ಬಳ್ಳಾರಿ: ರಾಜಕಾರಣದಲ್ಲಿ ವಿಶ್ವಾಸಾರ್ಹತೆ ಬಹಳ ಮುಖ್ಯ. ಸ್ವಾಭಿಮಾನಕ್ಕೆ ಧಕ್ಕೆ ತರಬೇಡಿ ಎಂದು ಹೈಕಮಾಂಡ್ ನಾಯಕರ ಮುಂದೆ ಕೇಳಿಕೊಳ್ಳುತ್ತೇನೆ. ಹೈಕಮಾಂಡ್ ಇಟ್ಟ ನಂಬಿಕೆಗೆ ಚ್ಯುತಿ ಬಾರದಂತೆ ನಡೆದುಕೊಳ್ಳುತ್ತೇನೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಹೇಳಿದರು.
ಅಸಮಾಧಾನದ ಕುರಿತು ಬಳ್ಳಾರಿಯ ಮನೆಯಲ್ಲಿ ಶುಕ್ರವಾರ ಮಾತನಾಡಿದ ಶ್ರೀರಾಮುಲು, ಗುರುವಾರ ಜೆಪಿ ನಡ್ಡಾ ಅವರು ದೂರವಾಣಿ ಮೂಲಕ ಮಾತಾಡಿದರು. ಏನಾಗಿದೆ ಎನ್ನುವ ಮಾಹಿತಿ ಎಲ್ಲವನ್ನೂ ವಿವರಿಸಿದ್ದೇನೆ. ಕೋರ್ ಕಮಿಟಿಯಲ್ಲಿ ರಾಧಾಮೋಹನ್ ಅಗರವಾಲ್ ನಡೆದುಕೊಂಡ ಬಗ್ಗೆಯೂ ಹೇಳಿದ್ದೇನೆ. ರಾಮುಲು ನಿನ್ನ ಪರವಾಗಿ ನಾನಿದ್ದೇನೆ, ಯಾವುದೇ ಯೋಚನೆ ಮಾಡಬೇಡಿ. ಮುಂದೆ ದೆಹಲಿಗೆ ಬರುವುದಾಗಿದ್ದರೆ ಬನ್ನಿ ಎಂದು ನಡ್ಡಾ ಹೇಳಿದ್ದಾರೆ. ನಾನು ಸಹಾಯಕರಿಂದ ಅಪಾಯಿಟ್ಮೆಂಟ್ ತಗೊಂಡು ಬರುತ್ತೇನೆ ಎಂದು ಹೇಳಿದ್ದೇನೆ ಎಂದರು.
ನರೇಂದ್ರ ಮೋದಿ, ಅಮಿತ್ ಶಾ ಅವರಿಗೆ ಸುದ್ದಿ ಮುಟ್ಟಿಸಿದ್ದೇವೆ, ನಿಮ್ಮ ಪರವಾಗಿ ನಾವಿದ್ದೇವೆ ಎಂದು ನಡ್ಡಾ ಹೇಳಿದ್ದಾರೆ. ಜೋಶಿಯವರೂ ಕರೆ ಮಾಡಿ, ನಡ್ಡಾ ಜೊತೆ ಮಾತನಾಡುವಂತೆ ಹೇಳಿದ್ದರು. ನಿಮಗೆ ನೋವಾಗಿದೆ ಎನ್ನುವುದು ಗೊತ್ತಾಗಿದೆ. ಅಗರವಾಲ್ ಸಹಿತ ತಮ್ಮ ಮಾತು ಹಿಂದಕ್ಕೆ ತಗೊಳ್ಳುವುದಾಗಿ ಹೇಳಿದ್ದಾರೆ. ನೀವು ಪಾರ್ಟಿ ಬಿಡುವ ಬಗ್ಗೆ ಯೋಚನೆ ಮಾಡಬೇಡಿ ಎಂದು ಜೋಶಿ ಹೇಳಿದ್ದರು. ವಿಜಯೇಂದ್ರ ನನ್ನ ಜೊತೆ ಮಾತಾಡಿದ್ದಾರೆ. ನಿಮಗೆ ಈ ರೀತಿ ಆಗಿರುವುದು ನೋವಾಗಿದೆ ಎಂದು ತಿಳಿಸಿದ್ದಾರೆ. ವಿರೋಧ ಪಕ್ಷದ ನಾಯಕ ಅಶೋಕ್, ಮಾಜಿ ಮುಖ್ಯಮಂತ್ರಿಗಳಾದ ಬೊಮ್ಮಾಯಿ, ಸದಾನಂದ ಗೌಡ ಸಹ ಮಾತಾಡಿದ್ದಾರೆ. ಎಲ್ಲರಿಗೂ ನನ್ನ ಮೇಲೆ ವಿಶ್ವಾಸವಿದೆ. ನನ್ನ ಸುಧೀರ್ಘ ರಾಜಕೀಯ ಇತಿಹಾಸದಲ್ಲಿ ಬಿಜೆಪಿಗೆ ಸಾಧ್ಯವಾದಷ್ಟು ಅಳಿಲು ಸೇವೆ ಸಲ್ಲಿಸಿದ್ದೀನೆ. ಹೀಗಾಗಿ ಅದನ್ನ ಗುರುತಿಸಿ ಮಾತನಾಡ್ತಿದ್ದಾರೆ. ನನ್ನ ಕಳೆದುಕೊಳ್ಳಬಾರದು ಎಂದು ಹೇಳಿದ್ದಾರೆ. ಎಲ್ಲವನ್ನೂ ಪಾರ್ಟಿಯವರಿಗೆ ತಿಳಿಸಿದ್ದೇನೆ. ಇನ್ಮೇಲೆ ಏನೇ ಇದ್ದರೂ ನಾಲ್ಕು ಗೋಡೆಗಳ ಮಧ್ಯೆ ಮಾತಾಡೋಣ ಎಂದಿದ್ದಾರೆ ಎಂದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…