Featured

ನಿರೂಪಣೆ ನೀವಿಲ್ಲದೆ ಅಪೂರ್ಣ : ಅನುಶ್ರೀ ಭಾವುಕ – vishwanews24

ಅಂದು ಇಂದು ಎಂದೆಂದಿಗೂ ಕನ್ನಡಕ್ಕೆ ಒಬ್ಬರೇ ಮಹಾ ನಿರೂಪಕಿ ಅದು ನೀವು  : ಅನುಶ್ರೀ ಭಾವುಕ

ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ  ಜು.11ರಂದು ನಿಧನರಾಗಿದ್ದಾರೆ. ಹಲವು ವರ್ಷಗಳಿಂದ ನಟಿ ಜೊತೆ ಬಾಂಧವ್ಯ ಹೊಂದಿರುವ ನಿರೂಪಕಿ ಅನುಶ್ರೀ  ಅವರು ಅಪರ್ಣಾ ನಿಧನಕ್ಕೆ ಭಾವುಕರಾಗಿದ್ದಾರೆ. ನಿರೂಪಣೆ ನೀವಿಲ್ಲದೇ ಅಪೂರ್ಣ ಎಂದು ಕಂಬನಿ ಮಿಡಿದಿದ್ದಾರೆ.

ನಿರೂಪಣೆಗೆ ಘನತೆ ನೀವು, ಕನ್ನಡಕ್ಕೆ ಶೋಭೆ, ನಿರೂಪಣೆ ನೀವಿಲ್ಲದೆ ಅಪೂರ್ಣ ಅಪರ್ಣ ಅಕ್ಕ ಎಂದಿದ್ದಾರೆ ಅನುಶ್ರೀ. ಈ ವಿಚಾರ ನೋವು ತಂದಿದೆ. ಬಿಗ್ ಬಾಸ್ ಕಾರ್ಯಕ್ರಮದಲ್ಲಿ ನಿಮ್ಮನ್ನು ಭೇಟಿಯಾದ ಕ್ಷಣ. ಇಂದಿಗೂ ಹಸಿರಾಗಿದೆ. ಅಂದು ಇಂದು ಎಂದೆಂದಿಗೂ ಕನ್ನಡಕ್ಕೆ ಒಬ್ಬರೇ ಮಹಾ ನಿರೂಪಕಿ ಅದು ನೀವು ಓಂ ಶಾಂತಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಅನುಶ್ರೀ ಬರೆದುಕೊಂಡಿದ್ದಾರೆ.

 

 

 

ಅಂದಹಾಗೆ, ಬಹಳ ದಿನಗಳಿಂದಲೂ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅಪರ್ಣಾ ಅವರು ಬನಶಂಕರಿ 2ನೇ ಹಂತದಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರು ದೂರದರ್ಶನದಲ್ಲಿ ಸೀನಿಯರ್ ಗ್ರೇಡ್ ನಿರೂಪಕಿಯಾಗಿದ್ದ ಅಪರ್ಣಾ, ಆಕಾಶವಾಣಿ ನಿರೂಪಕಿಯಾಗಿ ಕೆಲಸ ನಿರ್ವಹಿಸಿದ್ದರು. ಅಲ್ಲದೇ ಮಜಾ ಟಾಕೀಸ್ ಕಾರ್ಯಕ್ರಮದಲ್ಲೂ ಅಭಿನಯಿಸಿದ್ದರು. ಕನ್ನಡದ ಯಶಸ್ವಿ ನಿರೂಪಕಿಯಾಗಿ 3 ದಶಕಗಳನ್ನು ಪೂರೈಸಿದ್ದಾರೆ.

ಕಿರುತೆರೆಯಲ್ಲಿ ‘ಮೂಡಲಮನೆ’, ‘ಮುಕ್ತ’ ಮುಂತಾದ ಧಾರಾವಾಹಿಗಳಲ್ಲಿ ಅಭಿನಯಿಸಿದ್ದ ಅಪರ್ಣಾ, 2013 ರಲ್ಲಿ ಬಿಗ್‌ಬಾಸ್ ಕನ್ನಡದ ಮೊದಲ ಸೀಸನ್‌ನಲ್ಲಿ ಭಾಗವಹಿಸಿದ್ದರು. 2015 ರಲ್ಲಿ ಸೃಜನ್ ಲೋಕೇಶ್ ನೇತೃತ್ವದಲ್ಲಿ ಆರಂಭವಾದ ‘ಮಜಾ ಟಾಕೀಸ್’ ಕಾರ್ಯಕ್ರಮದಲ್ಲಿ ವರಲಕ್ಷ್ಮಿ ಪಾತ್ರ ಮಾಡಿ ಕನ್ನಡ ಕಲಾಪ್ರಿಯರ ಮನಗೆದ್ದಿದ್ದರು. 2014 ರಲ್ಲಿ ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಘೋಷಣೆಯಾಗುವ `ಪ್ರಯಾಣಿಕರು ಹತ್ತುವ ಮತ್ತು ಇಳಿಯುವ ಸೂಚನೆ’ಗೆ ಧ್ವನಿ ಗೂಡಿಸಿದ್ದರು.

Vishwa News 24

Recent Posts

USನಲ್ಲಿ ಹೆತ್ತತಾಯಿ-ತಮ್ಮನನ್ನೇ ಕೊಂದ ಭಾರತೀಯ ಮೂಲದ ಬಾಲಕ ; ಹತ್ಯೆಗೆ Chat GPT ಸೇರಿದಂತೆ AI ಬಳಕೆ ಆರೋಪ – vishwanews24

USನಲ್ಲಿ ಹೆತ್ತತಾಯಿ-ತಮ್ಮನನ್ನೇ ಕೊಂದ ಭಾರತೀಯ ಮೂಲದ ಬಾಲಕ .. ಹತ್ಯೆಗೆ Chat GPT ಸೇರಿದಂತೆ AI ಬಳಕೆ ಆರೋಪ ವಾಷಿಂಗ್ಟನ್:…

6 minutes ago

ಮಂಗಳೂರು : ಸ್ಕೂಟರ್ ಗೆ ಕಾರು ಡಿಕ್ಕಿ ; ಸವಾರ ಮೃತ್ಯು – vishwanews24

ಮಂಗಳೂರು : ಸ್ಕೂಟರ್ ಗೆ ಕಾರು ಡಿಕ್ಕಿ ; ಸವಾರ ಮೃತ್ಯು ಮಂಗಳೂರು: ಸ್ಕೂಟರ್ ಗೆ ಕಾರು ಡಿಕ್ಕಿ ಹೊಡೆದ…

20 minutes ago

ಹೋಟೆಲ್ ಬಳಿಕ ಇದೀಗ ಹಾಸ್ಟೆಲ್‌ಗಳಲ್ಲಿ ಆಹಾರ ತಪಾಸಣೆಗೆ  ಖಾದರ್ ಸೂಚನೆ – vishwanews24

ಹೋಟೆಲ್ ಬಳಿಕ ಇದೀಗ ಹಾಸ್ಟೆಲ್‌ಗಳಲ್ಲಿ ಆಹಾರ ತಪಾಸಣೆಗೆ  ಖಾದರ್ ಸೂಚನೆ ಬೆಂಗಳೂರು: ಹೋಟೆಲ್ ರೇಡ್ ಬಳಿಕ ಇದೀಗ ಹಾಸ್ಟೆಲ್‌ಗಳಲ್ಲಿ ಆಹಾರ…

32 minutes ago

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

18 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

18 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

18 hours ago