Featured

ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. !! – vishwanews24

NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ..

ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ..

ನಿಮ್ಮ ಮೊಬೈಲ್‌ ಫೋನ್‌ ಜೋರಾಗಿ ಬೀಪ್ ಮಾಡದರೆ ಅಥವಾ ಅನಿರೀಕ್ಷಿತ ಮೆಸೇಜ್‌ ಬಂದರೆ ಭಯಪಡಬೇಡಿ. ಅದು ತುರ್ತು ಎಚ್ಚರಿಕೆಯ ಸಂದೇಶ. ಹೊಸ ತುರ್ತು ಎಚ್ಚರಿಕೆ ವ್ಯವಸ್ಥೆಯನ್ನು ಸರ್ಕಾರ ಪರೀಕ್ಷಿಸುತ್ತಿದೆ.

ಪ್ರಕೃತಿ ವಿಕೋಪ ಬಂದಾಗ ತನ್ನ ನಾಗರಿಕರನ್ನು ರಕ್ಷಿಸಲು ಭಾರತ ತನ್ನದೇ ಆದ ಎಚ್ಚರಿಕೆ ವ್ಯವಸ್ಥೆಯನ್ನು ನಿರ್ಮಿಸುತ್ತಿದೆ. ಸೆಲ್ ಬ್ರಾಡ್‌ಕಾಸ್ಟ್ ಅಲರ್ಟ್ ಹೆಸರಿನ ಈ ಸಿಸ್ಟಮ್ ಪ್ರಸ್ತುತ ದೇಶಾದ್ಯಂತ ಪರೀಕ್ಷೆಯಲ್ಲಿದೆ. ವಿಕೋಪಗಳಂತಹ ತುರ್ತು ಸಂದರ್ಭಗಳಲ್ಲಿ ನಾಗರಿಕರ ಮೊಬೈಲ್‌ಗಳಿಗೆ ನೇರವಾಗಿ ಸಂದೇಶ ಬಿತ್ತರಿಸುವ ಸೆಲ್‌ ಬ್ರಾಡ್‌ಕಾಸ್ಟ್‌ ಸೇವೆ ಆರಂಭಕ್ಕೆ ಸಿದ್ಧತೆ ನಡೆಸಲಾಗಿದೆ. ಅದರ ಭಾಗವಾಗಿ ಇಂದು (ಮೇ 2) ಬೆಂಗಳೂರು ನಾಗರಿಕರ ಮೊಬೈಲ್‌ಗಳಿಗೆ NDMAನಿಂದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಫ್ಲ್ಯಾಶ್ SMS ಸಂದೇಶ ಬರಬಹುದು. ಅದಕ್ಕೆ ಯಾರೂ ಆತಂಕಪಡಬೇಕಿಲ್ಲ.

ಇದನ್ನೂ ಓದಿ:

ಪ್ರಕೃತಿ ವಿಕೋಪ ಮತ್ತು ತುರ್ತು ಸಂದರ್ಭಗಳಲ್ಲಿ ಸರ್ಕಾರವು ಸಕಾಲಿಕ ಮಾಹಿತಿಯನ್ನು ಒದಗಿಸಲು ಬಯಸುತ್ತದೆ. ಮೊಬೈಲ್ ಫೋನ್‌ಗಳಲ್ಲಿ ನೇರ ಎಚ್ಚರಿಕೆಗಳಿಗಿಂತ ಉತ್ತಮವಾದ ಆಯ್ಕೆ ಇನ್ನೊಂದಿಲ್ಲ. ತುರ್ತು ಪರಿಸ್ಥಿತಿಗಳನ್ನು ಎದುರಿಸಲು ಅದರ ಸನ್ನದ್ಧತೆಯ ಭಾಗವಾಗಿ, ಸರ್ಕಾರವು ಸ್ಥಳೀಯ ಸೆಲ್ ಪ್ರಸಾರ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಿದೆ. ಪ್ರಸ್ತುತ ದೇಶಾದ್ಯಂತ ಈ ವ್ಯವಸ್ಥೆಯನ್ನು ಪರೀಕ್ಷಿಸುತ್ತಿದೆ.

ಸರ್ಕಾರವು ಈ ವ್ಯವಸ್ಥೆಯನ್ನು ಈ ಹಿಂದೆಯೂ ಕೆಲವು ಬಾರಿ ಪರೀಕ್ಷಿಸಿದೆ. ಆದರೆ, ಇದನ್ನು ರಾಷ್ಟ್ರವ್ಯಾಪಿ ಜಾರಿಗೆ ತರುವ ಮೊದಲು ವ್ಯವಸ್ಥೆಯ ಕಾರ್ಯಕ್ಷಮತೆ ಮತ್ತು ವಿಶ್ವಾಸಾರ್ಹತೆಯನ್ನು ನಿರ್ಣಯಿಸುವ ಸಲುವಾಗಿ ಮತ್ತೊಂದು ಪರೀಕ್ಷೆ ನಡೆಸುತ್ತಿದೆ.

ಇದನ್ನೂ ಓದಿ:

Vishwa News 24

Recent Posts

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

8 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

9 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

9 hours ago

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ – vishwanews24

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…

9 hours ago

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

13 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

14 hours ago