Featured

ನಿಮ್ಮ ದ್ವೇಷವನ್ನು ಭಜರಂಗದಳ ನಿಷೇಧದ ಮೂಲಕ ತೀರಿಸಿಕೊಳ್ಳಲು ಹೊರಟಿದ್ದೀರಾ ? – ಸಚಿವ ಸುನೀಲ್ ಕುಮಾರ್ ಆಕ್ರೋಶ- Vishwanews24

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭಜರಂಗ ದಳ ನಿಷೇಧ ಪ್ರಸ್ತಾಪ :  ಕಾಂಗ್ರೆಸ್  ಹಿಂದು ವಿರೋಧಿ ನಿಲುವಿಗೆ ಧಿಕ್ಕಾರ ..

ಭಜರಂಗದಳ ಎನ್ನುವುದು ಸಮಾಜ ವಿರೋಧಿ ಸಂಘಟನೆಯಲ್ಲ: ಸಚಿವ ಸುನೀಲ್ ಕುಮಾರ್

ಉಡುಪಿ: ಕಾಂಗ್ರೆಸ್ ಬಿಡುಗಡೆ ಮಾಡಿದ ಪ್ರಣಾಳಿಕೆಯಲ್ಲಿ ಭಜರಂಗದಳ ನಿಷೇಧ ವಿಚಾರಕ್ಕೆ ರಾಜ್ಯ ಇಂಧನ ಸಚಿವ ಸುನೀಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸುನೀಲ್ ಕುಮಾರ್ ಕಾಂಗ್ರೆಸ್ ಹಾಗೂ ಎಸ್ ಡಿಪಿಐ ಒಂದೇ ನಾಣ್ಯದ ಎರಡು ಮುಖ. ಭಜರಂಗದಳ ನಿಷೇಧಿಸುವುದು ಸೇರಿದಂತೆ ಕಾನೂನು ಕ್ರಮ ತೆಗೆದುಕೊಳ್ಳುವ ವಿಚಾರ ಕಾಂಗ್ರೆಸ್ ಪ್ರಸ್ತಾಪಿಸಿದೆ. ಡಿಕೆಶಿ, ಸಿದ್ದರಾಮಯ್ಯನವರೇ, ನಾವು ಪಿಎಫ್ ಐ ನಿಷೇಧ ಮಾಡಿದ್ದೇವೆ ಅದೇ ಸಂಕಟ ಹಾಗೂ ದ್ವೇಷವನ್ನು ಭಜರಂಗದಳ ನಿಷೇಧದ ಮೂಲಕ ತೀರಿಸಿಕೊಳ್ಳಲು ಹೊರಟಿದ್ದೀರಾ ? ನಿಮ್ಮ ಹಿಂದು ವಿರೋಧಿ ನಿಲುವಿಗೆ ಧಿಕ್ಕಾರ ಎಂದಿದ್ದಾರೆ.

ಭಜರಂಗದಳ ಎನ್ನುವುದು ಸಮಾಜ ವಿರೋಧಿ ಸಂಘಟನೆಯಲ್ಲ. ಹಿಂದೂಗಳ ರಕ್ಷಣೆಗೆ, ಗೋಮಾತೆಯ ಹಿತಕ್ಕೆ, ಹಿಂದು ಸೋದರಿಯರ ಮಾನ ಸಂರಕ್ಷಣೆಗೆ ಸಿದ್ದವಾಗಿರುವ ಕಾರ್ಯಕರ್ತರ ಪಡೆ ಮುಸ್ಲಿಂ ಓಲೈಕೆಗಾಗಿ ಭಜರಂಗದಳ ನಿಷೇಧಿಸುತ್ತೇವೆಂಬ ದಾಷ್ಟ್ಯವೇ ? ಭಜರಂಗ ದಳ ಹಾಗೂ ಪಿಎಫ್ ಐನ್ನು ಒಂದೇ ತಕ್ಕಡಿಯಲ್ಲಿ ಅಳತೆ ಮಾಡುವ ಕಾಂಗ್ರೆಸಿಗರ ಮನಸು ರೋಗಗ್ರಸ್ಥವಾಗಿದೆ. ಪಿಎಫ್ಐ ಒಂದು ಭಯೋತ್ಪಾದಕ ಸಂಘಟನೆ ಎಂಬ ಕಾರಣಕ್ಕೆ ನಿಷೇಧ ಮಾಡಿದ್ದೇವೆ ಭಜರಂಗದಳ ಹಿಂದು ಸಮಾಜ ಮತ್ತು ದೇಶ ಹಿತದ ಸಂಘಟನೆ. ದೇಶಪ್ರೇಮವನ್ನು ಕಾಂಗ್ರೆಸ್ ನಿಷೇಧಿಸುತ್ತದೆಯೇ ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

1 hour ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

3 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

4 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

4 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

4 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

5 hours ago