Featured

ನಿರಂತರ ಅಪಘಾತದ ತಾಣವಾಗುತ್ತಿರುವ ಕಟಪಾಡಿ ಜಂಕ್ಷನ್‌ : ಗಾಯಾಳುಗಳ ಜೀವ ರಕ್ಷಣೆಗೆ ಬೇಕಿದೆ ತುರ್ತು ಸೇವೆಯ ಆ್ಯಂಬುಲೆನ್ಸ್‌ – Vishwanews24

ನಿರಂತರ ಅಪಘಾತದ ತಾಣವಾಗುತ್ತಿರುವ ಕಟಪಾಡಿ ಜಂಕ್ಷನ್‌ : ಗಾಯಾಳುಗಳ ಜೀವ ರಕ್ಷಣೆಗೆ ಬೇಕಿದೆ ತುರ್ತು ಸೇವೆಯ ಆ್ಯಂಬುಲೆನ್ಸ್‌

ಕಟಪಾಡಿ: ನಿರಂತರ ಅಪಘಾತದ ತಾಣವಾಗುತ್ತಿರುವ ಕಟಪಾಡಿ ಜಂಕ್ಷನ್‌ನಲ್ಲಿ ಗಾಯಾಳುಗಳ ಜೀವ ರಕ್ಷಣೆಗೆ ಉಡುಪಿ ಅಥವಾ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲು ತುರ್ತು ಸೇವೆಯ ಆ್ಯಂಬುಲೆನ್ಸ್‌ ಆವಶ್ಯಕವಾಗಿ ಬೇಕಿದೆ ಎಂಬ ಸಾರ್ವಜನಿಕರ ಒತ್ತಾಯ ಕೇಳಿ ಬರುತ್ತಿದೆ.

ಕಟಪಾಡಿ, ಉದ್ಯಾವರ, ಕುರ್ಕಾಲು, ಶಂಕರಪುರ, ಬಂಟಕಲ್ಲು ಸಹಿತ ಪರಿಸರದ ಈ ಪ್ರದೇಶದಲ್ಲಿ ರಸ್ತೆ ಅವಘಡವು ಸಂಭವಿಸಿದಾಗ ಗಾಯಾಳುವಿನ ತುರ್ತು ರಕ್ಷಣೆಗೆ ರಿಕ್ಷಾ ಚಾಲಕರೇ ಮುಂದಾಗುತ್ತಿದ್ದು, ರಿಕ್ಷ ತುರ್ತು ಸೇವೆಯನ್ನು ನೀಡುವ ವಾಹನವಾಗಿ ಪರಿಣಮಿಸುತ್ತಿದೆ. ಆ ನಿಟ್ಟಿನಲ್ಲಿ ರಿಕ್ಷದವರ ಸೇವೆಯು ಅನನ್ಯವಾಗಿದೆ.

ಈ ಭಾಗದಲ್ಲಿ ಅಪಘಾತದಿಂದ ಗಾಯಗೊಂಡ ಗಾಯಾಳುಗಳ ಜೀವ ರಕ್ಷಣೆಗೆ ತುರ್ತು ಸೇವೆಯ ಆ್ಯಂಬುಲೆನ್ಸ್‌ ಅವಶ್ಯಕವಾಗಿ ಬೇಕಿದ್ದು, ಗಾಯಾಳುವಿಗೆ ತುರ್ತಾಗಿ ಬೇಕಾಗುವ ಪ್ರಥಮ ಚಿಕಿತ್ಸೆ, ಆಕ್ಸಿಜನ್‌ ವ್ಯವಸ್ಥೆ ಸಹಿತ ಮತ್ತಿತರ ಸೌಲಭ್ಯಗಳು ಲಭಿಸಿದಲ್ಲಿ ಗಾಯಾಳುಗಳ ಜೀವ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಲು ಸಾಧ್ಯವಾಗುತ್ತದೆ ಎಂದು ಸಾರ್ವಜನಿಕರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

ಡಿಸೆಂಬರ್‌ ತಿಂಗಳಲ್ಲಿಯೇ ಟಿಪ್ಪರ್‌ ಢಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರ ಉದ್ಯಾವರ ಬೊಳೆjಯ ಯುವಕ, ಬೈಕ್‌, ಕಾರು ಢಿಕ್ಕಿ ಹೊಡೆದು ಪಾದಚಾರಿಗಳು ಸಾವನ್ನಪ್ಪಿದ ಘಟನೆಯು ಕಟಪಾಡಿ ಜಂಕ್ಷನ್‌ ಪ್ರದೇಶದಲ್ಲಿ ಸಂಭವಿಸಿದೆ. ಉದ್ಯಾವರ ಪ್ರದೇಶದಲ್ಲಿಯೂ ಅಪಘಾತದಿಂದ ಸಾವು ನೋವುಗಳು ಸಂಭವಿಸಿದೆ. ಕುರ್ಕಾಲು, ಶಂಕರಪುರ, ಬಂಟಕಲ್ಲು ಪರಿಸರದಲ್ಲೂ ರಸ್ತೆ ಆವಘಡದಲ್ಲಿ ಸಾವು ನೋವುಗಳು ಸಂಭವಿಸಿವೆೆ.

ರಾಷ್ಟ್ರೀಯ ಹೆದ್ದಾರಿ 66ರ ಮಂಗಳೂರು ಮತ್ತು ಉಡುಪಿ ಪ್ರದೇಶದಿಂದ ಬರುವ ವಾಹನಗಳು ಹಾಗೂ ಬೆಳ್ಮಣ್‌, ಶಿರ್ವ, ಬಂಟಕಲ್ಲು, ಶಂಕರಪುರ ಹಾಗೂ ಮಣಿಪುರ ಭಾಗದಿಂದ ಬರುವ ವಾಹನಗಳು ಮತ್ತು ಮಟ್ಟು ಕಟಪಾಡಿ ಪೇಟೆಯೊಳಗಿಂದ ಬರುವ ವಾಹನಗಳು ಕಟಪಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿ 66ರ ಜಂಕ್ಷನ್‌ ಮೂಲಕ ಸಾಗಬೇಕಿದೆ. ಹಾಗಾಗಿ ಸಹಜವಾಗಿಯೇ ಬೆಳೆಯುತ್ತಿರುವ ಕಟಪಾಡಿಯಲ್ಲಿ ಸದಾ ವಾಹನ ದಟ್ಟಣೆ, ಜನದಟ್ಟಣೆಯು ಸಾಮಾನ್ಯವಾಗಿದ್ದು, ನಿಯಂತ್ರಣಕ್ಕೆ ಪೊಲೀಸರು ಶ್ರಮ ವಹಿಸುತ್ತಿದ್ದಾರೆ.

ಕಟಪಾಡಿಯಲ್ಲಿ ಅಂಡರ್‌ ಅಥವಾ ಓವರ್‌ ಪಾಸ್‌ ನಿರ್ಮಿಸಿ ಶಾಶ್ವತ ಪರಿಹಾರ ಕ್ರಮ ಕೈಗೊಳ್ಳಬೇಕು. ಜನ ಸಾಮಾನ್ಯರ ಜೀವದ ಮೌಲ್ಯವನ್ನು ಅರಿತು, ಜನಪ್ರತಿನಿಧಿಗಳು, ಅಧಿಕಾರಿಗಳು ಎಚ್ಚೆತ್ತು ಕಟಪಾಡಿ ಜಂಕ್ಷನ್‌ ಪ್ರದೇಶದಲ್ಲಿ ತುರ್ತು ಸೇವೆಯ ಆ್ಯಂಬುಲೆನ್ಸ್‌ ವಾಹನದ ಸೌಕರ್ಯವನ್ನು ಒದಗಿಸಿ ಅಪಘಾತದಿಂದ ಗಾಯಗೊಂಡ ಗಾಯಾಳುಗಳ ಜೀವ ರಕ್ಷಣೆಗೆ ಹೆಚ್ಚಿನ ಆದ್ಯತೆ-ಸುರಕ್ಷತೆಯನ್ನು ಕಲ್ಪಿಸಿಬೇಕೆಂದು ನಾಗರಿಕರು ಆಗ್ರಹಿಸುತ್ತಿದ್ದಾರೆ.

 

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

18 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

18 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago