Featured

ನಿರಂತರ ಅಪಘಾತದ ತಾಣವಾಗುತ್ತಿರುವ ಕಟಪಾಡಿ ಜಂಕ್ಷನ್‌ : ಗಾಯಾಳುಗಳ ಜೀವ ರಕ್ಷಣೆಗೆ ಬೇಕಿದೆ ತುರ್ತು ಸೇವೆಯ ಆ್ಯಂಬುಲೆನ್ಸ್‌ – Vishwanews24

ನಿರಂತರ ಅಪಘಾತದ ತಾಣವಾಗುತ್ತಿರುವ ಕಟಪಾಡಿ ಜಂಕ್ಷನ್‌ : ಗಾಯಾಳುಗಳ ಜೀವ ರಕ್ಷಣೆಗೆ ಬೇಕಿದೆ ತುರ್ತು ಸೇವೆಯ ಆ್ಯಂಬುಲೆನ್ಸ್‌

ಕಟಪಾಡಿ: ನಿರಂತರ ಅಪಘಾತದ ತಾಣವಾಗುತ್ತಿರುವ ಕಟಪಾಡಿ ಜಂಕ್ಷನ್‌ನಲ್ಲಿ ಗಾಯಾಳುಗಳ ಜೀವ ರಕ್ಷಣೆಗೆ ಉಡುಪಿ ಅಥವಾ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲು ತುರ್ತು ಸೇವೆಯ ಆ್ಯಂಬುಲೆನ್ಸ್‌ ಆವಶ್ಯಕವಾಗಿ ಬೇಕಿದೆ ಎಂಬ ಸಾರ್ವಜನಿಕರ ಒತ್ತಾಯ ಕೇಳಿ ಬರುತ್ತಿದೆ.

ಕಟಪಾಡಿ, ಉದ್ಯಾವರ, ಕುರ್ಕಾಲು, ಶಂಕರಪುರ, ಬಂಟಕಲ್ಲು ಸಹಿತ ಪರಿಸರದ ಈ ಪ್ರದೇಶದಲ್ಲಿ ರಸ್ತೆ ಅವಘಡವು ಸಂಭವಿಸಿದಾಗ ಗಾಯಾಳುವಿನ ತುರ್ತು ರಕ್ಷಣೆಗೆ ರಿಕ್ಷಾ ಚಾಲಕರೇ ಮುಂದಾಗುತ್ತಿದ್ದು, ರಿಕ್ಷ ತುರ್ತು ಸೇವೆಯನ್ನು ನೀಡುವ ವಾಹನವಾಗಿ ಪರಿಣಮಿಸುತ್ತಿದೆ. ಆ ನಿಟ್ಟಿನಲ್ಲಿ ರಿಕ್ಷದವರ ಸೇವೆಯು ಅನನ್ಯವಾಗಿದೆ.

ಈ ಭಾಗದಲ್ಲಿ ಅಪಘಾತದಿಂದ ಗಾಯಗೊಂಡ ಗಾಯಾಳುಗಳ ಜೀವ ರಕ್ಷಣೆಗೆ ತುರ್ತು ಸೇವೆಯ ಆ್ಯಂಬುಲೆನ್ಸ್‌ ಅವಶ್ಯಕವಾಗಿ ಬೇಕಿದ್ದು, ಗಾಯಾಳುವಿಗೆ ತುರ್ತಾಗಿ ಬೇಕಾಗುವ ಪ್ರಥಮ ಚಿಕಿತ್ಸೆ, ಆಕ್ಸಿಜನ್‌ ವ್ಯವಸ್ಥೆ ಸಹಿತ ಮತ್ತಿತರ ಸೌಲಭ್ಯಗಳು ಲಭಿಸಿದಲ್ಲಿ ಗಾಯಾಳುಗಳ ಜೀವ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಲು ಸಾಧ್ಯವಾಗುತ್ತದೆ ಎಂದು ಸಾರ್ವಜನಿಕರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

ಡಿಸೆಂಬರ್‌ ತಿಂಗಳಲ್ಲಿಯೇ ಟಿಪ್ಪರ್‌ ಢಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರ ಉದ್ಯಾವರ ಬೊಳೆjಯ ಯುವಕ, ಬೈಕ್‌, ಕಾರು ಢಿಕ್ಕಿ ಹೊಡೆದು ಪಾದಚಾರಿಗಳು ಸಾವನ್ನಪ್ಪಿದ ಘಟನೆಯು ಕಟಪಾಡಿ ಜಂಕ್ಷನ್‌ ಪ್ರದೇಶದಲ್ಲಿ ಸಂಭವಿಸಿದೆ. ಉದ್ಯಾವರ ಪ್ರದೇಶದಲ್ಲಿಯೂ ಅಪಘಾತದಿಂದ ಸಾವು ನೋವುಗಳು ಸಂಭವಿಸಿದೆ. ಕುರ್ಕಾಲು, ಶಂಕರಪುರ, ಬಂಟಕಲ್ಲು ಪರಿಸರದಲ್ಲೂ ರಸ್ತೆ ಆವಘಡದಲ್ಲಿ ಸಾವು ನೋವುಗಳು ಸಂಭವಿಸಿವೆೆ.

ರಾಷ್ಟ್ರೀಯ ಹೆದ್ದಾರಿ 66ರ ಮಂಗಳೂರು ಮತ್ತು ಉಡುಪಿ ಪ್ರದೇಶದಿಂದ ಬರುವ ವಾಹನಗಳು ಹಾಗೂ ಬೆಳ್ಮಣ್‌, ಶಿರ್ವ, ಬಂಟಕಲ್ಲು, ಶಂಕರಪುರ ಹಾಗೂ ಮಣಿಪುರ ಭಾಗದಿಂದ ಬರುವ ವಾಹನಗಳು ಮತ್ತು ಮಟ್ಟು ಕಟಪಾಡಿ ಪೇಟೆಯೊಳಗಿಂದ ಬರುವ ವಾಹನಗಳು ಕಟಪಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿ 66ರ ಜಂಕ್ಷನ್‌ ಮೂಲಕ ಸಾಗಬೇಕಿದೆ. ಹಾಗಾಗಿ ಸಹಜವಾಗಿಯೇ ಬೆಳೆಯುತ್ತಿರುವ ಕಟಪಾಡಿಯಲ್ಲಿ ಸದಾ ವಾಹನ ದಟ್ಟಣೆ, ಜನದಟ್ಟಣೆಯು ಸಾಮಾನ್ಯವಾಗಿದ್ದು, ನಿಯಂತ್ರಣಕ್ಕೆ ಪೊಲೀಸರು ಶ್ರಮ ವಹಿಸುತ್ತಿದ್ದಾರೆ.

ಕಟಪಾಡಿಯಲ್ಲಿ ಅಂಡರ್‌ ಅಥವಾ ಓವರ್‌ ಪಾಸ್‌ ನಿರ್ಮಿಸಿ ಶಾಶ್ವತ ಪರಿಹಾರ ಕ್ರಮ ಕೈಗೊಳ್ಳಬೇಕು. ಜನ ಸಾಮಾನ್ಯರ ಜೀವದ ಮೌಲ್ಯವನ್ನು ಅರಿತು, ಜನಪ್ರತಿನಿಧಿಗಳು, ಅಧಿಕಾರಿಗಳು ಎಚ್ಚೆತ್ತು ಕಟಪಾಡಿ ಜಂಕ್ಷನ್‌ ಪ್ರದೇಶದಲ್ಲಿ ತುರ್ತು ಸೇವೆಯ ಆ್ಯಂಬುಲೆನ್ಸ್‌ ವಾಹನದ ಸೌಕರ್ಯವನ್ನು ಒದಗಿಸಿ ಅಪಘಾತದಿಂದ ಗಾಯಗೊಂಡ ಗಾಯಾಳುಗಳ ಜೀವ ರಕ್ಷಣೆಗೆ ಹೆಚ್ಚಿನ ಆದ್ಯತೆ-ಸುರಕ್ಷತೆಯನ್ನು ಕಲ್ಪಿಸಿಬೇಕೆಂದು ನಾಗರಿಕರು ಆಗ್ರಹಿಸುತ್ತಿದ್ದಾರೆ.

 

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 days ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

2 days ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

2 days ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 days ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 days ago