಾರದ್ದು. ಬೆಂಬಲ ಕೇಳದಿದ್ದರೂ ಬೆಂಬಲಿಸಲು ನಾವೇನು ಗುಲಾಮರಲ್ಲ. ಕಾಂಗ್ರೆಸ್ ನ ದೌಲತ್ತೇ ಅದರ ದುಸ್ಥಿತಿಗೆ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಕಾಂಗ್ರೆಸ್‌ ಹಾಗೂ ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿ ಸರಣಿ ಟ್ವೀಟ್‌ ಮಾಡಿರುವ ಅವರು, ”ಪರಿಷತ್ ಸಭಾಪತಿ ವಿರುದ್ಧದ ಅವಿಶ್ವಾಸ ನಿರ್ಣಯದ ವೇಳೆ ಜೆಡಿಎಸ್‌ನ ಜಾತ್ಯತೀತತೆ ಬಹಿರಂಗವಾಗಲಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಕಾಂಗ್ರೆಸ್ & ಸಿದ್ದರಾಮಯ್ಯರ ದೃಷ್ಟಿಯಲ್ಲಿ ಜಾತ್ಯತೀತತೆ ಅಂದರೆ ಏನು? ಇದನ್ನು ಈ ವೇಳೆಯಲ್ಲಿ ತಿಳಿಯ ಬಯಸುತ್ತೇನೆ. ಕಾಂಗ್ರೆಸ್‌ನ ಅಪವ್ಯಾಖ್ಯಾನದಿಂದಲೇ ಇಂದು ಜಾತ್ಯತೀತೆಯನ್ನು ಅನುಮಾನಿಸಲಾಗುತ್ತಿದೆ” ಎಂದು ಹೇಳಿದ್ದಾರೆ.

”ಸಭಾಪತಿ ಅವಿಶ್ವಾಸ ನಿರ್ಣಯದ ವೇಳೆ ಬೆಂಬಲ ನೀಡುವಂತೆ ಕಾಂಗ್ರೆಸ್‌ನ ಯಾವ ನಾಯಕನೂ ಸೌಜನ್ಯಕ್ಕೂ ಜೆಡಿಎಸ್ ಬಳಿ ಚರ್ಚಿಸಿಲ್ಲ. ಹೀಗಿದ್ದೂ, ಜೆಡಿಎಸ್‌ನ ಜಾತ್ಯತೀತತೆಯ ಪರೀಕ್ಷೆ ನಡೆಯುತ್ತದೆ ಎಂಬ ಸಿದ್ದರಾಮಯ್ಯ ಹೇಳಿಕೆ ದುರಹಂಕಾರದ್ದು. ಬೆಂಬಲ ಕೇಳದಿದ್ದರೂ ಬೆಂಬಲಿಸಲು ನಾವೇನು ಗುಲಾಮರಲ್ಲ. ಕಾಂಗ್ರೆಸ್ಸಿನ ದೌಲತ್ತೇ ಅದರ ದುಸ್ಥಿತಿಗೆ ಕಾರಣ” ಎಂದು ಕಾಂಗ್ರೆಸ್‌ ವಿರುದ್ದ ಕಿಡಿಕಾರಿದ್ದಾರೆ.

”ನಮ್ಮ ಧರ್ಮ, ದೇವರಲ್ಲಿ ಆಳ ನಂಬಿಕೆ ಹೊಂದಿಯೂ, ಎಲ್ಲರ ನಂಬಿಕೆಗಳನ್ನು ಗೌರವಿಸುವುದು, ಎಲ್ಲರನ್ನೂ ಸಮಾನವಾಗಿ ಕಾಣುವುದು” ದೇವೇಗೌಡರ ಜಾತ್ಯತೀತೆ ಎಂಬುದನ್ನು ಸಂದರ್ಭ ಸಿಕ್ಕಾಗ ಹೇಳಿದ್ದೇನೆ. ಆದರೆ ಕಾಂಗ್ರೆಸ್, ಸಿದ್ದರಾಮಯ್ಯರ ವ್ಯಾಖ್ಯಾನ ಇದಕ್ಕೆ ವಿರುದ್ಧವಾದ್ದು. ಜಾತಿಗಳನ್ನು ಒಡೆಯುವುದು, ಅನಗತ್ಯ ಓಲೈಕೆಯೇ ಅವರ ಜಾತ್ಯತೀತತೆ” ಎಂದಿದ್ದಾರೆ.

”ಒಳ್ಳೆ ಇಮೇಜ್ ಅನ್ನು ಚುನಾವಣೆ ಮತ್ತು ಸ್ಥಾನಗಳಿಕೆ ಮೇಲೆ ಲೆಕ್ಕ ಹಾಕಿದ್ದಾರೆ ಸಿದ್ದರಾಮಯ್ಯನವರು. ಹಾಗಾದರೆ ದೇಶದ ಎಲ್ಲ ಕಡೆ ಸೋಲುತ್ತಿರುವ ಕಾಂಗ್ರೆಸ್‌ನ ಇಮೇಜ್ ಕತೆ ಏನು? 2018ರ ಚುನಾವಣೆಯಲ್ಲಿ 120 ರಿಂದ 80ಕ್ಕೆ ಕುಸಿದ, ಸ್ವತಃ ಚಾಮುಂಡೇಶ್ವರಿಯಲ್ಲಿ ಸೋತ ಸಿದ್ದರಾಮಯ್ಯನವರಿಗೆ ಇಮೇಜ್ ಇತ್ತೇ? ಇಮೇಜ್ ಇರುವುದು ನಮ್ಮ ಒಳ್ಳೆತನದಲ್ಲಿ” ಎಂದು ಹೇಳಿದ್ದಾರೆ.

”ಜೆಡಿಎಸ್ ಬಿಜೆಪಿಯ ಬಿ ಟೀಮ್ ಎಂಬ ಕಾಂಗ್ರೆಸ್ಸಿಗರ ಸವಕಲು ಆರೋಪಕ್ಕೆ ಈ ಹಿಂದೆಯೇ ಉತ್ತರ ನೀಡಿದ್ದೇನೆ. ಈಗಲೂ ಹೇಳುತ್ತೇನೆ. ಕಾಂಗ್ರೆಸ್ಸೇ ಜೆಡಿಎಸ್‌ನ ಬಿ ಟೀಂ. ಕರ್ನಾಟಕ ಪ್ರದೇಶ ಕಾಂಗ್ರೆಸ್‌ನ ಪಕ್ಕದಲ್ಲಿ ಆವರಣ (ಬ್ರಾಕೆಟ್) ಹಾಕಿ ಅದರಲ್ಲಿ ಜೆಡಿಎಸ್ ಎಂದು ಬರೆದಾಗಷ್ಟೇ ಅದರ ಹೆಸರು ಪೂರ್ಣವಾಗುತ್ತದೆ. ಅಷ್ಟರ ಮಟ್ಟಿಗೆ ಅಲ್ಲಿ ಜೆಡಿಎಸ್ ಇದೆ” ಎಂದು ಹೇಳಿದ್ದಾರೆ.

”ಜೆಡಿಎಸ್‌‌ನೊಂದಿಗೆ ಮೈತ್ರಿ ಮಾಡಿಕೊಂಡಿದ್ದು ಕುಮಾರಸ್ವಾಮಿ ಅವರನ್ನು ಸಿಎಂ ಮಾಡಿದ್ದು ಹೈಕಮಾಂಡ್ ಎಂದು ಹೇಳಿದ್ದಾರೆ ಸಿದ್ದರಾಮಯ್ಯ. ಅಂದರೆ ಹೈಕಮಾಂಡ್‌ನ ನಿರ್ಣಯ ತಮಗೆ ಇಷ್ಟವಿರಲಿಲ್ಲ ಎಂಬುವುದು ಸಿದ್ದರಾಮಯ್ಯ ಅವರ ಮಾತಿನಲ್ಲಿ ಧ್ವನಿಸುತ್ತಿರುವ ಅರ್ಥ. ಹೀಗಾಗಿಯೇ ಸಿದ್ದರಾಮಯ್ಯ ಸರ್ಕಾರ ಕೆಡವಿದರು. ಅದರ ಅಪವಾದ ಬೇರೆಯವರಿಗೆ ಬಳಿದರು” ಎಂದು ಆರೋಪಿಸಿದ್ದಾರೆ.

”ಜಾತ್ಯತೀತ ನಿಲುವಿನ ಬಗ್ಗೆ! ದೇವೇಗೌಡರ ಬದ್ದತೆ ಬಗ್ಗೆ ನಾವು ನಿಮ್ಮಿಂದ ಉಪದೇಶ ಕೇಳಬೇಕಿಲ್ಲ. ದೇವೇಗೌಡರ ಬದ್ಧತೆಯನ್ನು ಬಳಸಿಕೊಂಡು ಬ್ಲ್ಯಾಕ್ಮೇಲ್ ಮಾಡಿದ ಕಾಂಗ್ರೆಸ್ ಇವತ್ತು ಜೆಡಿಎಸ್ ನ ನಿಲುವನ್ನು ಪ್ರಶ್ನಿಸುವ ಯಾವ ನೈತಿಕತೆ ಉಳಿಸಿಕೊಂಡಿದೆ” ಎಂದು ಪ್ರಶ್ನಿಸಿದ್ದಾರೆ.

”ಇನ್ನು ಫೈವ್ ಸ್ಟಾರ್ ಸಂಸ್ಕೃತಿ ಬಗ್ಗೆ ರಾಗ ಎಳೆದಿದ್ದಿರಿ? ಫೈವ್ ಸ್ಟಾರ್ ಹಾಗೂ ಗುಡಿಸಲಿನಿಂದಲೂ ಅಧಿಕಾರ ನಡೆಸಿದ್ದೇನೆ.ಜನತೆಗೆ ನನ್ನಷ್ಟು ಸುಲಭವಾಗಿ ದಕ್ಕುವ ರಾಜಕಾರಣಿ ಮತ್ತೊಬ್ಬರಿಲ್ಲ ಎಂಬುವುದನ್ನು ನೆನಪಿಸಲು ಬಯಸುತ್ತೇನೆ” ಎಂದು ಹೇಳಿದ್ದಾರೆ.

”ನಿಮ್ಮ ತಾಳಕ್ಕೆ ಕುಣಿಯಲು ಜೆಡಿಎಸ್ ಗುಲಾಮಿ ಸಂಸ್ಕೃತಿಯ ಪಕ್ಷವಲ್ಲ ರಾಜ್ಯದ ಇಂದಿನ ರಾಜಕಾರಣದ ಅಯೋಮಯ ಸ್ಥಿತಿಗೆ ನಿಮ್ಮ ದ್ವಂದ್ವ ಹಾಗೂ ಇಬ್ಬಂದಿತನದ ನಿಲುವೇ ಕಾರಣ” ಎಂದಿ‌ದ್ದಾರೆ.

 

 

Vishwa News 24

Recent Posts

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

2 days ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

2 days ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

2 days ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

2 days ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

2 days ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

2 days ago