Featured

ನಿಮ್ಮ ಮಂಗಳೂರು ಭೇಟಿ ವಿಕಾಸಕ್ಕೋ? ವಿನಾಶಕ್ಕೋ  : ಮೋದಿಗೆ ಸಿದ್ದರಾಮಯ್ಯ ಪ್ರಶ್ನೆ – VIshwanews24

ನಿಮ್ಮ ಮಂಗಳೂರು ಭೇಟಿ ವಿಕಾಸಕ್ಕೋ? ವಿನಾಶಕ್ಕೋ  : ಮೋದಿಗೆ ಸಿದ್ದರಾಮಯ್ಯ ಪ್ರಶ್ನೆ

ಮಂಗಳೂರು: ಕಡಲನಗರಿ ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನಕ್ಕೆ ಕೆಲವೇ ಗಂಟೆಗಳು ಬಾಕಿ ಇರುವಂತೆಯೇ ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವಿಟ್ಟರ್ ವಾರ್ ಶುರುಮಾಡಿದ್ದಾರೆ. ಮೋದಿಗೆ ಟ್ವೀಟ್ ಮೂಲಕ ಸಿದ್ದರಾಮಯ್ಯ ಪ್ರಶ್ನೆ ಮೇಲೆ ಪ್ರಶ್ನೆ ಕೇಳಿದ್ದಾರೆ. ನಿಮ್ಮ ಮಂಗಳೂರು ಭೇಟಿ ವಿಕಾಸಕ್ಕೋ? ವಿನಾಶಕ್ಕೋ ಎಂದು ಲೇವಡಿ ಮಾಡಿದ್ದಾರೆ.

“ಸನ್ಮಾನ್ಯ ಪ್ರಧಾನ ಮಂತ್ರಿ ನರೇಂದ್ರಮೋದಿಯವರಿಗೆ ಮಂಗಳೂರಿಗೆ ಸ್ವಾಗತ. ದಕ್ಷಿಣ ಕನ್ನಡದ ಉದ್ಯಮಶೀಲ ಹಿರಿಯರು ಸಿಂಡಿಕೇಟ್, ಕಾರ್ಪೋರೇಷನ್, ವಿಜಯಾ, ಕೆನರಾ ಮತ್ತು ಕರ್ನಾಟಕ ಹೀಗೆ ಐದು ಬ್ಯಾಂಕ್ ಗಳನ್ನು ಹುಟ್ಟುಹಾಕಿದ್ದರು. ನೀವು ಇವುಗಳಲ್ಲಿ ಮೂರು ಬ್ಯಾಂಕುಗಳ ನಾಮಾವಶೇಷ ಮಾಡಿದ್ದೀರಿ.ಇದು ವಿಕಾಸವೋ? ವಿನಾಶವೋ ನಿಮ್ಮ ಇಂದಿನ ಭಾಷಣದಲ್ಲಿ ಈ ಪ್ರಶ್ನೆಗೆ ಉತ್ತರ ಕೊಡಬೇಕೆಂದು ವಿನಯಪೂರ್ವಕ ಮನವಿ” ಎಂದು ಕಾಳೆಲೆದಿದ್ದಾರೆ.

ಇಂದು ಪ್ರಧಾನಿ ಮಂಗಳೂರಿಗೆ- ತುಳು ಭಾಷೆ ಮಾನ್ಯತೆಗೆ 50 ಸಾವಿರಕ್ಕೂ ಅಧಿಕ ಟ್ವೀಟ್‌ – Vishwanews24

ಕಾರ್ಪೋರೇಷನ್ ಬ್ಯಾಂಕ್ ಸ್ಥಾಪಕರು- ಹಾಜಿ ಅಬ್ದುಲ್ಲಾ (1906)ಸಿಂಡಿಕೇಟ್ ಬ್ಯಾಂಕ್ ಸ್ಥಾಪಕರು ಟಿಎಂಎ ಪೈ, ಉಪೇಂದ್ರ ಪೈ, ವಾಮನ್ ಕುಡ್ವಾ (1925)ವಿಜಯಾ ಬ್ಯಾಂಕ್ ಸ್ಥಾಪಕರು- ಎ.ಬಿ.ಶೆಟ್ಟಿ (1931)ಪ್ರಧಾನಿ ನರೇಂದ್ರ ಮೋದಿಯವರೇ, ನಿಮ್ಮ ನಡೆ ಈ ಅಮರವೀರರಿಗೆ ಬಗೆದ ದ್ರೋಹವಲ್ಲವೇ? ಬಜ್ಪೆ ವಿಮಾನ ನಿಲ್ದಾಣ ಪ್ರಥಮ ಪ್ರಧಾನಿ ಜವಾಹರಲಾಲ್ ನೆಹರೂ ಕೊಡುಗೆ.(25-12-1971) ಇದು ಸಂಸದ ಯು.ಶ್ರೀನಿವಾಸ ಮಲ್ಯ ಪ್ರಯತ್ನದ ಫಲ. ಈ ವಿಮಾನ ನಿಲ್ದಾಣವನ್ನು ನೀವು ಉದ್ಯಮಿ ಮಿತ್ರ ಅದಾನಿಯವರಿಗೆ ಅರ್ಪಿಸಿದಿರಿ . ನವಮಂಗಳೂರು ಬಂದರು ಮಾಜಿ ಪ್ರಧಾನಿ ಇಂದಿರಾಗಾಂಧಿ ಕೊಡುಗೆ (1975). ಇದು ಸಂಸದ ಯು.ಶ್ರೀನಿವಾಸ ಮಲ್ಯ ಪ್ರಯತ್ನದ ಫಲ.ನವಮಂಗಳೂರು ಬಂದರನ್ನು ಉದ್ಯಮಿ ಮಿತ್ರ ಅದಾನಿಯವರಿಗೆ ಹಂತಹಂತವಾಗಿ ಮಾರುತ್ತಿರುವುದು ಯತ್ನಿಸುತ್ತಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ಮಂಗಳೂರಿಗೆ – ಕಾರ್ಯಕ್ರಮಕ್ಕೆ ಕಪ್ಪು ಬಟ್ಟೆ, ಲೈಟರ್‌, ಬೆಂಕಿಪೊಟ್ಟಣ ನಿಷೇಧ : ಎಡಿಜಿಪಿ ಅಲೋಕ್‌ ಕುಮಾರ್ ಖಡಕ್ ಸೂಚನೆ – VIshwanews24

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

20 hours ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

20 hours ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

21 hours ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

21 hours ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

21 hours ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

23 hours ago