ಕುಂದಾಪುರ: ನಿರೀಕ್ಷೆಗೂ ಮೀರಿದ ಜನ ಬೆಂಬಲ ವ್ಯಕ್ತವಾಗುತ್ತಿರುವುದು ಸಂತೋಷ ತಂದಿದೆ ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದ್ದಾರೆ. ಬೈಂದೂರಿನಲ್ಲಿ ಮಂಗಳವಾರ ಯೆಡ್ತೆರೆಯಿಂದ ಬೈಂದೂರಿನರೆಗೆ ಹಮ್ಮಿಕೊಳ್ಳಲಾದ ಕಾಂಗ್ರೆಸ್ ಕಾರ್ಯಕರ್ತರ ಕಾಲ್ನಡಿಗೆಯ ಮೆರವಣಿಗೆ ಬಳಿಕ ಸುದ್ಧಿಗಾರರೊಂದಿಗೆ ಮಾತನಾಡಿದರು.
ಯಾರು ಏನು ಬೇಕಾದರೂ ಹೇಳಲಿ. ಬಿಜೆಪಿಯಿಂದ ಜನಸಾಮಾನ್ಯರಿಗೆ ಆಗಿರುವ ಸಮಸ್ಯೆಗಳನ್ನು ಗ್ರಾಮೀಣ ಭಾಗದ ಮಹಿಳೆಯರೂ ಸೇರಿದಂತೆ ಎಲ್ಲಾ ವರ್ಗದ ಜನ ಅರಿತುಕೊಂಡಿದ್ದಾರೆ. ಹಿಂದೆಂದೂ ಕಾಣದ ಸಂಖ್ಯೆಯಲ್ಲಿ ಇಂದಿನ ಮೆರವಣಿಗೆಯಲ್ಲಿ ಕಾರ್ಯಕರ್ತರು ನನ್ನ ಜೊತೆಗೆ ಹೆಜ್ಜೆ ಹಾಕಿದ್ದಾರೆ. ಕಾಂಗ್ರೆಸ್ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತದೆ ಎಂದ ಅವರು ನನ್ನ ಕ್ಷೇತ್ರ ಮೀನುಗಾರರ ಸಮಸ್ಯೆ ಪರಿಹರಿಸುತ್ತೇನೆ ಎಂದರು.
ಈಗಾಗಲೇ ಒಂದು ಸುತ್ತಿನ ಕ್ಷೇತ್ರ ಬೇಟಿ ಮುಗಿದಿದೆ. ಪಕ್ಷದ ಭರವಸೆಗಳನ್ನು ಕಾರ್ಯಕರ್ತರು ಮನೆಮನೆಗೆ ತಲುಪಿಸುವ ಕೆಲಸ ಮಾಡಿದ್ದಾರೆ. ಈ ಬಾರಿ 35 ಸಾವಿರಕ್ಕೂ ಅಧಿಕ ಮತಗಳ ಅಂತರದಲ್ಲಿ ಗೆಲವು ಸಾಧಿಸುತ್ತೇನೆ ಎಂದರು ವಂಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ, ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮದನ್ ಕುಮಾರ್ ಮೊದಲಾದವರು ಇದ್ದರು.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…