Featured

ನಿಮ್ಮ ಧ್ವಜದ ಮೇಲೆ ಚಂದ್ರ ಇದ್ದರೆ, ಚಂದ್ರನ ಮೇಲೆ ನಮ್ಮ ಧ್ವಜ ಇದೆ : ಪಾಕ್ ಗೆ ಹರ್ಭಜನ್ ಸಿಂಗ್ -Vishwanews24

ನವದೆಹಲಿ  : ಇಸ್ರೋದ ಈ ಮಹತ್ವದ ಸಾಧನೆಗೆ ದೇಶದೆಲ್ಲೆಡೆ ಸಂಭ್ರಮ ವ್ಯಕ್ತವಾಗಿದ್ದು  ಎಲ್ಲರೂ ಅಭಿನಂದನಾ ಸಂದೇಶವನ್ನು ಹಾಕುತ್ತಿದ್ದಾರೆ. ಇದಕ್ಕೆ ರಾಜಕಾರಣಿಗಳು, ಚಿತ್ರತಾರೆಯರು, ಕ್ರಿಕೆಟಿಗರು ಯಾರೂ ಹೊರತಾಗಿಲ್ಲ. ಆದರೆ ಕ್ರಿಕೆಟಿಗ ಹರ್ಭಜನ್ ಸಿಂಗ್  ತಾವು ಸ್ವಲ್ಪ ಭಿನ್ನವಾಗಿ ಚಂದ್ರಯಾನವನ್ನು ಸಂಭ್ರಮಿಸಿದ್ದು ತಮ್ಮ ಸಂದೇಶದ ಮುಖೇನ ಪರೋಕ್ಷ ಆಗಿ ಪಾಕಿಸ್ತಾನಕ್ಕೆ ಕುಟುಕಿದ್ದಾರೆ.
ಹರ್ಭಜನ್ ಸಿಂಗ್ ಟ್ವೀಟರ್ ನಲ್ಲಿ, ಪಾಕಿಸ್ತಾನದ ಸೇರಿದಂತೆ ಕೆಲವು ದೇಶದ ಮೇಲೆ ಚಂದ್ರನ ಚಿತ್ರ ಇದೆ ಎಂದು ಬರೆದು, ಟರ್ಕಿ, ಲುಬಿಯಾ, ಟುನೀಶಿಯಾ, ಅಜೆರ್ಬೈಜಾನ್, ಅಲ್ಜೀರಿಯಾ, ಮಲೇಷ್ಯಾ, ಮಾಲ್ಡೀವ್ಸ್ ಧ್ವಜದ ಎಮೋಜಿ ಹಾಕಿ, ಚಂದ್ರನ ಮೇಲೆ ನಮ್ಮ ಧ್ವಜ ಇದೆ ಎಂದು ಭಾರತ, ಅಮೆರಿಕ, ಚೀನಾ ಹಾಗೂ ರಷ್ಯಾ ಧ್ವಜವನ್ನು ಹಾಕಿ ಟ್ವೀಟ್ ಮಾಡಿದ್ದಾರೆ.
ಆಂಧ್ರ ಪ್ರದೇಶದ ನೆಲ್ಲೋರ್ ಜಿಲ್ಲೆಯ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿ ಸೋಮವಾರ (ಜುಲೈ 22) ಚಂದ್ರಯಾನ್-2 ರಾಕೆಟ್ ಉಡಾವಣೆ ಯಶಸ್ವಿಯಾಗಿತ್ತು. ಇಸ್ರೋ ತಂಡದ ಶ್ರಮವನ್ನು ವೀರೇಂದ್ರ ಸೆಹ್ವಾಗ್, ಗೌತಮ್ ಗಂಭೀರ್ ಸೇರಿದಂತೆ ಅನೇಕ ಕ್ರಿಕೆಟಿಗರು ಶ್ಲಾಘಿಸಿದ್ದರು.
Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago