ಮಂಗಳೂರು: ಸುರತ್ಕಲ್ ಎನ್ಐಟಿಕೆ ಬಳಿ ಇರುವ ಅಕ್ರಮ ಟೋಲ್ಗೇಟ್ ವಿರುದ್ಧ ನಿರಂತರ ಹೋರಾಟಕ್ಕೆ ಮಣಿದ ಕೇಂದ್ರ ಸರಕಾರ ಕೊನೆಗೂ ಟೋಲ್ಗೇಟ್ನ್ನು ಹೆಜಮಾಡಿ ಟೋಲ್ಗೇಟ್ನೊಂದಿಗೆ ವಿಲೀನಗೊಳಿಸಿ ಆದೇಶ ಹೊರಡಿಸಿದೆ.
ಸುರತ್ಕಲ್ ಟೋಲ್ ಸಂಗ್ರಹ ರದ್ದುಗೊಳಿಸಿರುವ ಕುರಿತು ಸಂಸದ ನಳಿನ್ ಕುಮಾರ್ ಕಟೀಲ್ ಸೋಮವಾರ ಟ್ವೀಟ್ ಮಾಡಿದ್ದಾರೆ. ಆದರೆ, ಈ ಟೋಲ್ ಸಂಗ್ರಹ ಸಂಪೂರ್ಣ ನಿಲ್ಲುವವರೆಗೂ ಹೋರಾಟ ಮುಂದುವರಿಸುವುದಾಗಿ ಟೋಲ್ಗೇಟ್ ವಿರೋಧಿ ಹೋರಾಟ ಸಮಿತಿ ಪ್ರತಿಕ್ರಿಯಿಸಿದೆ.
ಸ್ಯಾಂಡಲ್ ವುಡ್ ಹಿರಿಯ ನಿರ್ದೇಶಕ ಕೆ.ಆರ್. ಮುರಳಿಕೃಷ್ಣ ನಿಧನ – Vishwanews24
”ಸುರತ್ಕಲ್ ಸಮೀಪದ ಟೋಲ್ ಸಂಗ್ರಹ ಕೇಂದ್ರ ರದ್ದಾಗಿದ್ದು, ನಮ್ಮ ಮನವಿಗೆ ಸೂಕ್ತವಾಗಿ ಸ್ಪಂದಿಸಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ನಾಗರಿಕರ ಪರವಾಗಿ ಧನ್ಯವಾದಗಳು. ಟೋಲ್ ರದ್ದು ಮಾಡುವ ಭರವಸೆಯನ್ನು ಈ ಮೊದಲೇ ಕೇಂದ್ರ ಸಚಿವರು ನೀಡಿದ್ದು, ಈಗ ತಾಂತ್ರಿಕ ಅಂಶ ಪೂರೈಸಲಾಗಿದೆ” ಎಂದು ನಳಿನ್ ಕುಮಾರ್ ಕಟೀಲ್ ಟ್ವೀಟ್ ಮಾಡಿದ್ದಾರೆ.
ತೆಲುಗು ನಟ ಮಹೇಶ್ ಬಾಬು ತಂದೆ ಸೂಪರ್ ಸ್ಟಾರ್ ಕೃಷ್ಣ ವಿಧಿವಶ – Vishwanews24
ಸುರತ್ಕಲ್ನಲ್ಲಿಏಳು ವರ್ಷ ಹಿಂದೆ ಶುಲ್ಕ ವಸೂಲಿ ಕೇಂದ್ರ ಆರಂಭಿಸುವಾಗಲೇ ನಾಗರಿಕ ಸಂಘಟನೆಗಳ ತೀವ್ರ ವಿರೋಧ ವ್ಯಕ್ತವಾಗಿತ್ತು. ಇದರ ಫಲವಾಗಿ ಒಂದೆರಡು ತಿಂಗಳ ಕಾಲ ಟೋಲ್ ಸಂಗ್ರಹ ಸ್ಥಗಿತಗೊಂಡಿದ್ದರೂ, ಬಳಿಕ ನ್ಯಾಯಾಲಯದ ತೀರ್ಪಿನ ಹಿನ್ನೆಲೆಯಲ್ಲಿ ಮತ್ತೆ ಶುಲ್ಕ ಸಂಗ್ರಹ ಆರಂಭವಾಗಿತ್ತು. ಅದಾಗಿ ಒಂದು ವರ್ಷದಲ್ಲಿ 20 ಕಿಮೀ ಅಂತರದೊಳಗೆ ಹೆಜಮಾಡಿ ಟೋಲ್ಗೇಟ್ ಆರಂಭವಾದ ಬಳಿಕ ಸುರತ್ಕಲ್ ಟೋಲ್ ರದ್ದುಗೊಳಿಸುವ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿತ್ತು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…