Featured

ನಿಮ್ಮ ದ್ವೇಷವನ್ನು ಭಜರಂಗದಳ ನಿಷೇಧದ ಮೂಲಕ ತೀರಿಸಿಕೊಳ್ಳಲು ಹೊರಟಿದ್ದೀರಾ ? – ಸಚಿವ ಸುನೀಲ್ ಕುಮಾರ್ ಆಕ್ರೋಶ- Vishwanews24

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭಜರಂಗ ದಳ ನಿಷೇಧ ಪ್ರಸ್ತಾಪ :  ಕಾಂಗ್ರೆಸ್  ಹಿಂದು ವಿರೋಧಿ ನಿಲುವಿಗೆ ಧಿಕ್ಕಾರ ..

ಭಜರಂಗದಳ ಎನ್ನುವುದು ಸಮಾಜ ವಿರೋಧಿ ಸಂಘಟನೆಯಲ್ಲ: ಸಚಿವ ಸುನೀಲ್ ಕುಮಾರ್

ಉಡುಪಿ: ಕಾಂಗ್ರೆಸ್ ಬಿಡುಗಡೆ ಮಾಡಿದ ಪ್ರಣಾಳಿಕೆಯಲ್ಲಿ ಭಜರಂಗದಳ ನಿಷೇಧ ವಿಚಾರಕ್ಕೆ ರಾಜ್ಯ ಇಂಧನ ಸಚಿವ ಸುನೀಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸುನೀಲ್ ಕುಮಾರ್ ಕಾಂಗ್ರೆಸ್ ಹಾಗೂ ಎಸ್ ಡಿಪಿಐ ಒಂದೇ ನಾಣ್ಯದ ಎರಡು ಮುಖ. ಭಜರಂಗದಳ ನಿಷೇಧಿಸುವುದು ಸೇರಿದಂತೆ ಕಾನೂನು ಕ್ರಮ ತೆಗೆದುಕೊಳ್ಳುವ ವಿಚಾರ ಕಾಂಗ್ರೆಸ್ ಪ್ರಸ್ತಾಪಿಸಿದೆ. ಡಿಕೆಶಿ, ಸಿದ್ದರಾಮಯ್ಯನವರೇ, ನಾವು ಪಿಎಫ್ ಐ ನಿಷೇಧ ಮಾಡಿದ್ದೇವೆ ಅದೇ ಸಂಕಟ ಹಾಗೂ ದ್ವೇಷವನ್ನು ಭಜರಂಗದಳ ನಿಷೇಧದ ಮೂಲಕ ತೀರಿಸಿಕೊಳ್ಳಲು ಹೊರಟಿದ್ದೀರಾ ? ನಿಮ್ಮ ಹಿಂದು ವಿರೋಧಿ ನಿಲುವಿಗೆ ಧಿಕ್ಕಾರ ಎಂದಿದ್ದಾರೆ.

ಭಜರಂಗದಳ ಎನ್ನುವುದು ಸಮಾಜ ವಿರೋಧಿ ಸಂಘಟನೆಯಲ್ಲ. ಹಿಂದೂಗಳ ರಕ್ಷಣೆಗೆ, ಗೋಮಾತೆಯ ಹಿತಕ್ಕೆ, ಹಿಂದು ಸೋದರಿಯರ ಮಾನ ಸಂರಕ್ಷಣೆಗೆ ಸಿದ್ದವಾಗಿರುವ ಕಾರ್ಯಕರ್ತರ ಪಡೆ ಮುಸ್ಲಿಂ ಓಲೈಕೆಗಾಗಿ ಭಜರಂಗದಳ ನಿಷೇಧಿಸುತ್ತೇವೆಂಬ ದಾಷ್ಟ್ಯವೇ ? ಭಜರಂಗ ದಳ ಹಾಗೂ ಪಿಎಫ್ ಐನ್ನು ಒಂದೇ ತಕ್ಕಡಿಯಲ್ಲಿ ಅಳತೆ ಮಾಡುವ ಕಾಂಗ್ರೆಸಿಗರ ಮನಸು ರೋಗಗ್ರಸ್ಥವಾಗಿದೆ. ಪಿಎಫ್ಐ ಒಂದು ಭಯೋತ್ಪಾದಕ ಸಂಘಟನೆ ಎಂಬ ಕಾರಣಕ್ಕೆ ನಿಷೇಧ ಮಾಡಿದ್ದೇವೆ ಭಜರಂಗದಳ ಹಿಂದು ಸಮಾಜ ಮತ್ತು ದೇಶ ಹಿತದ ಸಂಘಟನೆ. ದೇಶಪ್ರೇಮವನ್ನು ಕಾಂಗ್ರೆಸ್ ನಿಷೇಧಿಸುತ್ತದೆಯೇ ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

5 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

5 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago