Featured

ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. !! – vishwanews24

NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ..

ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ..

ನಿಮ್ಮ ಮೊಬೈಲ್‌ ಫೋನ್‌ ಜೋರಾಗಿ ಬೀಪ್ ಮಾಡದರೆ ಅಥವಾ ಅನಿರೀಕ್ಷಿತ ಮೆಸೇಜ್‌ ಬಂದರೆ ಭಯಪಡಬೇಡಿ. ಅದು ತುರ್ತು ಎಚ್ಚರಿಕೆಯ ಸಂದೇಶ. ಹೊಸ ತುರ್ತು ಎಚ್ಚರಿಕೆ ವ್ಯವಸ್ಥೆಯನ್ನು ಸರ್ಕಾರ ಪರೀಕ್ಷಿಸುತ್ತಿದೆ.

ಪ್ರಕೃತಿ ವಿಕೋಪ ಬಂದಾಗ ತನ್ನ ನಾಗರಿಕರನ್ನು ರಕ್ಷಿಸಲು ಭಾರತ ತನ್ನದೇ ಆದ ಎಚ್ಚರಿಕೆ ವ್ಯವಸ್ಥೆಯನ್ನು ನಿರ್ಮಿಸುತ್ತಿದೆ. ಸೆಲ್ ಬ್ರಾಡ್‌ಕಾಸ್ಟ್ ಅಲರ್ಟ್ ಹೆಸರಿನ ಈ ಸಿಸ್ಟಮ್ ಪ್ರಸ್ತುತ ದೇಶಾದ್ಯಂತ ಪರೀಕ್ಷೆಯಲ್ಲಿದೆ. ವಿಕೋಪಗಳಂತಹ ತುರ್ತು ಸಂದರ್ಭಗಳಲ್ಲಿ ನಾಗರಿಕರ ಮೊಬೈಲ್‌ಗಳಿಗೆ ನೇರವಾಗಿ ಸಂದೇಶ ಬಿತ್ತರಿಸುವ ಸೆಲ್‌ ಬ್ರಾಡ್‌ಕಾಸ್ಟ್‌ ಸೇವೆ ಆರಂಭಕ್ಕೆ ಸಿದ್ಧತೆ ನಡೆಸಲಾಗಿದೆ. ಅದರ ಭಾಗವಾಗಿ ಇಂದು (ಮೇ 2) ಬೆಂಗಳೂರು ನಾಗರಿಕರ ಮೊಬೈಲ್‌ಗಳಿಗೆ NDMAನಿಂದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಫ್ಲ್ಯಾಶ್ SMS ಸಂದೇಶ ಬರಬಹುದು. ಅದಕ್ಕೆ ಯಾರೂ ಆತಂಕಪಡಬೇಕಿಲ್ಲ.

ಇದನ್ನೂ ಓದಿ:

ಪ್ರಕೃತಿ ವಿಕೋಪ ಮತ್ತು ತುರ್ತು ಸಂದರ್ಭಗಳಲ್ಲಿ ಸರ್ಕಾರವು ಸಕಾಲಿಕ ಮಾಹಿತಿಯನ್ನು ಒದಗಿಸಲು ಬಯಸುತ್ತದೆ. ಮೊಬೈಲ್ ಫೋನ್‌ಗಳಲ್ಲಿ ನೇರ ಎಚ್ಚರಿಕೆಗಳಿಗಿಂತ ಉತ್ತಮವಾದ ಆಯ್ಕೆ ಇನ್ನೊಂದಿಲ್ಲ. ತುರ್ತು ಪರಿಸ್ಥಿತಿಗಳನ್ನು ಎದುರಿಸಲು ಅದರ ಸನ್ನದ್ಧತೆಯ ಭಾಗವಾಗಿ, ಸರ್ಕಾರವು ಸ್ಥಳೀಯ ಸೆಲ್ ಪ್ರಸಾರ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಿದೆ. ಪ್ರಸ್ತುತ ದೇಶಾದ್ಯಂತ ಈ ವ್ಯವಸ್ಥೆಯನ್ನು ಪರೀಕ್ಷಿಸುತ್ತಿದೆ.

ಸರ್ಕಾರವು ಈ ವ್ಯವಸ್ಥೆಯನ್ನು ಈ ಹಿಂದೆಯೂ ಕೆಲವು ಬಾರಿ ಪರೀಕ್ಷಿಸಿದೆ. ಆದರೆ, ಇದನ್ನು ರಾಷ್ಟ್ರವ್ಯಾಪಿ ಜಾರಿಗೆ ತರುವ ಮೊದಲು ವ್ಯವಸ್ಥೆಯ ಕಾರ್ಯಕ್ಷಮತೆ ಮತ್ತು ವಿಶ್ವಾಸಾರ್ಹತೆಯನ್ನು ನಿರ್ಣಯಿಸುವ ಸಲುವಾಗಿ ಮತ್ತೊಂದು ಪರೀಕ್ಷೆ ನಡೆಸುತ್ತಿದೆ.

ಇದನ್ನೂ ಓದಿ:

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

11 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

11 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

12 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

14 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

14 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

14 hours ago