ನಿಯಂತ್ರಣ ತಪ್ಪಿದ ಸ್ಯಾಂಟ್ರೋಕಾರ್ ಬೈಕ್ ಗೆ ಡಿಕ್ಕಿ ,ಯಕ್ಷಗಾನ ಕಲಾವಿದ ಸಾವು.
ಉಡುಪಿ: ನಿಯಂತ್ರಣ ತಪ್ಪಿದ ಸ್ಯಾಂಟ್ರೋ ಕಾರೊಂದು ಬೈಕಿಗೆ ಡಿಕ್ಕಿಯಾದ ಪರಿಣಾಮ ಬೈಕ್ ಸಾವಾರ ಮೃತಪಟ್ಟ ಘಟನೆ ನಡೆದಿದೆ.
ಉಡುಪಿಯ ಆಶೀರ್ವಾದ್ ಬಳಿ ರಾಷ್ಟೀಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ.
ಮೃತ ಬೈಕ್ ಸಾವಾರ ಬನ್ನಾಡಿ ಉದಯ್ ಅಚಾರ್(೪೦) ಎನ್ನುವವರಾಗಿದ್ದಾರೆ.
ಸಂತಕಟ್ಟೆ ಭಾಗದಿಂದ ಉಡುಪಿ ಕಡೆ ಅತೀವೇಗದಿಂದ ಬಂದ ಸ್ಯಾಂಟ್ರೋ ಕಾರು ನಿಯಂತ್ರಣ ತಪ್ಪಿ ಡಿವೈಡರ್ ಏರಿ ಬೈಕಿಗೆ ಡಿಕ್ಕಿ ಹೊಡೆದಿದೆ.ಅ ಬಳಿಕ ಮುಂದೆ ಚಲಿಸಿ ಬೊಲೆರೋ ಜೀಪೊಂದಕ್ಕೆ ಡಿಕ್ಕಿ ಹೊಡೆದು ನಿಂತಿತು.ಅಫಘಾತ ರಭಸಕ್ಕೆ ಬೈಕ್ ಸಾವಾರ ಉದಯ್ ಅಚಾರ್ ರಸ್ತೆಗೆ ಎಸೆಯಲ್ಪಟ್ಟಿದ್ದು ,ತೀವ್ರವಾಗಿ ರಕ್ತಸ್ರಾವ ಉಂಟಾಗಿದೆ.ಕೂಡಲೇ ಅವರನ್ನ ಅದರ್ಶ ಅಸ್ಪತ್ರೆಗೆ ದಾಖಲಿಸಿಲಾಗಿದೆ.ಅದ್ರೆ ಅಷ್ಟರಲ್ಲಿ ಪ್ರಾಣ ಪಕ್ಷಿಹಾರಿ ಹೋಗಿತ್ತು.
ಬನ್ನಾಡಿಯ ಉದಯ್ ಅಚಾರ್ ವೃತ್ತಿಯಲ್ಲಿ ಮೆಡಿಕಲ್ ರೆಪ್ ಅಗಿದ್ದು .ಯಕ್ಷಗಾನ ಕಲಾವಿದರೂ ಕೂಡ ಅಗಿದ್ದರು.
ವಡ್ಡರ್ಸೆಯ ಮಹಾಲಿಂಗೇಶ್ವರ ಯಕ್ಷಗಾನ ಕಲಾಮಂಡಳಿಯ ಕಲಾವಿದರಾಗಿದ್ದರು.
ನಾಳೆ ಕಾಂಜರಹಳ್ಳಿ ವನದುರ್ಗಾ ದೇವಸ್ಥಾನದಲ್ಲಿ ಜೋಡಿ ಸ್ಪರ್ಧೆಗೆ ಬಣ್ಣ ಹಾಕುವವರಿದ್ದರು.
ಯಕ್ಷಗಾನ ರಂಗದಲ್ಲಿ ತನ್ನದೇ ಅದ ಅಭಿಮಾನಬಳಗವನ್ನು ಹೊಂದಿರುವ ಉದಯ್ ಅಚಾರ್ ಅಭಿಮಾನ್ಯು ವೇಷದ ಮೂಲಕ ಹೆಸರು ವಾಸಿಯಾಗಿದ್ದರು.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…